AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dattapeeta: ದತ್ತಜಯಂತಿ; ಚಿಕ್ಕಮಗಳೂರಿನ ಅಂಗಡಿ-ಮುಂಗಟ್ಟುಗಳು ಬಂದ್, ಸಂಚಾರ ನಿಷೇಧ​​

ದತ್ತಜಯಂತಿ ಕೊನೆಯ ದಿನವಾದ ಇಂದು (ಡಿ.26) ದತ್ತಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಪ್ರಮುಖ‌ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. . ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿರುವ ಎಲ್ಲಾ ಅಂಗಡಿಗಳು ಸೇರಿದಂತೆ ನಗರದ ಎಲ್ಲ ಹೋಟೆಲ್, ಅಂಗಡಿ-ಮುಗ್ಗಟ್ಟುಗಳನ್ನು ತೆರೆಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

Dattapeeta: ದತ್ತಜಯಂತಿ; ಚಿಕ್ಕಮಗಳೂರಿನ ಅಂಗಡಿ-ಮುಂಗಟ್ಟುಗಳು ಬಂದ್, ಸಂಚಾರ ನಿಷೇಧ​​
ದತ್ತಪೀಠ
TV9 Web
| Edited By: |

Updated on:Dec 26, 2023 | 8:04 AM

Share

ಚಿಕ್ಕಮಗಳೂರು, ಡಿಸೆಂಬರ್​ 26: ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ (Dattapeeta) ದತ್ತಜಯಂತಿ ನಡೆಯುತ್ತಿದೆ. ಕೊನೆಯ ದಿನವಾದ ಇಂದು (ಡಿ.26) ದತ್ತಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು (Chikkamagaluru) ನಗರದ ಪ್ರಮುಖ‌ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿರುವ ಎಲ್ಲಾ ಅಂಗಡಿಗಳು ಸೇರಿದಂತೆ ನಗರದ ಎಲ್ಲ ಹೋಟೆಲ್, ಅಂಗಡಿ-ಮುಗ್ಗಟ್ಟುಗಳನ್ನು ತೆರೆಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಆಲ್ದೂರು, ಬಣಕಲ್, ಕೊಟ್ಟಿಗೆಹಾರ, ಹಾಂದಿ, ವಾಸ್ತರೆ ಗ್ರಾಮಗಳು ಸಹ ಬಂದ್ ಇರಲಿವೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ದತ್ತಮಾಲಾಧಾರಿಗಳು ಶ್ರೀಗುರುದತ್ತಾತ್ರೇಯರ ದರ್ಶನಕ್ಕೆ ಆಗಮಿಸಿದ್ದಾರೆ. ಇಂದು (ಮಂಗಳವಾರ) ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ ಹೋಮ‌ ಪೂಜೆ ನೆರವೇರಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್​ (VHP), ಬಜರಂಗದಳ ನೇತೃತ್ವದಲ್ಲಿ ದತ್ತಜಯಂತಿ ನಡೆಯುತ್ತಿದೆ.

ಸರ್ಕಾರ ಮುಂದೆ ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮಸೇನೆ

1. ಕಾಣೆಯಾದ ಅಮೂಲ್ಯ ವಿಗ್ರಹಗಳ ಬಗ್ಗೆ ತನಿಖೆ ನಡೆಸಬೇಕು. 2. ದತ್ತಪೀಠದಲ್ಲಿ ಇಸ್ಲಾಂ ಚಟುವಟಿಕೆಗೆ ಅವಕಾಶ ನೀಡಬಾರದು. 3. ದತ್ತಪೀಠದಲ್ಲಿ ದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಬೇಕು. 4. ಉರ್ದು ನಾಮಫಲಕವನ್ನ ತೆಗೆಯಬೇಕು. 5. ದತ್ತಪೀಠದಲ್ಲಿರುವ ಗೋರಿಗಳ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:  ದತ್ತಪೀಠ, ದತ್ತಮಾಲೆ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆಯಾಚಿಸಿದ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ

ಹೆಸರಿನ ವಿವಾದ

ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರು. ಆ ಸ್ಥಳವನ್ನು ಇನಾಂ ದತ್ತಾತ್ರೇಯ ಪೀಠ, (ಐಡಿ ಪೀಠ) ಎಂದೂ ಹೆಸರಿಸುತ್ತಾರೆ. ಆದರೆ ಕೆಲವೆಡೆ ‘ಬಾಬಾಬುಡನ್​ಗಿರಿ’ ಎಂದೂ ಇನ್ನೂ ಕೆಲವೆಡೆ ದತ್ತಪೀಠ ಎಂದೂ ಕರೆಯುತ್ತಿದ್ದಾರೆ. ಈ ಹೆಸರಿನ ವಿಚಾರ ಸಣ್ಣದಲ್ಲ. ಯಾವ ಹೆಸರಿನಿಂದ ಕರೆಯಬೇಕು ಎಂಬ ಬಗ್ಗೆ ಹಿಂದೂ-ಮುಸ್ಲಿಂ ಧರ್ಮದ ಅನುಯಾಯಿಗಳ ನಡುವೆ ಹಲವು ದಶಕಗಳಿಂದಲೂ ನಿರಂತರವಾಗಿ ಹೋರಾಟ ನಡೆಯುತ್ತಲೇ ಇದೆ. ಹಿಂದೂ-ಮುಸ್ಲಿಂ ಭಾವೈಕ್ಯತಾ ಕೇಂದ್ರವಾಗಿರುವ ಈ ಸ್ಥಳದ ಉಮೇದುವಾರಿಕೆ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:41 am, Tue, 26 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್