AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ SDPI, PFI ಕೇಸ್​ಗೂ ಮರು ಜೀವ ನೀಡುತ್ತಾ? ದತ್ತಪೀಠ ಹೋರಾಟ ಪ್ರಕರಣದ ಆರೋಪಿ ಪ್ರಶ್ನೆ

ಏಳು ವರ್ಷದ ಹಿಂದಿನ ದತ್ತಪೀಠ ಹೋರಾಟ ಪ್ರಕರಣವನ್ನು ಮರು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಂದತಿಗೆ ಸಂಬಂಧಿಸಿದಂತೆ ಕೇಸ್​​ನ ಪ್ರಮುಖ ಆರೋಪಿ ತುಡುಕೂರು ಮಂಜು ಮಾತನಾಡಿ, ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪ್ರಕರಣಕ್ಕೆ ಮರುಜೀವ ನೀಡಿದೆ. ಹಿಂದೂ ಕಾರ್ಯಕರ್ತರ ಟಾರ್ಗೆಟ್ ಮಾಡಿ ಈ ರೀತಿ ಮಾಡುತ್ತಿದೆ ಎಂದರು.

ಸರ್ಕಾರ SDPI, PFI ಕೇಸ್​ಗೂ ಮರು ಜೀವ ನೀಡುತ್ತಾ? ದತ್ತಪೀಠ ಹೋರಾಟ ಪ್ರಕರಣದ ಆರೋಪಿ ಪ್ರಶ್ನೆ
ತುಡುಕೂರು ಮಂಜು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ವಿವೇಕ ಬಿರಾದಾರ|

Updated on: Jan 05, 2024 | 10:42 AM

Share

ಚಿಕ್ಕಮಗಳೂರು, ಜನವರಿ 05: ಏಳು ವರ್ಷದ ಹಿಂದಿನ ದತ್ತಪೀಠ (Dattapeeta) ಹೋರಾಟ ಪ್ರಕರಣವನ್ನು ಮರು ತನಿಖೆ ನಡೆಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ ಎಂಬ ವಂದತಿಗೆ ಸಂಬಂಧಿಸಿದಂತೆ ಕೇಸ್​​ನ ಪ್ರಮುಖ ಆರೋಪಿ ತುಡುಕೂರು ಮಂಜು ಮಾತನಾಡಿ, ಪಿ.ಎಫ್.ಐ (PFI), ಎಸ್.ಡಿ.ಪಿ.ಐ (SDPI) ಮೇಲೂ ಸಾವಿರಾರು ಕೇಸ್​​ಗಳಿವೆ. ಎಷ್ಟೋ ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಸರ್ಕಾರ ಅವುಗಳಿಗೂ ಮರುಜೀವ ನೀಡುವ ಕೆಲಸ ಮಾಡುತ್ತಾ? ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಟಿವಿ9 ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ವಿಚಾರಣೆಗೆಂದು ಎರಡು ಬಾರಿ ಮಾತ್ರ ನ್ಯಾಯಾಲಯಕ್ಕೆ ಹೋಗಿದ್ದೇವೆ. ಇದು ಬಿಟ್ಟರೇ ಮತ್ತೆ ನ್ಯಾಯಾಲಯಕ್ಕೆ ಹೋಗಿಲ್ಲ. ಜಾಮೀನು ಪಡೆದಿದ್ದೇವೆ. 2021ರಲ್ಲಿ ಸರ್ಕಾರ ಪ್ರಕರಣ ವಾಪಸ್ ಪಡೆದಿಕೊಂಡಿತ್ತು ಎಂದು ಭಾವಿಸಿದ್ವಿ. ಆದರೆ, ರಾಜ್ಯ ಸರ್ಕಾರ ಈಗ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ ಎಂದರು.

ಇದನ್ನೂ ಓದಿ: ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಕೇಸ್​ ರೀ‌ ಓಪನ್: ಇದು ಅಪ್ಪಟ ಸುಳ್ಳು: ಸಿಎಂ ಸಿದ್ದರಾಮಯ್ಯ

ಪೊಲೀಸರು ಏಳು ವರ್ಷ ಏಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಏಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸರ್ಕಾರ ಹಳೇ ಎಲ್ಲಾ ಪ್ರಕರಣಗಳಿಗೂ ಮರುಜೀವ ನೀಡುತ್ತಾ ? ಎಲ್ಲಾ ರೀತಿಯ ಪ್ರಕರಣಗಳಿಗೂ ಮರುಜೀವ ನೀಡಿತ್ತಾ? ನಾವು ಹೋರಾಟ ಮಾಡುತ್ತೇವೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರೆ ಮಾಡಿ ಮಾತನಾಡಿದರು. ನಾವು ನಿಮ್ಮ ಜೊತೆ ಇದ್ದೇವೆ ಹೆದರಬೇಡಿ ಎಂದಿದ್ದಾರೆ ಎಂದು ತಿಳಿಸಿದರು.

ನಾನು ಇದೇ ಪ್ರಕರಣದಲ್ಲಿ ಜೈಲಿಗೂ ಹೋಗಿದ್ವಿ. ನಾವು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುತ್ತೇವೆ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರ ಪ್ರಕರಣಕ್ಕೆ ಮರುಜೀವ ನೀಡಿದೆ. ಹಿಂದೂ ಕಾರ್ಯಕರ್ತರ ಟಾರ್ಗೆಟ್ ಮಾಡಿ ಈ ರೀತಿ ಮಾಡುತ್ತಿದೆ. ದಕ್ಷಿಣ ಭಾರತದ ಅಯೋಧ್ಯೆ ಎಂದು ದತ್ತಪೀಠವನ್ನು ಕರೆಯುತ್ತಾರೆ. ರಾಮ ಮಂದಿರ ಉದ್ಘಾಟನೆ ಮುಸಲ್ಮಾನರಿಗೆ ಬಹಳಷ್ಟು ನೋವಿದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರಕ್ಕೆ ಸಹಿಸಲು ಆಗುತ್ತಿಲ್ಲ. ಮುಸಲ್ಮಾನರಿಗೆ ಆಗಿರುವ ನೋವಿಗೆ, ಈ ರೀತಿ ಪ್ರಕರಣಗಳಿಗೆ ಮರು ಜೀವ ಕೊಟ್ಟು ಮುಲಾಮು ಹಾಕುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್