AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಭಿಕ್ಷಾಟನೆ; ಕ್ಷಮೆಯಾಚಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ

ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ ಹಾಸನ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ ಸಿಟಿ ರವಿ, ಬಳಸಿರುವ ಭಾಷೆ ಗೌರವ ತರುವಂತದಲ್ಲ. ಅದನ್ನ ನಾನು ಖಂಡಿಸುತ್ತೇನೆ. ಅವಹೇಳನ-ಅಪಮಾನ ಮಾಡುವ ರೀತಿ ಡಿಸಿ ಸರ್ಕ್ಯೂಲರ್ ಹೊರಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಭಿಕ್ಷಾಟನೆ; ಕ್ಷಮೆಯಾಚಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ
ಬಿಜೆಪಿ ನಾಯಕ ಸಿಟಿ ರವಿ, ದತ್ತ ಮಾಲಾಧಾರಿಗಳಿಂದ ಭಿಕ್ಷಾಟನೆ
TV9 Web
| Edited By: |

Updated on: Dec 18, 2021 | 11:49 AM

Share

ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಭಿಕ್ಷಾಟನೆ ನಡೆಸಿದರು. ಚಿಕ್ಕಮಗಳೂರು ನಗರದ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆಯಲ್ಲಿ ಇತರೆ ದತ್ತಮಾಲಾಧಾರಿಗಳ ಜೊತೆ ಸಿಟಿ ರವಿ ಪಡಿ ಸಂಗ್ರಹಿಸಿದರು. ಈ ವೇಳೆ ಅಕ್ಕಿ, ಬೆಲ್ಲ, ಎಲೆ, ಅಡಿಕೆ, ಕೊಬ್ಬರಿ, ಬಾಳೆಹಣ್ಣುಗಳನ್ನ ದತ್ತಮಾಲಾಧಾರಿಗಳಿಗೆ ಸ್ಥಳೀಯರು ನೀಡಿದರು. ಜನರಿಂದ ಪಡೆದ ಪಡಿಯನ್ನ ಇರುಮುಡಿ ರೂಪದಲ್ಲಿ ನಾಳೆ ದತ್ತಾತ್ರೇಯನಿಗೆ ದತ್ತಮಾಲಾಧಾರಿಗಳು ಅರ್ಪಿಸಲಿದ್ದಾರೆ. ಭಿಕ್ಷಾಟನೆ ಬಳಿಕ ಮಾತನಾಡಿದ ಸಿಟಿ ರವಿ, ಬ್ರಹ್ಮ ವಿಷ್ಣು ಮಹೇಶ್ವರರ ಅವಿರ್ಭಾವ ರೂಪದೇ ದತ್ತಾತ್ರೇಯರು.

ದತ್ತಾತ್ರೇಯರನ್ನ ಅವಧೂತ ಪರಂಪರೆ ಅಂತಾ ಗುರುತಿಸಲಾಗುತ್ತದೆ. ಅವಧೂರ ಪರಂಪರೆಯವರು ಭಿಕ್ಷಾಟನೆ ಮಾಡಿ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದರು. ದತ್ತಜಯಂತಿ ಹಿನ್ನೆಲೆಯಲ್ಲಿ ನಾವು ಭಿಕ್ಷಾಟನೆ ಮಾಡಿದ್ದೇವೆ, ನಾಳೆ ದತ್ತಾತ್ರೇಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದೇವೆ ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯಿಸಿದರು.

ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ ಹಾಸನ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ ಸಿಟಿ ರವಿ, ಬಳಸಿರುವ ಭಾಷೆ ಗೌರವ ತರುವಂತದಲ್ಲ. ಅದನ್ನ ನಾನು ಖಂಡಿಸುತ್ತೇನೆ. ಅವಹೇಳನ-ಅಪಮಾನ ಮಾಡುವ ರೀತಿ ಡಿಸಿ ಸರ್ಕ್ಯೂಲರ್ ಹೊರಡಿಸಿದ್ದಾರೆ. ಆ ರೀತಿ ಸರ್ಕ್ಯೂಲರ್ ಹೊರಡಿಸಿರುವ ಡಿಸಿ ಅವರಿಗೆ ತಪ್ಪು ಕಲ್ಪನೆ ತೋರಿಸುತ್ತದೆ. ಕೂಡಲೇ ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ ಅಂತಾ ಸಿಟಿ ರವಿ ಹೇಳಿದ್ದಾರೆ.

ಸಾವಿರಾರು ದತ್ತಮಾಲಾಧಾರಿಗಳು ಬೇಲೂರು ಮೂಲಕ ಚಿಕ್ಕಮಗಳೂರಿನ ದತ್ತಪೀಠಕ್ಕೆ ಹೋಗಲಿದ್ದು, ಬರುವಾಗ ವಾಹನಗಳನ್ನ ನಿಲ್ಲಿಸಿಕೊಂಡು ಮದ್ಯ ಸೇವನೆ ಮಾಡಿಕೊಂಡು, ಅನ್ಯ ಧರ್ಮಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಘೋಷಣೆ ಕೂಗು ಸಾಧ್ಯತೆಯಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಬೇಲೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ ಮಾಡಿದ್ದರು. ಇದು ರಾಜ್ಯಾದ್ಯಂತ ಇರುವ ದತ್ತಮಾಲಾಧಾರಿಗಳಲ್ಲಿ ಆಕ್ರೋಶ ಹೆಚ್ಚುವಂತೆ ಮಾಡಿತ್ತು.

ಇನ್ನೂ ಇದೇ ವೇಳೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಬಗ್ಗೆ ಮಾತನಾಡಿದ ಸಿಟಿ ರವಿ, ಕೆಲವರು ಅರಾಜಕತೆ-ಸಂಘರ್ಷ ಸೃಷ್ಠಿಸಲು ಸಂಚು ರೂಪಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಟ್ಟರು, ಅಲ್ಲಿನ ಸರ್ಕಾರದಲ್ಲಿ ಕಾಂಗ್ರೆಸ್ ಕೂಡ ಪಾಲುದಾರಿಕೆ ಹೊಂದಿದೆ. ಇಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿಯುವ ಕೆಲಸ ಮಾಡಿದ್ದತು. ಈ ಕಿಡಿಗೇಡಿಗಳ ಉದ್ದೇಶ ಕರ್ನಾಟಕ-ಮಹಾರಾಷ್ಟ್ರ ಸಂಘರ್ಷ ಆಗಲಿ ಅನ್ನೋ ಸಂಚು. ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಮರಾಠಿಗರು ಇದ್ದಾರೆ. ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ. ರಾಷ್ಟ್ರೀಯ ಹಿತಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತ್ರ ನಡೆಸಿದ್ದಾರೆ. ಈ ಷಡ್ಯಂತ್ರಕ್ಕೆ ಅವಕಾಶ ನೀಡದೇ, ಅರಾಜಕಾತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೇ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಸಿಟಿ ರವಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ

ಒಬ್ಬ ವ್ಯಕ್ತಿಗೆ ಏಕಕಾಲಕ್ಕೆ ಡೆಲ್ಟಾ ಮತ್ತು ಒಮಿಕ್ರಾನ್​ ಸೋಂಕು ತಗುಲಿದರೆ ಏನಾಗುತ್ತದೆ? ಆರೋಗ್ಯ ತಜ್ಞರು ನೀಡಿದ ಉತ್ತರ ಭಯಹುಟ್ಟಿಸುವಂತಿದೆ !

ಜನಪ್ರತಿನಿಧಿಗಳೇ ಎಚ್ಚರವಿರಲಿ : ‘ಮಲಗಿ ಆನಂದಿಸುವುದು’ ಹೆಂಗಸರಿಗೆ ಅನಿವಾರ್ಯವಾಗಿರುವುದು ಕುಟುಂಬದಲ್ಲೇ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ