Sign In

By signing in or creating an account, you agree with Associated Broadcasting Company's Terms & Conditions and Privacy Policy.

Ginger Price: ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ ಬಂತು ಬಂಗಾರದ ಬೆಲೆ

ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಟೋಮೆಟೊಗೆ ಸಿಕ್ಕಂತೆ ಶುಂಠಿಗೂ ಸಹ ಇತಿಹಾಸದಲ್ಲಿ ಬಂಗಾರದ ಬೆಲೆ ಸಿಕ್ಕಿದೆ. ಇದರಿಂದ ಶುಂಠಿ ಬೆಳೆಗಾರರು ಜಾಕ್​ಪಾಟ್ ಹೊಡೆದಿದ್ದಾರೆ.

Ginger Price: ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ ಬಂತು ಬಂಗಾರದ ಬೆಲೆ
ಶುಂಠಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Jul 14, 2023 | 12:12 PM

ಚಿಕ್ಕಮಗಳೂರು, (ಜುಲೈ 14): ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ದಿನಸಿ ಸೇರಿದಂತೆ ಕೆಲ ತರಕಾರಿ ದರ ಏರಿಕೆಯಾಗಿದೆ.ಅದರಲ್ಲೂ ಮುಖ್ಯವಾಗಿ ಟೊಮೆಟೊ ದರ ಗಗನಕ್ಕೇರಿದೆ. ಇದರ ಮಧ್ಯೆ ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ(ginger) ಬಂಗಾರದ ಬೆಲೆ ಬಂದಿದೆ. ಹೌದು.. 100 ಕೆ.ಜಿ‌ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.

ಇದನ್ನೂ ಓದಿ: Kolar News: ಕೋಲಾರದ ರೈತ ಕುಟುಂಬಕ್ಕೆ ಭರ್ಜರಿ ಜಾಕ್​ಪಾಟ್; ಟೊಮೆಟೊ ಮಾರಾಟದಿಂದ ಸಿಕ್ತು 38 ಲಕ್ಷ ರೂ

ಉತ್ತಮ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ಶುಂಠಿ ಬೆಳೆದ ರೈತರು ಇದೀಗ ಜಾಕ್ ಪಾಟ್ ಹೊಡೆದಿದ್ದಾರೆ. ಅದರಲ್ಲೂ ಹಳೆಯ ಶುಂಠಿಗೆ ಬೇಡಿಕೆ ಹೆಚ್ಚಾಗಿದೆ. ಹಳೆ ಶುಂಠಿಗೆ 18ರಿಂದ 20 ಸಾವಿರ ರೂ. ಇದ್ದು, ಈ ವರ್ಷ ಬೆಳೆದಿರುವ ಶುಂಠಿಗೆ 10 ರಿಂದ 12 ಸಾವಿರ ರೂ.ಇದೆ. ಇದರಿಂದ ಕಳೆದ ವರ್ಷದ ಶುಂಠಿಯನ್ನ ಹೊಲದಲ್ಲಿ ಉಳಿಸಿಕೊಂಡ ರೈತರಿಗೆ ಬಂಪರ್ ಬೆಲೆ ಸಿಗುತ್ತಿದೆ. ದೆಹಲಿ ಮತ್ತು ಉತ್ತರ ಭಾರತದಲ್ಲಿ ಶುಂಠಿಗೆ ಬೇಡಿಕೆ ಹೆಚ್ಚಾಗಿದ್ದು, 2011 ರಿಂದ 2023 ರಲ್ಲಿ ಇದೆ ಮೊದಲಿ ಬಾರಿಗೆ ಶುಂಠಿ ಬೆಲೆ 20 ಸಾವಿರ ರೂ. ಗಡಿ ತಲುಪಿದೆ. ಹೀಗಾಗಿ ಒಂದು ಎಕರೆ ಶುಂಠಿ ಬೆಳೆದ ರೈತ 25 ಲಕ್ಷ ರೂ. ಲಾಭದ ನಿರೀಕ್ಷೆಯಲ್ಲಿದ್ದಾನೆ.

ಸಾಮಾನ್ಯವಾಗಿ ಏಪ್ರಿಲ್‌- ಮೇ ತಿಂಗಳಲ್ಲಿ ಶುಂಠಿ ಬಿತ್ತನೆ ಮಾಡಲಾಗುತ್ತದೆ. 8 ತಿಂಗಳಿಗೂ ಹೆಚ್ಚಿನ ಅವಧಿಯ ಈ ಬೆಳೆ ಜನವರಿ ಹೊತ್ತಿಗೆ ಕೈಗೆ ಸಿಗುತ್ತದೆ. ಆದರೆ ಇದೀಗ ಈಗ ರೈತರು ಬೆಳೆಯೆಲ್ಲ ಮಾರಾಟ ಮಾಡಿ ಹೊಸದಾಗಿ ಬಿತ್ತನೆ ಮಾಡಿ ಶುಂಠಿ ಸಸಿ ಬೆಳೆಸುವ ಸಮಯದಲ್ಲಿ ಹಿಂದೆಂದೂ ಕಾಣದ ದಾಖಲೆಯ ಬೆಲೆ ಬಂದಿದೆ. ಹೆಚ್ಚಿನ ರೈತರ ಕೈಯಲ್ಲಿ ಬೆಳೆ ಇಲ್ಲದಿರುವುದರಿಂದ ಬೆಲೆ ಬಂದರೂ ಪ್ರಯೋಜನ ಇಲ್ಲದಂತಾಗಿದೆ. ಇನ್ನು ಮಾರಾಟ ಮಾಡದೇ ಇಟ್ಟುಕೊಂಡಿರುವ ರೈತರಿಗೆ ಮಾತ್ರ ಜಾಕ್​ಪಾಟ್.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:07 pm, Fri, 14 July 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್