AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಿನಲ್ಲಿ ಮಳೆಯ ಅಬ್ಬರ; ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಡಿಸಿ ಆದೇಶ

ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಕಾಫಿನಾಡಿನಲ್ಲಿ ಮಳೆಯ ಅಬ್ಬರ; ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಡಿಸಿ ಆದೇಶ
ಚಿಕ್ಕಮಗಳೂರು ಮಳೆ
TV9 Web
| Edited By: |

Updated on:Jul 15, 2022 | 5:49 PM

Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ(Chikmagalur Rains) ಮಳೆಯಿಂದಾಗಿ ಭಾರಿ ಅನಾಹುತ ಸೃಷ್ಟಿಯಾಗಿದೆ. ಕೆಲವೆಡೆ ಗುಡ್ಡ ಕುಸಿದ್ರೆ, ಮತ್ತೊಂದೆಡೆ ಗುರುತೇ ಸಿಗದಂತೆ ಹೆದ್ದಾರಿ ಕುಸಿದು ಹೋಗಿದೆ. ಹೀಗಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಮುಳ್ಳಯ್ಯನಗಿರಿ ಭಾಗದಲ್ಲಿ ನಿರಂತರ ಭೂಕುಸಿತ, ಗುಡ್ಡ ಕುಸಿತವಾಗುತ್ತಿದೆ. ಈ ಹಿಂದೆ ಜಿಲ್ಲೆಯ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಎಲ್ಲಾ ಜಲಪಾತಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಜಿಲ್ಲೆಯಾದ್ಯಂತ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ವಾಹನ ಸಂಚಾರ ನಿರ್ಬಂಧಿಸಿ ಡಿಸಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

$45 ಲಕ್ಷ ರೂ ಸಾಲ ಮಾಡಿ ಕಟ್ಟಿಸಿದ್ದ ಸೂರು ನಾಶ

ರಣಮಳೆಗೆ ಚಿಕ್ಕಮಗಳೂರು ಜಿಲ್ಲೆ ಅಕ್ಷರಶಃ ಥಂಡಾ ಹೊಡೆದಿದೆ. ಭಾರಿ ಮಳೆಯಿಂದಾಗಿ ಶೃಂಗೇರಿಯ ಸಾಹಿತಿ ಗಣೇಶ್ ಹೆಗ್ಡೆ ಎಂಬುವರ ಭವ್ಯವಾದ ಮನೆ ಗುಡ್ಡಕುಸಿತಕ್ಕೆ ಹೇಳತೀರದಷ್ಟು ಹಾನಿಯಾಗಿದೆ. ಅದೃಷ್ಟವಶಾತ್ ಗುಡ್ಡ ಕುಸಿತದ ಶಬ್ದ ಕೇಳಿಸ್ತಿದ್ದಂತೆ ಕುಟುಂಬಸ್ಥರು ಹೊರಗೋಡಿ ಬಂದಿದ್ದರಿಂದ ಪ್ರಾಣಹಾನಿ ತಪ್ಪಿದೆ. ಸಾಹಿತಿ ಗಣೇಶ್ ಹೆಗ್ಡೆ ಬಹಳ ಕಷ್ಟಪಟ್ಟು 45 ಲಕ್ಷ ರೂಪಾಯಿ ಸಾಲ ಮಾಡಿ ಮನೆ ಕಟ್ಟಿಸಿದ್ರಂತೆ. ಆದ್ರೆ ಪ್ರಕೃತಿ ವಿಕೋಪದ ಜೊತೆ ಅರಣ್ಯ ಇಲಾಖೆ ನಿರ್ಲಕ್ಷ್ಯ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿದೆ. ಮುಂದೇನು ಗತಿ ಅಂತಾ ಮನೆ ಮಾಲೀಕ ಬಿಕ್ಕಿ ಬಿಕ್ಕಿ ಅಳ್ತಿದ್ದಾರೆ. ಗಣೇಶ್ ಹೆಗ್ಡೆ ಅವರು 14 ಕಾದಂಬರಿಗಳನ್ನು ಬರೆದಿದ್ದು, ಮನೆಯಲ್ಲಿಟ್ಟಿದ್ದ 4,500 ಸಾವಿರಕ್ಕೂ ಹೆಚ್ಚು ಪುಸ್ತಕಗಳು ನಾಶವಾಗಿವೆ.

ಗುಡ್ಡದ ಭೂತಕ್ಕೆ ಹೆದ್ದಾರಿಯೇ ನಾಮಾವೇಶೇಷ ಗುಡ್ಡದ ಭೂತಕ್ಕೆ ಮನೆಗಳು ಮಾತ್ರವಲ್ಲ ಹೆದ್ದಾರಿಗಳೇ ಕೊಚ್ಚಿಹೋಗ್ತಿವೆ. ಭಾರಿ ಪ್ರಮಾಣದ ಗುಡ್ಡ ಕುಸಿತದಿಂದ ಶೃಂಗೇರಿಯಿಂದ ಆಗುಂಬೆಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯೇ ಕೊಚ್ಚಿಹೋಗಿದೆ. 200ಮೀಟರ್‌ಗೂ ಹೆಚ್ಚು ದೂರ ಡಾಂಬರಿನ ಇಡೀ ರಸ್ತೆ ಗುರುತೇ ಸಿಗದಂತೆ ನಾಮಾವೇಶೇಷವಾಗಿದೆ. ವಾಹನ ಸಂಚಾರ ವೇಳೆ ಈ ಅವಘಡ ಸಂಭವಿಸಿದ್ರೆ ಭಾರಿ ಪ್ರಾಣಹಾನಿಯೇ ಸಂಭವಿಸ್ತಿತ್ತು.

Published On - 5:49 pm, Fri, 15 July 22

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ