AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಿನ ವಸತಿ ಶಾಲಾ ಆವರಣದಲ್ಲಿ ಬೀಡುಬಿಟ್ಟ ಬೀಟಮ್ಮ ಗ್ಯಾಂಗ್; ವಿದ್ಯಾರ್ಥಿಗಳಿಗೆ ಆಚೆ ಬರದಂತೆ ಸೂಚನೆ

ಇಷ್ಟು ದಿನ ಹಾಸನ ಜಿಲ್ಲೆಯ ಬೇಲೂರು-ಸಕಲೇಶಪುರ ಭಾಗದಲ್ಲಿ ಬೀಡುಬಿಟ್ಟಿದ್ದ ಈ ಕಾಡಾನೆಗಳ ಹಿಂಡು ಇದೀಗ ಚಿಕ್ಕಮಗಳೂರು ಜಿಲ್ಲೆಗೆ ಹಿಂಡು-ಹಿಂಡಾಗಿ ಬಂದಿವೆ. ಕಾಡಾನೆ ಹಿಂಡು ಕಾಂಪೌಂಡ್ ಮುರಿದು ವಸತಿ ಶಾಲಾ ಆವರಣಕ್ಕೆ ‌ಬಂದಿವೆ. ಹೀಗಾಗಿ ವಸತಿ ಶಾಲೆಯೊಳಗಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಗೆ ವಸತಿ ಶಾಲೆಯಿಂದ ಹೊರ ಬರದಂತೆ ಸೂಚಿಸಲಾಗಿದೆ.

ಕಾಫಿನಾಡಿನ ವಸತಿ ಶಾಲಾ ಆವರಣದಲ್ಲಿ ಬೀಡುಬಿಟ್ಟ ಬೀಟಮ್ಮ ಗ್ಯಾಂಗ್; ವಿದ್ಯಾರ್ಥಿಗಳಿಗೆ ಆಚೆ ಬರದಂತೆ ಸೂಚನೆ
ಬೀಟಮ್ಮ ಗ್ಯಾಂಗ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 29, 2024 | 9:44 AM

Share

ಚಿಕ್ಕಮಗಳೂರು, ಜ.29: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬೀಟಮ್ಮ ಗ್ಯಾಂಗ್ (Beetamma Gang) ಕಾಡಾನೆಗಳ ದಂಡು ಭಾರಿ ಆತಂಕ ಸೃಷ್ಟಿಸಿದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಯ ಗಡಿ ಗ್ರಾಮದ ಮೂಲಕ ಚಿಕ್ಕಮಗಳೂರು ತಾಲೂಕಿನ ಕೆ.ಆರ್.ಪೇಟೆ ಗ್ರಾಮಕ್ಕೆ ಬೀಟಮ್ಮ ಗ್ಯಾಂಗ್ ಎಂಟ್ರಿ ಕೊಟ್ಟಿದ್ದು ಜನರಲ್ಲಿ ಭಯ ಹುಟ್ಟಿಸಿದೆ. ಸದ್ಯ ವಸತಿ ಶಾಲೆಯೊಳಗೆ 27 ಕಾಡಾನೆಗಳು (Elephant) ಬೀಡುಬಿಟ್ಟಿರುವ ಹಿನ್ನೆಲೆ ಆ್ಯಂಬರ್ ವ್ಯಾಲಿ ವಸತಿ ಶಾಲೆಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ತಾಲೂಕಿನ ಮುಗ್ತಿಹಳ್ಳಿ ಬಳಿ 25 ಎಕರೆಗೂ ಹೆಚ್ಚು ಪ್ರದೇಶದಲ್ಲಿರುವ ಆ್ಯಂಬರ್ ವ್ಯಾಲಿ ವಸತಿ ಶಾಲೆ ಆವರಣದಲ್ಲಿ 25 ಕಾಡಾನೆಗಳ ತಂಡ ಬೀಡುಬಿಟ್ಟಿದೆ. ಕಾಡಾನೆ ಹಿಂಡು ಕಾಂಪೌಂಡ್ ಮುರಿದು ವಸತಿ ಶಾಲಾ ಆವರಣಕ್ಕೆ ‌ಬಂದಿವೆ. ಹೀಗಾಗಿ ವಸತಿ ಶಾಲೆಯೊಳಗಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಗೆ ವಸತಿ ಶಾಲೆಯಿಂದ ಹೊರ ಬರದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ. ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಮುಗ್ತಿಹಳ್ಳಿ ಬಳಿಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಸತಿ ಶಾಲೆಗೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಬೇಲೂರು ಮಾರ್ಗವಾಗಿ ಚಿಕ್ಕಮಗಳೂರಿಗೆ ಬಂದಿರುವ 30ಕ್ಕೂ ಅಧಿಕ ಕಾಡಾನೆಗಳು. 8ಕ್ಕೂ ಅಧಿಕ‌ ಕಾಡಾನೆಗಳು ಬೀಟಮ್ಮ ಗ್ಯಾಂಗ್ ನಿಂದ ಬೇರ್ಪಟ್ಟಿವೆ. ಹಂತಕ ಸಲಗ ಭೀಮ ಕೂಡ ಬೀಟಮ್ಮ ಗ್ಯಾಂಗ್​ನಲ್ಲಿದ್ದಾನೆ. ಎರಡು ದಿನದಿಂದ ಚಿಕ್ಕಮಗಳೂರು ಹೊರ ವಲಯದ ಗ್ರಾಮದಲ್ಲಿ ಕಾಡಾನೆಗಳು ಸಂಚಾರ ಮಾಡುತ್ತಿವೆ.

ಇದನ್ನೂ ಓದಿ: ಚಿನ್ನದ ಅಂಗಡಿ ಮೇಲೆ ನಕಲಿ ಅಧಿಕಾರಿಗಳ ದಾಳಿ, 1 ಕೇಜಿ ಬಂಗಾರ ತೆಗೆದುಕೊಂಡು ಪರಾರಿಯಾಗುತ್ತಿದ್ದವರು ಪೊಲೀಸರ ಬಲಗೆ ಬಿದ್ದಿದ್ದೇ ರೋಚಕ

ಈ ಹಿಂದೆ ಹಲವರ ಸಾವಿಗೆ ಕಾರಣವಾಗಿರುವ ಭೀಮ ಎಂಬ ಪುಂಡನೆ ಕೂಡ ಈ 30 ಆನೆಗಳ ಗ್ಯಾಂಗ್ ಸೇರಿದ್ದು ಇನ್ನಷ್ಟು ಭೀತಿ ಹೆಚ್ಚಿಸಿದೆ. ಚಿಕ್ಕಮಗಳೂರು ತಾಲೂಕಿನ ಹತ್ತಾರು ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಇಷ್ಟು ದಿನ ಹಾಸನ ಜಿಲ್ಲೆಯ ಬೇಲೂರು-ಸಕಲೇಶಪುರ ಭಾಗದಲ್ಲಿ ಬೀಡುಬಿಟ್ಟಿದ್ದ ಈ ಕಾಡಾನೆಗಳ ಹಿಂಡು ಇದೀಗ ಚಿಕ್ಕಮಗಳೂರು ಜಿಲ್ಲೆಗೆ ಹಿಂಡು-ಹಿಂಡಾಗಿ ಬಂದಿರುವುದು ಕಾಫಿ ಹಾಗೂ ಅಡಿಕೆ ಬೆಳೆಗಾರರಲ್ಲಿ ಇನ್ನಿಲ್ಲದ ಆತಂಕ ತಂದಿದೆ. 30 ಆನೆಗಳ ತಂಡ ಬಂದಿರುವುದರಿಂದ ಅರಣ್ಯ ಇಲಾಖೆ ಕೂಡ ಹೈ ಅಲರ್ಟ್ ಘೋಷಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?