AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರಿನ ಕುದುರೆಮುಖದಲ್ಲಿ ಪೊಲೀಸ್ ಪೇದೆಯಿಂದ ಹಲ್ಲೆಗೊಳಗಾದ ದಲಿತ ಯುವಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ, ಆತನ ವಾಹನವನ್ನು ವಶಪಡಿಸಿಕೊಂಡಿದ್ದರು. ಈ ಘಟನೆಯಿಂದ ಮನನೊಂದ ನಾಗೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ ಆದರೆ ಗ್ರಾಮಸ್ಥರು ಇನ್ನಷ್ಟು ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.

ಚಿಕ್ಕಮಗಳೂರು: ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಆತ್ಮಹತ್ಯೆಗೆ ಶರಣು
ಪಿಸಿ ಸಿದ್ದೇಶ್​, ಮೃತ ನಾಗೇಶ್​
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Aug 13, 2025 | 6:31 PM

Share

ಚಿಕ್ಕಮಗಳೂರು, ಆಗಸ್ಟ್​ 13: ಪೊಲೀಸರಿಂದ (Police) ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗೇಶ್ (29) ಮೃತ ಯುವಕ. ಕುದುರೆಮುಖ (Kudremukh) ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಹೊಡೆದಿದ್ದನು. ಅಲ್ಲದೇ, ನಾಗೇಶ್​ ವಿರುದ್ಧ ಸುಳ್ಳು ಎಫ್​ಐಆರ್ ಕೂಡ ದಾಖಲಿಸಿದ್ದರು. ಜೊತೆಗೆ ಆತನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್​ ಇಂದು (ಆ.13) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಾಗೇಶ್ ಕಳಸ ತಾಲೂಕಿನ ಬಸ್ತಿಗದ್ದೆ ನಿವಾಸಿಯಾಗಿದ್ದು, ಕಳಸ‌ ಸಮೀಪದ ಸಂಸೆ ಎಸ್ಟೇಟ್​ನಲ್ಲಿ ಜೀಪ್​ ಚಾಲಕನಾಗಿ ಕೆಲ ಮಾಡುತ್ತಿದ್ದರು. ಜುಲೈ 17 ರ ರಾತ್ರಿ ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ನಡುರಸ್ತೆಯಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿದ್ದನು. ಈ ವೇಳೆ ಜೀಪಿನಲ್ಲಿ ಬಂದ ನಾಗೇಶ್​, ಪಕ್ಕಕ್ಕೆ ಸರಿಯುವಂತೆ ಹೇಳಿದ್ದಾರೆ. ಇಷ್ಟಕ್ಕೆನೇ, ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ಯುವಕ ನಾಗೇಶ್​ನ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲದೇ, ಕರ್ತವ್ಯಕ್ಕೆ ಅಡ್ಡಿ, ಹಲ್ಲೆಗೆ ಯತ್ನಿಸಿದನೆಂದು ಎಂದು ಸುಳ್ಳು ಎಫ್​ಐಆರ್ ದಾಖಲಿಸಿದ್ದರು.

ಇದನ್ನೂ ಓದಿ: ಜ್ವರಕ್ಕೆ ಒಂದೇ ಗ್ರಾಮದ 3 ಮಕ್ಕಳು ಸಾವು, 20ಕ್ಕೂ ಅಧಿಕ ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ನ ದೌರ್ಜನ್ಯದ ಬಗ್ಗೆ ಯುವಕ ನಾಗೇಶ್ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ​ದೂರು ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್​ ಆಮ್ಟೆ ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಅತ್ತ ತನಿಖೆ ನಡೆಯುತ್ತಿದ್ದು, ಇತ್ತ ನಾಗೇಶ್​ ಬುಧಾವಾರ (ಆ.13) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ಪೊಲೀಸ್ ಪೇದೆ ಸಿದ್ದೇಶ್​ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್​ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Wed, 13 August 25

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?