AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಿನಲ್ಲಿ ಮಳೆಯ ಅಬ್ಬರ; ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಡಿಸಿ ಆದೇಶ

ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಕಾಫಿನಾಡಿನಲ್ಲಿ ಮಳೆಯ ಅಬ್ಬರ; ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಡಿಸಿ ಆದೇಶ
ಚಿಕ್ಕಮಗಳೂರು ಮಳೆ
TV9 Web
| Updated By: ಆಯೇಷಾ ಬಾನು|

Updated on:Jul 15, 2022 | 5:49 PM

Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ(Chikmagalur Rains) ಮಳೆಯಿಂದಾಗಿ ಭಾರಿ ಅನಾಹುತ ಸೃಷ್ಟಿಯಾಗಿದೆ. ಕೆಲವೆಡೆ ಗುಡ್ಡ ಕುಸಿದ್ರೆ, ಮತ್ತೊಂದೆಡೆ ಗುರುತೇ ಸಿಗದಂತೆ ಹೆದ್ದಾರಿ ಕುಸಿದು ಹೋಗಿದೆ. ಹೀಗಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಮುಳ್ಳಯ್ಯನಗಿರಿ ಭಾಗದಲ್ಲಿ ನಿರಂತರ ಭೂಕುಸಿತ, ಗುಡ್ಡ ಕುಸಿತವಾಗುತ್ತಿದೆ. ಈ ಹಿಂದೆ ಜಿಲ್ಲೆಯ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಎಲ್ಲಾ ಜಲಪಾತಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಜಿಲ್ಲೆಯಾದ್ಯಂತ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ವಾಹನ ಸಂಚಾರ ನಿರ್ಬಂಧಿಸಿ ಡಿಸಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

$45 ಲಕ್ಷ ರೂ ಸಾಲ ಮಾಡಿ ಕಟ್ಟಿಸಿದ್ದ ಸೂರು ನಾಶ

ರಣಮಳೆಗೆ ಚಿಕ್ಕಮಗಳೂರು ಜಿಲ್ಲೆ ಅಕ್ಷರಶಃ ಥಂಡಾ ಹೊಡೆದಿದೆ. ಭಾರಿ ಮಳೆಯಿಂದಾಗಿ ಶೃಂಗೇರಿಯ ಸಾಹಿತಿ ಗಣೇಶ್ ಹೆಗ್ಡೆ ಎಂಬುವರ ಭವ್ಯವಾದ ಮನೆ ಗುಡ್ಡಕುಸಿತಕ್ಕೆ ಹೇಳತೀರದಷ್ಟು ಹಾನಿಯಾಗಿದೆ. ಅದೃಷ್ಟವಶಾತ್ ಗುಡ್ಡ ಕುಸಿತದ ಶಬ್ದ ಕೇಳಿಸ್ತಿದ್ದಂತೆ ಕುಟುಂಬಸ್ಥರು ಹೊರಗೋಡಿ ಬಂದಿದ್ದರಿಂದ ಪ್ರಾಣಹಾನಿ ತಪ್ಪಿದೆ. ಸಾಹಿತಿ ಗಣೇಶ್ ಹೆಗ್ಡೆ ಬಹಳ ಕಷ್ಟಪಟ್ಟು 45 ಲಕ್ಷ ರೂಪಾಯಿ ಸಾಲ ಮಾಡಿ ಮನೆ ಕಟ್ಟಿಸಿದ್ರಂತೆ. ಆದ್ರೆ ಪ್ರಕೃತಿ ವಿಕೋಪದ ಜೊತೆ ಅರಣ್ಯ ಇಲಾಖೆ ನಿರ್ಲಕ್ಷ್ಯ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿದೆ. ಮುಂದೇನು ಗತಿ ಅಂತಾ ಮನೆ ಮಾಲೀಕ ಬಿಕ್ಕಿ ಬಿಕ್ಕಿ ಅಳ್ತಿದ್ದಾರೆ. ಗಣೇಶ್ ಹೆಗ್ಡೆ ಅವರು 14 ಕಾದಂಬರಿಗಳನ್ನು ಬರೆದಿದ್ದು, ಮನೆಯಲ್ಲಿಟ್ಟಿದ್ದ 4,500 ಸಾವಿರಕ್ಕೂ ಹೆಚ್ಚು ಪುಸ್ತಕಗಳು ನಾಶವಾಗಿವೆ.

ಗುಡ್ಡದ ಭೂತಕ್ಕೆ ಹೆದ್ದಾರಿಯೇ ನಾಮಾವೇಶೇಷ ಗುಡ್ಡದ ಭೂತಕ್ಕೆ ಮನೆಗಳು ಮಾತ್ರವಲ್ಲ ಹೆದ್ದಾರಿಗಳೇ ಕೊಚ್ಚಿಹೋಗ್ತಿವೆ. ಭಾರಿ ಪ್ರಮಾಣದ ಗುಡ್ಡ ಕುಸಿತದಿಂದ ಶೃಂಗೇರಿಯಿಂದ ಆಗುಂಬೆಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯೇ ಕೊಚ್ಚಿಹೋಗಿದೆ. 200ಮೀಟರ್‌ಗೂ ಹೆಚ್ಚು ದೂರ ಡಾಂಬರಿನ ಇಡೀ ರಸ್ತೆ ಗುರುತೇ ಸಿಗದಂತೆ ನಾಮಾವೇಶೇಷವಾಗಿದೆ. ವಾಹನ ಸಂಚಾರ ವೇಳೆ ಈ ಅವಘಡ ಸಂಭವಿಸಿದ್ರೆ ಭಾರಿ ಪ್ರಾಣಹಾನಿಯೇ ಸಂಭವಿಸ್ತಿತ್ತು.

Published On - 5:49 pm, Fri, 15 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ