ಚಿಕ್ಕಮಗಳೂರು: 300ರ ಗಡಿ ದಾಟಿದ ಡೆಂಗ್ಯೂ ಪ್ರಕರಣಗಳ ಸಂಖ್ಯೆ, ಜನರಲ್ಲಿ ಆತಂಕ

ಕಾಫಿನಾಡು ಚಿಕ್ಕಮಗಳೂರಲ್ಲಿ ಕಳೆದೊಂದು ದಶಕದಿಂದ ಹಿಂದೆಂದೂ ಕಾಣದ ರೀತಿಯಲ್ಲಿ ಡೆಂಗ್ಯೂ ಮಹಾಮಾರಿ ತಾಂಡವವಾಡ್ತಿದೆ. ಪ್ರತಿನಿತ್ಯ ಜಿಲ್ಲೆಯಾದ್ಯಂತ ಐದಾರು ಪ್ರಕರಣಗಳು ದಾಖಲಾಗುತ್ತಿದ್ದು, ಸದ್ಯಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ 300ರ ಗಡಿ ದಾಟಿದೆ.

ಚಿಕ್ಕಮಗಳೂರು: 300ರ ಗಡಿ ದಾಟಿದ ಡೆಂಗ್ಯೂ ಪ್ರಕರಣಗಳ ಸಂಖ್ಯೆ, ಜನರಲ್ಲಿ ಆತಂಕ
ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ
Follow us
| Updated By: ಆಯೇಷಾ ಬಾನು

Updated on: Jun 11, 2024 | 9:10 AM

ಚಿಕ್ಕಮಗಳೂರು, ಜೂನ್.11: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಡೆಂಗ್ಯೂ (Dengue) ಪ್ರಕರಣಗಳ ಸಂಖ್ಯೆ 300ರ ಗಡಿ‌ದಾಟಿದೆ. ಬರದಿಂದ ಕಂಗೆಟ್ಟಿದ್ದ ಜಿಲ್ಲೆಯಲ್ಲಿ ಸದ್ಯಕ್ಕೆ ಉತ್ತಮ ಮಳೆಯಾಗ್ತಿದೆ. ಈ ಮಧ್ಯೆ ಡೆಂಗ್ಯೂ ಪ್ರಕರಣಗಳ ರುದ್ರನರ್ತನ ಕೂಡ ದಿನದಿಂದ ದಿನಕ್ಕೆ ಜಿಲ್ಲೆಯನ್ನ ಕಾಡ್ತಿದೆ. ಚಿಕ್ಕಮಗಳೂರು (Chikkamagaluru) ತಾಲೂಕು ಒಂದರಲ್ಲೇ 250 ಪ್ರಕರಣಗಳಿದ್ದು ಜಿಲ್ಲೆಯಾದ್ಯಂತ 350 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ಎರಡು ತಿಂಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜ್ವರ ಕಾಣಿಸಿಕೊಂಡರೆ ಸಾಕು ಡೆಂಗ್ಯೂ ಕಂಫರ್ಮ್ ಅನ್ನುವ ರೀತಿಯ ಸ್ಥಿತಿ ಇದೆ. ಆದರೆ, ಅದೃಷ್ಟವಶಾತ್ ಈವರೆಗೂ ಯಾವುದೇ ಸಾವು ಸಂಭವಿಸಿಲ್ಲ. ಜ್ವರ ಕಾಣಿಸಿಕೊಂಡರೇ ಮನೆಯಲ್ಲಿ ಔಷಧಿ ತೆಗೆದುಕೊಳ್ಳುವುದನ್ನು ಬಿಟ್ಟು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಿರಿ ಎಂದು ಆರೋಗ್ಯ ಇಲಾಖೆ (Health Department) ಮನವಿ ಮಾಡಿದೆ.

ಡೆಂಗ್ಯೂ ಪ್ರಕರಣಗಳ ಸಂಖ್ಯೆ ಇಳಿಮುಖದ ಲಕ್ಷಣ ಕಾಣ್ತಿಲ್ಲ. ತರೀಕೆರೆ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಎನ್. ಆರ್. ಪುರ, ಕೊಪ್ಪ ತಾಲೂಕುಗಳಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಒಂದು ದಶಕದ ಬಳಿಕ ಈ ಪರಿ ಮಹಾಮಾರಿ ಹರಡಿದ್ದು ಇದೇ ಮೊದಲು. ಬೇಸಿಗೆ ಅವಧಿಯಲ್ಲಿ ಮಳೆ ಇಲ್ಲದೆ ಚರಂಡಿ, ಮೋರಿ-ಕಾಲುವೆಗಳಲ್ಲಿ ನೀರು ನಿಂತು ಸೊಳ್ಳೆಗಳ ಲಾರ್ವ ಪ್ರಮಾಣ ಹೆಚ್ಚಾಗಿ ಸೊಳ್ಳೆಗಳ ಕಾಟವು ಜಿಲ್ಲೆಯಲ್ಲಿ ಮಿತಿ ಮೀರಿದೆ. ಇದರ ಪರಿಣಾಮ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ರಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ತೆರಳುವವರಿಗೆ ಕಹಿ ಸುದ್ದಿ! ಮಲ್ಪೆ ಬೀಚ್ ಪ್ರವೇಶ ನಿಷೇಧ

ಜೊತೆಗೆ ವಾರಕ್ಕೊಮ್ಮೆ ನೀರು ಬರುತ್ತೆ ಅಂತ ನೀರನ್ನ ಶೇಖರಿಸಿಕೊಂಡು ಮುಚ್ಚದೆ ಇರೋದ್ರಿಂದಲೂ ಡೆಂಗ್ಯೂ ಬಂದಿದೆ ಅನ್ನೋದು ವೈದ್ಯರ ಸ್ಪಷ್ಟನೆ. ರೋಗದಿಂದ ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಅವಶ್ಯಕತೆ ಇದ್ದರೆ ಮಾತ್ರ ಅಡ್ಮಿಟ್ ಮಾಡಿಕೊಳ್ಳಲಾಗುತ್ತಿದ್ದು, ಉಳಿದವರನ್ನು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿಚಕ್ಷಣ ಅಧಿಕಾರಿ ಬಾಲಕೃಷ್ಣ ತಿಳಿಸಿದರು.

ಒಟ್ಟಾರೆ, ಡೆಂಗ್ಯೂ ಆತಂಕ ಬೇಡ, ಎಚ್ಚರವಿರಲಿ ಎನ್ನುವ ಸಂದೇಶವನ್ನು ಚಿಕ್ಕಮಗಳೂರು ಆರೋಗ್ಯ ಇಲಾಖೆ ನೀಡುತ್ತಿದ್ದು, ಸೊಳ್ಳೆಗಳಿಂದ ಸೂಕ್ತ ರಕ್ಷಣೆ ಪಡೆಯಲು ಜನರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ. ಆದರೂ, ಈ ಪರಿ ಡೆಂಗ್ಯೂ ಮಹಾಮಾರಿ ಜಿಲ್ಲೆಯನ್ನು ಕಾಡುತ್ತಿದ್ದು ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮತ್ತಷ್ಟು ಎಚ್ಚೆತ್ತುಕೊಳ್ಳುವ ಅವಶ್ಯಕತೆ ಇದೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೆಡ್​ಗಳ ಸಮಸ್ಯೆ ಎದುರಾದರು ಆಶ್ಚರ್ಯವಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ