AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಬೀಟಮ್ಮ ಗ್ಯಾಂಗ್ ಓಡಿಸಲು ಅಖಾಡಕ್ಕಿಳಿದ ಅಭಿಮನ್ಯು ಆ್ಯಂಡ್ ಟೀಮ್

ಚಿಕ್ಕಮಗಳೂರು ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆ ಆವರಣದಲ್ಲಿ 30 ಕಾಡಾನೆಗಳು ಬೀಡು ಬಿಟ್ಟಿದ್ದವು. ನಿನ್ನೆಯಷ್ಟೇ ಈ ಆನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಶಾಲಾ ಆವರಣದಿಂದ ಓಡಿಸಲಾಗಿದೆ. ಅದಾಗ್ಯೂ, ಈ ಬೀಟಮ್ಮ ಗ್ಯಾಂಗ್ ಉಪಟಳಕ್ಕೆ ಬ್ರೇಕ್ ಹಾಕಲು ಸಾಕಾನೆ ಅಭಿಮನ್ಯು ನೇತೃತ್ವದ ತಂಡ ಅಖಾಡಕ್ಕಿಳಿದಿದೆ.

ಚಿಕ್ಕಮಗಳೂರು: ಬೀಟಮ್ಮ ಗ್ಯಾಂಗ್ ಓಡಿಸಲು ಅಖಾಡಕ್ಕಿಳಿದ ಅಭಿಮನ್ಯು ಆ್ಯಂಡ್ ಟೀಮ್
ಚಿಕ್ಕಮಗಳೂರಿನಲ್ಲಿ ಕಾಡಾನೆ ಬೀಟಮ್ಮ ಗ್ಯಾಂಗ್ ಓಡಿಸಲು ಅಖಾಡಕ್ಕಿಳದ ಅಭಿಮನ್ಯು ಟೀಮ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Rakesh Nayak Manchi|

Updated on:Jan 30, 2024 | 9:15 AM

Share

ಚಿಕ್ಕಮಗಳೂರು, ಜ.30: ನಗರದ (Chikkamagaluru) ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆ ಆವರಣದಲ್ಲಿ 30 ಕಾಡಾನೆಗಳು (Wild Elephant) ಬೀಡು ಬಿಟ್ಟಿದ್ದವು. ನಿನ್ನೆಯಷ್ಟೇ ಈ ಆನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಶಾಲಾ ಆವರಣದಿಂದ ಓಡಿಸಲಾಗಿದೆ. ಅದಾಗ್ಯೂ, ಈ ಬೀಟಮ್ಮ ಗ್ಯಾಂಗ್ ಉಪಟಳಕ್ಕೆ ಬ್ರೇಕ್ ಹಾಕಲು ಸಾಕಾನೆ ಅಭಿಮನ್ಯು ನೇತೃತ್ವದ ತಂಡ ಅಖಾಡಕ್ಕಿಳಿದಿದೆ.

ಅಭಿಮನ್ಯು ನೇತೃತ್ವದಲ್ಲಿ ಬೀಟಮ್ಮ ಗ್ಯಾಂಗ್ ಕಾರ್ಯಚರಣೆ ನಡೆಯಲಿದೆ. ಅಭಿಮನ್ಯುಗೆ ಮಹೇಂದ್ರ ಸುಗ್ರೀವ, ಭೀಮ, ದುಬಾರೆ ಹಾಗೂ ನಾಗರಹೊಳೆಯಿಂದ ಆಗಮಿಸಿರುವ 8 ಕುಮ್ಕಿ ಆನೆಗಳು ಸಾಥ್ ನೀಡಲಿವೆ. ಸದ್ಯ ಅಭಿಮನ್ಯು ಮತ್ತು ತಂಡ ಮತ್ತಾವರ ಅರಣ್ಯ ಇಲಾಖೆಯ ವಸತಿ ಗೃಹದ ಆವರಣಕ್ಕೆ ಬಂದಿಳಿದಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ಬಳಿಕ ಕಾರ್ಯಚರಣೆ ಆರಂಭಗೊಳ್ಳಲಿದ್ದು, ಮಧ್ಯಾಹ್ನದ ಬಳಿಕ ಕಾರ್ಯಚರಣೆ ಆರಂಭಿಸುವ ಸಾಧ್ಯತೆ ಇದೆ. ಸದ್ಯ, ಬೀಟಮ್ಮ ಗ್ಯಾಂಗ್ ಚಲನೆಯ ಮೇಲೆ ನಿಗಾ ಇಟ್ಟಿರುವ ಅರಣ್ಯ ಇಲಾಖೆಯು ಬಂದ ದಾರಿಯಲ್ಲೇ ಅವುಗಳನ್ನು ವಾಪಸ್ ಕಳಿಸಲು ಪ್ಲಾನ್ ಮಾಡಿಕೊಂಡಿದೆ. ಸದ್ಯ, ಕೆಆರ್​ ಪೇಟೆ ಪೇಟೆ ಗ್ರಾಮದ ಶಾಲೆಯ ಹಿಂಭಾಗದ ಪ್ಲಾಂಟೇಶನ್​ನಲ್ಲಿ 30 ಕಾಡಾನೆಗಳೊಂದಿಗೆ ಪ್ಲಾಂಟೇಶನ್​ನಲ್ಲಿ ಬೀಟಮ್ಮ ಬೀಟು ಬಿಟ್ಟಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಶಾಲಾ ಆವರಣದಿಂದ ಹೊರ ಬಂದ ಕಾಡಾನೆ ಹಿಂಡು; 9 ಕ್ಕೂ ಅಧಿಕ ಗ್ರಾಮಗಳಲ್ಲಿ ಹೆಚ್ಚಿದ ಆತಂಕ

ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಈ ಆವರಣದಲ್ಲೇ ಬೀಡುಬಿಟ್ಟಿದ್ದ ಕಾಡಾನೆ ಬೀಟಮ್ಮ ಮತ್ತು ಗ್ಯಾಂಗ್ ಜನರನ್ನ ಆತಂಕ್ಕೀಡು ಮಾಡಿತ್ತು. ಮುಂಜಾಗ್ರತಾ ಕ್ರಮ ಕೈಗೊಂಡು ಪಟಾಕಿ ಸಿಡಿಸಿ ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಸತಿ ಶಾಲಾ ಆವರಣದಿಂದ ಹೊರಗೆ ಓಡಿಸಿದ್ದಾರೆ.

ಈ ಹಿನ್ನಲೆ ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದ್ದು, 9 ಕ್ಕೂ ಅಧಿಕ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ. ಆದ್ದರಿಂದ ಯಾರೂ ಕೂಡ ಮನೆಗಳಿಂದ ಹೊರ ಬರದಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಬರೊಬ್ಬರಿ 100ಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಇಟಿಎಫ್‌ ಸಿಬ್ಬಂದಿಗಳು ಸೇರಿ ಕಾಡಾನೆಗಳ ಹಿಂಡನ್ನು ಮತ್ತೆ ಕಾಡಿಗಟ್ಟಲು ಪಟಾಕಿ ಸಿಡಿಸಿ ಹರಸಾಹಸ ಪಟ್ಟಿದ್ದರು. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Tue, 30 January 24

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?