ಕೊರೊನಾ ಎಫೆಕ್ಟ್​: ಹುಟ್ಟುಹಬ್ಬದ ಪ್ರಯುಕ್ತ ಆನ್​ಲೈನ್​ ಮೂಲಕ ಪೂಜೆ ಸಲ್ಲಿಸಿದ ಡಿಕೆಶಿ

ಚಿಕ್ಕಮಗಳೂರು: ಕೊರೊನಾ ಕ್ರಿಮಿಯ ಎಫೆಕ್ಟ್​ನಿಂದ ದೇವಸ್ಥಾನಗಳಲ್ಲಿ ಪೂಜೆಗೆ ಬ್ರೇಕ್​ ಹಾಕಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆನ್​ಲೈನ್ ಮೂಲಕವೇ ದೇವರ ಮೊರೆ ಹೋಗಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗನಿಗೆ ಆನ್​ಲೈನ್ ಮೂಲಕವೇ ಡಿಕೆಶಿ ಪೂಜೆ ಸಲ್ಲಿಸಿದ್ದಾರೆ. ಇಷ್ಟ ದೇವತೆ ಋಷ್ಯಶೃಂಗನಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಮುಕ್ತಿಗೆ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಋಷ್ಯಶೃಂಗನಿಗೆ ಆನ್​ಲೈನ್ ಅಕೌಂಟ್ ಮೂಲಕವೇ ಹಣ ಪಾವತಿಸಿದ್ದಾರೆ. ಕಾಂಗ್ರೆಸ್​ನ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ […]

ಕೊರೊನಾ ಎಫೆಕ್ಟ್​: ಹುಟ್ಟುಹಬ್ಬದ ಪ್ರಯುಕ್ತ ಆನ್​ಲೈನ್​ ಮೂಲಕ ಪೂಜೆ ಸಲ್ಲಿಸಿದ ಡಿಕೆಶಿ
ಸಾಧು ಶ್ರೀನಾಥ್​

Updated on: May 15, 2020 | 5:05 PM

ಚಿಕ್ಕಮಗಳೂರು: ಕೊರೊನಾ ಕ್ರಿಮಿಯ ಎಫೆಕ್ಟ್​ನಿಂದ ದೇವಸ್ಥಾನಗಳಲ್ಲಿ ಪೂಜೆಗೆ ಬ್ರೇಕ್​ ಹಾಕಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆನ್​ಲೈನ್ ಮೂಲಕವೇ ದೇವರ ಮೊರೆ ಹೋಗಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗನಿಗೆ ಆನ್​ಲೈನ್ ಮೂಲಕವೇ ಡಿಕೆಶಿ ಪೂಜೆ ಸಲ್ಲಿಸಿದ್ದಾರೆ.

ಇಷ್ಟ ದೇವತೆ ಋಷ್ಯಶೃಂಗನಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಮುಕ್ತಿಗೆ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಋಷ್ಯಶೃಂಗನಿಗೆ ಆನ್​ಲೈನ್ ಅಕೌಂಟ್ ಮೂಲಕವೇ ಹಣ ಪಾವತಿಸಿದ್ದಾರೆ. ಕಾಂಗ್ರೆಸ್​ನ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ನೇತೃತ್ವದಲ್ಲಿ 101 ತೆಂಗಿನ ಕಾಯಿ ಒಡೆದು ಪೂಜೆ ಸಲ್ಲಿಸಿದ್ದಾರೆ.

Published On - 4:46 pm, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us