AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ SDPI, PFI ಕೇಸ್​ಗೂ ಮರು ಜೀವ ನೀಡುತ್ತಾ? ದತ್ತಪೀಠ ಹೋರಾಟ ಪ್ರಕರಣದ ಆರೋಪಿ ಪ್ರಶ್ನೆ

ಏಳು ವರ್ಷದ ಹಿಂದಿನ ದತ್ತಪೀಠ ಹೋರಾಟ ಪ್ರಕರಣವನ್ನು ಮರು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಂದತಿಗೆ ಸಂಬಂಧಿಸಿದಂತೆ ಕೇಸ್​​ನ ಪ್ರಮುಖ ಆರೋಪಿ ತುಡುಕೂರು ಮಂಜು ಮಾತನಾಡಿ, ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪ್ರಕರಣಕ್ಕೆ ಮರುಜೀವ ನೀಡಿದೆ. ಹಿಂದೂ ಕಾರ್ಯಕರ್ತರ ಟಾರ್ಗೆಟ್ ಮಾಡಿ ಈ ರೀತಿ ಮಾಡುತ್ತಿದೆ ಎಂದರು.

ಸರ್ಕಾರ SDPI, PFI ಕೇಸ್​ಗೂ ಮರು ಜೀವ ನೀಡುತ್ತಾ? ದತ್ತಪೀಠ ಹೋರಾಟ ಪ್ರಕರಣದ ಆರೋಪಿ ಪ್ರಶ್ನೆ
ತುಡುಕೂರು ಮಂಜು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on: Jan 05, 2024 | 10:42 AM

ಚಿಕ್ಕಮಗಳೂರು, ಜನವರಿ 05: ಏಳು ವರ್ಷದ ಹಿಂದಿನ ದತ್ತಪೀಠ (Dattapeeta) ಹೋರಾಟ ಪ್ರಕರಣವನ್ನು ಮರು ತನಿಖೆ ನಡೆಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ ಎಂಬ ವಂದತಿಗೆ ಸಂಬಂಧಿಸಿದಂತೆ ಕೇಸ್​​ನ ಪ್ರಮುಖ ಆರೋಪಿ ತುಡುಕೂರು ಮಂಜು ಮಾತನಾಡಿ, ಪಿ.ಎಫ್.ಐ (PFI), ಎಸ್.ಡಿ.ಪಿ.ಐ (SDPI) ಮೇಲೂ ಸಾವಿರಾರು ಕೇಸ್​​ಗಳಿವೆ. ಎಷ್ಟೋ ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಸರ್ಕಾರ ಅವುಗಳಿಗೂ ಮರುಜೀವ ನೀಡುವ ಕೆಲಸ ಮಾಡುತ್ತಾ? ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಟಿವಿ9 ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ವಿಚಾರಣೆಗೆಂದು ಎರಡು ಬಾರಿ ಮಾತ್ರ ನ್ಯಾಯಾಲಯಕ್ಕೆ ಹೋಗಿದ್ದೇವೆ. ಇದು ಬಿಟ್ಟರೇ ಮತ್ತೆ ನ್ಯಾಯಾಲಯಕ್ಕೆ ಹೋಗಿಲ್ಲ. ಜಾಮೀನು ಪಡೆದಿದ್ದೇವೆ. 2021ರಲ್ಲಿ ಸರ್ಕಾರ ಪ್ರಕರಣ ವಾಪಸ್ ಪಡೆದಿಕೊಂಡಿತ್ತು ಎಂದು ಭಾವಿಸಿದ್ವಿ. ಆದರೆ, ರಾಜ್ಯ ಸರ್ಕಾರ ಈಗ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ ಎಂದರು.

ಇದನ್ನೂ ಓದಿ: ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಕೇಸ್​ ರೀ‌ ಓಪನ್: ಇದು ಅಪ್ಪಟ ಸುಳ್ಳು: ಸಿಎಂ ಸಿದ್ದರಾಮಯ್ಯ

ಪೊಲೀಸರು ಏಳು ವರ್ಷ ಏಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಏಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸರ್ಕಾರ ಹಳೇ ಎಲ್ಲಾ ಪ್ರಕರಣಗಳಿಗೂ ಮರುಜೀವ ನೀಡುತ್ತಾ ? ಎಲ್ಲಾ ರೀತಿಯ ಪ್ರಕರಣಗಳಿಗೂ ಮರುಜೀವ ನೀಡಿತ್ತಾ? ನಾವು ಹೋರಾಟ ಮಾಡುತ್ತೇವೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರೆ ಮಾಡಿ ಮಾತನಾಡಿದರು. ನಾವು ನಿಮ್ಮ ಜೊತೆ ಇದ್ದೇವೆ ಹೆದರಬೇಡಿ ಎಂದಿದ್ದಾರೆ ಎಂದು ತಿಳಿಸಿದರು.

ನಾನು ಇದೇ ಪ್ರಕರಣದಲ್ಲಿ ಜೈಲಿಗೂ ಹೋಗಿದ್ವಿ. ನಾವು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುತ್ತೇವೆ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರ ಪ್ರಕರಣಕ್ಕೆ ಮರುಜೀವ ನೀಡಿದೆ. ಹಿಂದೂ ಕಾರ್ಯಕರ್ತರ ಟಾರ್ಗೆಟ್ ಮಾಡಿ ಈ ರೀತಿ ಮಾಡುತ್ತಿದೆ. ದಕ್ಷಿಣ ಭಾರತದ ಅಯೋಧ್ಯೆ ಎಂದು ದತ್ತಪೀಠವನ್ನು ಕರೆಯುತ್ತಾರೆ. ರಾಮ ಮಂದಿರ ಉದ್ಘಾಟನೆ ಮುಸಲ್ಮಾನರಿಗೆ ಬಹಳಷ್ಟು ನೋವಿದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರಕ್ಕೆ ಸಹಿಸಲು ಆಗುತ್ತಿಲ್ಲ. ಮುಸಲ್ಮಾನರಿಗೆ ಆಗಿರುವ ನೋವಿಗೆ, ಈ ರೀತಿ ಪ್ರಕರಣಗಳಿಗೆ ಮರು ಜೀವ ಕೊಟ್ಟು ಮುಲಾಮು ಹಾಕುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ