AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ SDPI, PFI ಕೇಸ್​ಗೂ ಮರು ಜೀವ ನೀಡುತ್ತಾ? ದತ್ತಪೀಠ ಹೋರಾಟ ಪ್ರಕರಣದ ಆರೋಪಿ ಪ್ರಶ್ನೆ

ಏಳು ವರ್ಷದ ಹಿಂದಿನ ದತ್ತಪೀಠ ಹೋರಾಟ ಪ್ರಕರಣವನ್ನು ಮರು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಂದತಿಗೆ ಸಂಬಂಧಿಸಿದಂತೆ ಕೇಸ್​​ನ ಪ್ರಮುಖ ಆರೋಪಿ ತುಡುಕೂರು ಮಂಜು ಮಾತನಾಡಿ, ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪ್ರಕರಣಕ್ಕೆ ಮರುಜೀವ ನೀಡಿದೆ. ಹಿಂದೂ ಕಾರ್ಯಕರ್ತರ ಟಾರ್ಗೆಟ್ ಮಾಡಿ ಈ ರೀತಿ ಮಾಡುತ್ತಿದೆ ಎಂದರು.

ಸರ್ಕಾರ SDPI, PFI ಕೇಸ್​ಗೂ ಮರು ಜೀವ ನೀಡುತ್ತಾ? ದತ್ತಪೀಠ ಹೋರಾಟ ಪ್ರಕರಣದ ಆರೋಪಿ ಪ್ರಶ್ನೆ
ತುಡುಕೂರು ಮಂಜು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 05, 2024 | 10:42 AM

Share

ಚಿಕ್ಕಮಗಳೂರು, ಜನವರಿ 05: ಏಳು ವರ್ಷದ ಹಿಂದಿನ ದತ್ತಪೀಠ (Dattapeeta) ಹೋರಾಟ ಪ್ರಕರಣವನ್ನು ಮರು ತನಿಖೆ ನಡೆಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ ಎಂಬ ವಂದತಿಗೆ ಸಂಬಂಧಿಸಿದಂತೆ ಕೇಸ್​​ನ ಪ್ರಮುಖ ಆರೋಪಿ ತುಡುಕೂರು ಮಂಜು ಮಾತನಾಡಿ, ಪಿ.ಎಫ್.ಐ (PFI), ಎಸ್.ಡಿ.ಪಿ.ಐ (SDPI) ಮೇಲೂ ಸಾವಿರಾರು ಕೇಸ್​​ಗಳಿವೆ. ಎಷ್ಟೋ ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಸರ್ಕಾರ ಅವುಗಳಿಗೂ ಮರುಜೀವ ನೀಡುವ ಕೆಲಸ ಮಾಡುತ್ತಾ? ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಟಿವಿ9 ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ವಿಚಾರಣೆಗೆಂದು ಎರಡು ಬಾರಿ ಮಾತ್ರ ನ್ಯಾಯಾಲಯಕ್ಕೆ ಹೋಗಿದ್ದೇವೆ. ಇದು ಬಿಟ್ಟರೇ ಮತ್ತೆ ನ್ಯಾಯಾಲಯಕ್ಕೆ ಹೋಗಿಲ್ಲ. ಜಾಮೀನು ಪಡೆದಿದ್ದೇವೆ. 2021ರಲ್ಲಿ ಸರ್ಕಾರ ಪ್ರಕರಣ ವಾಪಸ್ ಪಡೆದಿಕೊಂಡಿತ್ತು ಎಂದು ಭಾವಿಸಿದ್ವಿ. ಆದರೆ, ರಾಜ್ಯ ಸರ್ಕಾರ ಈಗ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ ಎಂದರು.

ಇದನ್ನೂ ಓದಿ: ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಕೇಸ್​ ರೀ‌ ಓಪನ್: ಇದು ಅಪ್ಪಟ ಸುಳ್ಳು: ಸಿಎಂ ಸಿದ್ದರಾಮಯ್ಯ

ಪೊಲೀಸರು ಏಳು ವರ್ಷ ಏಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಏಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸರ್ಕಾರ ಹಳೇ ಎಲ್ಲಾ ಪ್ರಕರಣಗಳಿಗೂ ಮರುಜೀವ ನೀಡುತ್ತಾ ? ಎಲ್ಲಾ ರೀತಿಯ ಪ್ರಕರಣಗಳಿಗೂ ಮರುಜೀವ ನೀಡಿತ್ತಾ? ನಾವು ಹೋರಾಟ ಮಾಡುತ್ತೇವೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರೆ ಮಾಡಿ ಮಾತನಾಡಿದರು. ನಾವು ನಿಮ್ಮ ಜೊತೆ ಇದ್ದೇವೆ ಹೆದರಬೇಡಿ ಎಂದಿದ್ದಾರೆ ಎಂದು ತಿಳಿಸಿದರು.

ನಾನು ಇದೇ ಪ್ರಕರಣದಲ್ಲಿ ಜೈಲಿಗೂ ಹೋಗಿದ್ವಿ. ನಾವು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುತ್ತೇವೆ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರ ಪ್ರಕರಣಕ್ಕೆ ಮರುಜೀವ ನೀಡಿದೆ. ಹಿಂದೂ ಕಾರ್ಯಕರ್ತರ ಟಾರ್ಗೆಟ್ ಮಾಡಿ ಈ ರೀತಿ ಮಾಡುತ್ತಿದೆ. ದಕ್ಷಿಣ ಭಾರತದ ಅಯೋಧ್ಯೆ ಎಂದು ದತ್ತಪೀಠವನ್ನು ಕರೆಯುತ್ತಾರೆ. ರಾಮ ಮಂದಿರ ಉದ್ಘಾಟನೆ ಮುಸಲ್ಮಾನರಿಗೆ ಬಹಳಷ್ಟು ನೋವಿದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರಕ್ಕೆ ಸಹಿಸಲು ಆಗುತ್ತಿಲ್ಲ. ಮುಸಲ್ಮಾನರಿಗೆ ಆಗಿರುವ ನೋವಿಗೆ, ಈ ರೀತಿ ಪ್ರಕರಣಗಳಿಗೆ ಮರು ಜೀವ ಕೊಟ್ಟು ಮುಲಾಮು ಹಾಕುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​