AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮಂಟಪಕ್ಕೇ ನುಗ್ಗಿ ಮಾಜಿ ಪ್ರಿಯಕರನಿಗೆ ಶಾಕ್​​ಕೊಟ್ಟ ಯುವತಿ: ಫುಲ್​​ ಹೈಡ್ರಾಮಾ

10 ವರ್ಷ ಪ್ರೀತಿಸಿ ಮದುವೆಯಾಗುವುದಾಗಿ ಮೋಸ ಮಾಡಿದ ಯುವಕನ ಮದುವೆ ಮಂಟಪಕ್ಕೇ ನುಗ್ಗಿ ಯುವತಿಯೋರ್ವಳು ರಂಪಾಟ ನಡೆಸಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಇದೇ ಮಂಟಪದಲ್ಲಿ ತನ್ನನ್ನು ಮದುವೆಯಾಗಬೇಕೆಂದು ಪಟ್ಟು ಹಿಡಿದು ಧರಣಿ ಕುಳಿತ ಯುವತಿ, ತನ್ನ ಮೇಲೆ ಹಲ್ಲೆ ನಡೆದಿದೆ ಎಂದೂ ಆರೋಪಿಸಿದ್ದಾಳೆ.

ಮದುವೆ ಮಂಟಪಕ್ಕೇ ನುಗ್ಗಿ ಮಾಜಿ ಪ್ರಿಯಕರನಿಗೆ ಶಾಕ್​​ಕೊಟ್ಟ ಯುವತಿ: ಫುಲ್​​ ಹೈಡ್ರಾಮಾ
ಮದುವೆ ಮಂಟಪ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Dec 14, 2025 | 11:50 AM

Share

ಚಿಕ್ಕಮಗಳೂರು, ಡಿಸೆಂಬರ್​​ 12: ಲವರ್​ಗೆ ಕೈಕೊಟ್ಟು ಬೇರೆ ಯುವತಿ ಜೊತೆಗೆ ಯುವಕ ಮದುವೆಯಾದ ಹಿನ್ನಲೆ  ಮೋಸ ಹೋದ ಯುವತಿ ಮದುವೆ ಮಂಟಪದಲ್ಲಿ ರಂಪಾಟ ನಡೆಸಿರುವ ಘಟನೆ ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕಳೆದ 10 ವರ್ಷದಿಂದ ಶರತ್​ ಎಂಬಾತನನ್ನು ಯುವತಿ ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ನಂಬಿಸಿ ಆತ ಮೋಸ ಮಾಡಿರುವ ಆರೋಪ ಕೇಳಿಬಂದಿದೆ.

ಮದುವೆ ಮಂಟಪದಲ್ಲೇ ತನ್ನ ವಿವಾಹವಾಗು  ಎಂದು ಹಾಸನ ಜಿಲ್ಲೆ ಬೇಲೂರು ಮೂಲದ ಯುವತಿ ಪಟ್ಟು ಹಿಡಿದ್ದಾಳೆ. ಇನ್ನು, ಶರತ್​​ ಮೋಸ ಮಾಡಿರುವ ವಿಚಾರವಾಗಿ 8 ತಿಂಗಳ ಹಿಂದೆ ಆಲ್ದೂರು ಪೊಲೀಸ್ ‌ಠಾಣೆಗೆ ಯುವತಿ ದೂರು ನೀಡಿದ್ದಳು. ನಿನ್ನೆ ಶರತ್ ಮನೆಯ ಮುಂದೆ ಏಕಾಂಗಿ ಹೋರಾಟ ಕೂಡ ಮಾಡಿದ್ದಳು. ಅದರ ಮುಂದುವರಿದ ಭಾಗವಾಗಿ ಇಂದು ಮದುವೆ ಮಂಟಪಕ್ಕೆ ಬಂದು ನೊಂದ ಯುವತಿ ರಂಪಾಟ ನಡೆಸಿದ್ದಾಳೆ. ಮದುವೆ ಮಂಟಪದೊಳಗೆ ಧರಣಿ ಕುಳಿತಿದ್ದಾಳೆ.

ಇದನ್ನೂ ಓದಿ: ಇನ್ನೇನು ತಾಳಿ ಕಟ್ಟುವ ವೇಳೆಯಲ್ಲೇ ಮಂಟಪ್ಪಕ್ಕೆ ಪ್ರೇಯಸಿ ಎಂಟ್ರಿ; ಕಕ್ಕಾಬಿಕ್ಕಿಯಾದ ಪ್ರಿಯಕರ

ಹಲ್ಲೆ ಆರೋಪ

ಆದರೆ, ಚಿಕ್ಕಮಗಳೂರು ನಗರದ ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಿಗದಿಯಾದ ಮುಹೂರ್ತದಲ್ಲಿ ವಿವಾಹ ಕಾರ್ಯ ಮುಗಿದಿದೆ. ಆದರೂ ಯುವತಿ ಇದೇ ಮಂಟಪದಲ್ಲಿ ತನ್ನನ್ನು ಆತ ಮದುವೆಯಾಗಬೇಕು ಎಂದು ಪಟ್ಟು ಹಿಡಿದ್ದಾಳೆ. ಜೊತೆಗೆ  ನನ್ನ ಮೇಲೆ ಹಲ್ಲೆ ಮಾಡಿದ್ರು ಎಂದು ಆಕ್ರೋಶ ಹೊರಹಾಕಿದ್ದಾಳೆ. ನಾನು ಬರುವ ಮೊದಲೇ ಮದುವೆಯಾಗಿದೆ. ನನ್ನ ಬಳಿ ಹಣ ಕೊಡ್ತೀವಿ ಇಲ್ಲಿಂದ ಹೋಗು ಅಂದ್ರು. ನನಗೆ ಯಾವುದೇ ಹಣ ಬೇಡ, ಆತ ನನ್ನ ಮದುವೆ ಆಗಬೇಕಷ್ಟೇ ಎಂದು ಯುವತಿ ತಿಳಿಸಿದ್ದಾಳೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:42 am, Sun, 14 December 25

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?