AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CT Ravi: ಲಿಂಗಾಯತ ಕುರಿತ ಹೇಳಿಕೆ ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯ ಸೃಷ್ಟಿ; ಸಿಟಿ ರವಿ ಸ್ಪಷ್ಟನೆ

ಲಿಂಗಾಯತರ ಮತ ಬೇಕಾಗಿಲ್ಲ ಎಂಬರ್ಥದಲ್ಲಿ ಮಾತನಾಡಲಾಗಿದೆ ಎಂಬ ಹೇಳಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಸ್ಪಷ್ಟನೆ ನೀಡಿದ್ದು, ಅದು ಕಾಂಗ್ರೆಸ್​ನ ಸುಳ್ಳಿನ ಕಾರ್ಖಾನೆಯ ಸೃಷ್ಟಿ ಎಂದು ಆರೋಪಿಸಿದ್ದಾರೆ.

ಗಣಪತಿ ಶರ್ಮಾ
|

Updated on:Mar 16, 2023 | 9:35 PM

Share

ಚಿಕ್ಕಮಗಳೂರು: ಲಿಂಗಾಯತರ ಮತ ಬೇಕಾಗಿಲ್ಲ ಎಂಬರ್ಥದಲ್ಲಿ ಮಾತನಾಡಲಾಗಿದೆ ಎಂಬ ಹೇಳಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಗುರುವಾರ ಸ್ಪಷ್ಟನೆ ನೀಡಿದ್ದು, ಅದು ಕಾಂಗ್ರೆಸ್​ನ ಸುಳ್ಳಿನ ಕಾರ್ಖಾನೆಯ ಸೃಷ್ಟಿ ಎಂದು ಆರೋಪಿಸಿದ್ದಾರೆ. ಇವುಗಳೆಲ್ಲ ಸುಳ್ಳು ಸುದ್ದಿಗಳು. ನಾನು ಕನಸಿನಲ್ಲೂ ಜಾತಿ ರಾಜಕಾರಣ ಮಾಡಿದವನಲ್ಲ. ಜಾತಿಯ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಲಿಂಗಾಯತ ವಿರೋಧಿ ಭಾವನೆ ಹುಟ್ಟು ಹಾಕುವ ಕೆಲಸವನ್ನು ಕಾಂಗ್ರೆಸ್​ನವರು ಮಾಡುತ್ತಿದ್ದಾರೆ. ಇದು ಸಂಪೂರ್ಣ ಕಾಂಗ್ರೆಸ್​ ಕೈವಾಡ. ಆದರೆ, ನಾನು ಏನು ಅನ್ನುವುದು ಜನರಿಗೆ ಗೊತ್ತಿದೆ. ಇಂತಹ ಸುಳ್ಳು ಸುದ್ದಿಯಿಂದ ಹೊರಗಿನವರಿಗೆ ಗೊಂದಲ ಸೃಷ್ಟಿ ಮಾಡಬಹುದಷ್ಟೇ ವಿನಃ ಒಳಗಿನವರನ್ನು ಏನೂ ಮಾಡಲಾಗದು. ನಮ್ಮವರಿಗೆ ಎಲ್ಲವೂ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆಯೂ ನನ್ನ ವಿರುದ್ಧ ಇಂತಹ ಪ್ರಯತ್ನವನ್ನು ಮಾಡಿ ವಿಫಲರಾಗಿದ್ದರು. ಅದೇ ರೀತಿ ಈಗಲೂ ಒಂದು ಗೊಂದಲ, ಸುಳ್ಳು ಸುದ್ದಿಯನ್ನು ಸೃಷ್ಟಿ ಮಾಡಿ ಹಬ್ಬಿಸಿದ್ದಾರೆ. ನಾನು ಆ ರೀತಿ ಹೇಳಿಕೆ ನೀಡಿದ್ದರೆ ಕ್ಷಮೆಯಾಚನೆ ಮಾಡುತ್ತಿದ್ದೆ. ಜನರು ಜಾತಿಮೀರಿ ಮತನೀಡಿ ನನ್ನನ್ನು ಗೆಲ್ಲಿಸಿದ್ದಾರೆ ಎಂದು ಸಿಟಿ ರವಿ ಹೇಳಿದ್ದಾರೆ.

ಅಭಿವೃದ್ಧಿ ಕೆಲಸದ ವಿಚಾರಕ್ಕೆ ಸಂಬಂಧಿಸಿ ಚರ್ಚೆ ಮಾಡಲಾಗುವುದಿಲ್ಲ ಎಂದು ಜಾತಿ ಹೆಸರಿನಲ್ಲಿ ಒಡಕು ಮೂಡಿಸಲು ಸುಳ್ಳಿನ ಫ್ಯಾಕ್ಟರಿ ಮೂಲಕ ದಾಳ ಉರುಳಿಸಿದ್ದಾರೆ. ಸುಳ್ಳು ಸುದ್ದಿಯನ್ನು ಯಾರು ಹಬ್ಬಿಸಿದ್ದಾರೋ ಅವರ ವಿರುದ್ಧ ದೂರು ನೀಡಲಾಗಿದೆ. ಷಡ್ಯಂತರದ ಭಾಗವಾಗಿ ಇದನ್ನು ಮಾಡಿದ್ದಾರೆ ಎಂದು ರವಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಟಿ ರವಿ ವಿರುದ್ಧ ಸಿಡಿದೆದ್ದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಕಂಡಲ್ಲಿ ಮುತ್ತಿಗೆ ಹಾಕಲು ಕರೆ

ನಮಗೆ ಲಿಂಗಾಯತ ಮತಗಳು ಬೇಕಾಗಿಲ್ಲ ಎಂದು ಸಿಟಿ ರವಿ ಹೇಳಿದ್ದಾರೆ ಎನ್ನಲಾಗಿದ್ದು, ಆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು. ಇದು ಬಿಜೆಪಿ ಆಂತರಿಕ ವಲಯದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು.

ಪರಿಣಾಮವಾಗಿ ಚಿಕ್ಕಮಗಳೂರಿನಲ್ಲಿ ವೀರಶೈವ ಲಿಂಗಾಯತರು ಸಿಟಿ ರವಿ ವಿರುದ್ಧ ಸಿಡಿದೆದ್ದಿದ್ದು, ಸಿಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿಟಿ ರವಿ’ ಎಂದು ಘೋಷಣೆ ಕೂಗಬೇಕು ಪತ್ರಿಕಾ ಪ್ರಕಟಣೆ ಮೂಲಕ ಕರೆ ಕೊಟ್ಟಿದ್ದರು. ರವಿ ಅವರು ಲಿಂಗಾಯತ ಸಮಾಜದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಒಂದು ವಾರದಲ್ಲಿ ಅವರ ಮನೆಗೆ ಮುತ್ತಿಗೆ ಹಾಕಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಪ್ರತಿಕ್ರಿಯೆ ನೀಡಿದ್ದ ಬಿಎಸ್ ಯಡಿಯೂರಪ್ಪ, ಅವರು ಹಾಗೆಲ್ಲ ಹೇಳಿಕೆ ನೀಡಬಾರದು. ಅವರನ್ನು ಕರೆಸಿ ಮಾತನಾಡುತ್ತೇನೆ ಎಂದು ತಿಳಿಸಿದ್ದರು. ಆ ರಿತಿಯ ಯಾರೂ ಮಾತನಾಡಬಾರದು. ಪಕ್ಷವನ್ನು ಅಧಿಕಾರಕ್ಕೆ ತರಬೇಕಾದರೆ ಎಲ್ಲರ ಸಹಕಾರವೂ ಮುಖ್ಯ. ಸಿಟಿ ರವಿ ಆ ರೀತಿಯ ಹೇಳಿಕೆ ನೀಡಿದ್ದಾರೆ ಎಂದಾದರೆ ಅದು ತಪ್ಪು. ಅವರನ್ನು ಕರೆಸಿಕೊಂಡು ಮಾತನಾಡುವೆ ಎಂದು ಹೇಳಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:30 pm, Thu, 16 March 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ