AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಗುರೂಜಿಗೂ ತಟ್ಟಿದ ಸೈಬರ್ ಕಳ್ಳರ ಕಾಟ, ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಡಿಮ್ಯಾಂಡ್

ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿನಯ್ ಗುರೂಜಿ ಹೆಸರಲ್ಲಿ ಫೇಕ್ ಅಕೌಂಟ್ ಸೃಷ್ಟಿ ಮಾಡಿ ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ.

ವಿನಯ್ ಗುರೂಜಿಗೂ ತಟ್ಟಿದ ಸೈಬರ್ ಕಳ್ಳರ ಕಾಟ, ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಡಿಮ್ಯಾಂಡ್
ವಿನಯ್ ಗುರೂಜಿ
ಆಯೇಷಾ ಬಾನು
| Edited By: |

Updated on:May 23, 2023 | 3:16 PM

Share

ಚಿಕ್ಕಮಗಳೂರು: ಟೆಕ್ನಾಲಜಿ ಬೆಳೆಯುತ್ತಿದ್ದಂತೆ ಮೋಸ, ವಂಚನೆಗಳ ಜಾಲ ಕೂಡ ಬೆಳೆಯುತ್ತಿದೆ. ನಿನ್ನೆಯಷ್ಟೆ ವಿಜಯನಗರ ಎಸ್​ಪಿ(Vijayanagara SP) ಹರಿಬಾಬು ಅವರ ಹೆಸರಿನಲ್ಲಿ ನಕಲಿ ಫೇಸ್​​ಬುಕ್ ಅಕೌಂಟ್​​ ತೆರೆದು ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂಬ ಬಗ್ಗೆ ಪ್ರಕರಣ ದಾಖಲಾಗಿತ್ತು. ಈಗ ಇದೇ ರೀತಿಯ ಪ್ರಕರಣ ಮರುಕಳಿಸಿದೆ. ಅವಧೂತ ವಿನಯ್ ಗುರೂಜಿ(Vinay Guruji) ಹೆಸರಲ್ಲಿ ಖದೀಮರು ನಕಲಿ ಅಕೌಂಟ್ ಸೃಷ್ಟಿಸಿ ಹಣ ವಸೂಲಿ ಮಾಡುತ್ತಿದ್ದು ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿನಯ್ ಗುರೂಜಿ ಹೆಸರಲ್ಲಿ ಫೇಕ್ ಅಕೌಂಟ್ ಸೃಷ್ಟಿ ಮಾಡಿ ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ. ಕಿಡಿಗೇಡಿಗಳು ಭಯ ಹುಟ್ಟಿಸುವ ರೀತಿ ಮೆಸೇಜ್​ಗಳನ್ನು ಮಾಡಿ ಹಣ ಸುಲಿಗೆಗೆ ಮುಂದಾಗಿದ್ದಾರೆ. 45 ದಿನ ನಿಮಗೆ ಗಂಡಾಂತರ ಇದೆ. ಕಾಳ ಸರ್ಪ ದೋಷವಿದೆ ನಿಮಗೆ ಎಂದು ಸುಳ್ಳು ಸುಳ್ಳು ಮೆಸೇಜ್ ಕಳಿಸಿ, ಭಯ ಹುಟ್ಟಿಸಿ ಹಣಕ್ಕೆ ಡಿಮ್ಯಾಂಡ್ ಮಾಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆಶ್ರಮದ ಸಿಬ್ಬಂದಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಾಗೂ ಆಶ್ರಮಕ್ಕೂ ಈ ಅಕೌಂಟ್​ಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ‌‌ ನೀಡಿದ್ದಾರೆ. ಮತ್ತೊಂದೆಡೆ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿದ್ದು ಫೇಕ್ ಅಕೌಂಟ್ ನಿಂದ ಹಣ ಕೇಳಿದ್ರೆ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳಿಗೂ ಹ್ಯಾಕರ್ಸ್ ಕಾಟ: ವಿಜಯನಗರ ಎಸ್ಪಿ ಹೆಸರಲ್ಲಿ ನಕಲಿ ಖಾತೆ , ಹಣಕ್ಕೆ ಬೇಡಿಕೆ!

ಹಿಂದೂ ಕಾರ್ಯಕರ್ತರಿಗಾಗಿ ಸಹಾಯವಾಣಿ ತೆರೆದ ಶ್ರೀರಾಮಸೇನೆ

ಬೆಂಗಳೂರು: ಹಿಂದೂಪರ ಕಾರ್ಯಕರ್ತರಿಗಾಗಿ ಸಹಾಯವಾಣಿ ಓಪನ್​ ಮಾಡಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಹಿಂದೂಪರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನ ಖಂಡಿಸಿ ಮತ್ತು ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲು ರಾಜ್ಯ ಶ್ರೀರಾಮಸೇನೆ ಸಂಘಟನೆಯ ಪ್ರಮುಖರ ಸಂಪರ್ಕಕ್ಕಾಗಿ ಅಧಿಕೃತ ನಂಬರನ್ನು ಬಿಡುಗಡೆ ಮಾಡಲಾಗಿದೆ. ಹಿಂದೂಪರ ಕಾರ್ಯಕರ್ತರು ಈ ನಂಬರ್ ಗೆ ಕರೆ ಮಾಡಿ 9945288819 ಮಾಹಿತಿ ನೀಡಬಹುದು. ವರ್ಷದ 365 ದಿನವು, ದಿನದ 24 ಗಂಟೆ ಈ ನಂಬರ್​ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 1:07 pm, Tue, 23 May 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?