AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಿನಲ್ಲಿ ಆನೆಗಳಿಂದ ಬೆಳೆಗಳನ್ನು ಉಳಿಸಲು ಗಿಡಗಳಿಗೆ ಮೈಕ್ ಸೆಟ್, ಡಿಜೆ ಸಿಸ್ಟಮ್ ಅಳವಡಿಸಿದ ರೈತರು!

ಆನೆಗಳ ದಾಳಿಯಿಂದ ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳಲು ರೈತರು ಗಿಡಗಳಿಗೆ ಮೈಕ್ ಸೆಟ್ಗಳನ್ನು ಅಳವಡಿಸಿದ್ದಾರೆ. ಹಾಗೂ ಅಲ್ಲೊಂದು ಇಲ್ಲೊಂದು ಡಿಜೆ ಸಿಸ್ಟಮ್ ಇಟ್ಟಿದ್ದಾರೆ. ಆನೆಗಳ ಗ್ಯಾಂಗ್ ಅಟ್ಯಾಕ್ಮಾಡೋದನ್ನ ತಪ್ಪಿಸೋಕೆ ರೈತರು ಇಂತಹದೊಂದು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.

ಕಾಫಿನಾಡಿನಲ್ಲಿ ಆನೆಗಳಿಂದ ಬೆಳೆಗಳನ್ನು ಉಳಿಸಲು ಗಿಡಗಳಿಗೆ ಮೈಕ್ ಸೆಟ್, ಡಿಜೆ ಸಿಸ್ಟಮ್ ಅಳವಡಿಸಿದ ರೈತರು!
ಕಾಫಿನಾಡಿನಲ್ಲಿ ಆನೆಗಳಿಂದ ಬೆಳೆಗಳನ್ನು ಉಳಿಸಲು ಗಿಡಗಳಿಗೆ ಮೈಕ್ ಸೆಟ್, ಡಿಜೆ ಸಿಸ್ಟಮ್ ಅಳವಡಿಸಿದ ರೈತರು!
TV9 Web
| Updated By: ಆಯೇಷಾ ಬಾನು|

Updated on: Mar 03, 2022 | 3:38 PM

Share

ಚಿಕ್ಕಮಗಳೂರು: ಜಿಲ್ಲೆಯ ಸುತ್ತಾಮುತ್ತ ಅನೇಕ ಕಡೆ ಆನೆ ದಾಳಿಯಿಂದ ರೈತರು(Farmers) ಕಂಗಾಲಾಗಿದ್ದಾರೆ. ಆನೆಗಳ ಹಾವಳಿಯಿಂದ ಕೈಗೆ ಬಂದಿದ್ದ ಬೆಳೆ ಮಣ್ಣುಪಾಲಾಗಿದೆ. ಇನ್ನುಳಿದಿದ್ದನ್ನು ಕಾಪಾಡೋದೆ ದೊಡ್ಡ ತಲೆನೋವಾಗಿದೆ. ಬೆಂಕಿ ಹಾಕಿದ್ರೂ ನೋ ಯೂಸ್.. ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ರು ಡೋಂಟ್ ಕೇರ್. ಹೀಗಾಗಿ ಆ ಗ್ಯಾಂಗ್ನ ಅಟ್ಯಾಕ್ ತಡೆಯಲು ರೈತರೇ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.

ಆನೆಗಳ ದಾಳಿಯಿಂದ ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳಲು ರೈತರು ಗಿಡಗಳಿಗೆ ಮೈಕ್ ಸೆಟ್ಗಳನ್ನು ಅಳವಡಿಸಿದ್ದಾರೆ. ಹಾಗೂ ಅಲ್ಲೊಂದು ಇಲ್ಲೊಂದು ಡಿಜೆ ಸಿಸ್ಟಮ್ ಇಟ್ಟಿದ್ದಾರೆ. ಆನೆಗಳ ಗ್ಯಾಂಗ್ ಅಟ್ಯಾಕ್ಮಾಡೋದನ್ನ ತಪ್ಪಿಸೋಕೆ ರೈತರು ಇಂತಹದೊಂದು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರದಲ್ಲಿ ಅನ್ನದಾತರು ಆನೆ ಹಾವಳಿಯಿಂದ ಕಂಗೆಟ್ಟಿದ್ದಾರೆ. ಹೀಗಾಗಿ ಈಗ ಹೊಲ, ಗದ್ದೆ, ತೋಟಗಳಲ್ಲಿ ಮೈಕ್ ಸೆಟ್, ಡಿಜೆ, ಸಿಸ್ಟಮ್ ಇಟ್ಟು ಆನೆ ಓಡಿಸೋಕೆ ಮುಂದಾಗಿದ್ದಾರೆ. ಈ ಮೈಕ್ನಲ್ಲಿ ಪಟಾಕಿ ಸಿಡಿಯುವ ಸೌಂಡ್, ಹುಲಿ, ಸಿಂಹ ಗರ್ಜಿಸುವ ಧ್ವನಿ, ಮನುಷ್ಯ ಕೂಗುವ ಹಾಗೆ ನಿರಂತರ ಸೌಂಡ್ ಬರುತ್ತಿರುತ್ತೆ. ಈ ರೀತಿ ಮಾಡೋದ್ರಿಂದ ಕಾಡಾನೆಗಳ ಹಾವಳಿ ತಪ್ಪುತ್ತೆ ಅನ್ನೋದು ರೈತರ ನಂಬಿಕೆ. ಪ್ರಸ್ತುತ ಆನೆ ಹಾವಳಿ ತಕ್ಕ ಮಟ್ಟಿಗೆ ಸುಧಾರಿಸಿದೆ. ಆದ್ರೆ, ಮುಂದೇನೋ ಗೊತ್ತಿಲ್ಲ ಅಂತಾರೆ ಅನ್ನದಾತರು.

ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರ್ತಿದೆ. ವಾರಕ್ಕೆರಡು ಬಾರಿ ದಾಳಿ ಫಿಕ್ಸ್ ಆಗಿದೆ. ಹಾಗಾಗಿ, ಗುಡ್ಡಗಳ ಪಕ್ಕದಲ್ಲಿರೋ ಜಮೀನುಗಳಲ್ಲಿ ರೈತರು ಡಿಜೆ ಸೌಂಡ್ ಮೊರೆ ಹೋಗಿದ್ದಾರೆ. ಮೂವತ್ತಕ್ಕೂ ಹೆಚ್ಚು ಮೈಕ್‍ಗಳನ್ನ ಹಾಕಿದ್ದಾರೆ. ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಅನ್ ಆಗುತ್ತೆ. ಶಬ್ಧಕ್ಕೆ ಹೆದರುವ ಕಾಡಾನೆಗಳು ಜಮೀನಿನತ್ತ ಬರಲ್ಲ ಅನ್ನೋದು ರೈತರ ಅಭಿಪ್ರಾಯವಾಗಿದೆ.

ಒಟ್ಟಾರೆ, ಕಾಡಾನೆಗಳಿಂದ ಪೀಕಲಾಟಕ್ಕೆ ಸಿಲುಕಿರುವ ರೈತರು ಅರಣ್ಯ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಅಧಿಕಾರಿಗಳು ಆನೆ ದಾಳಿ ತಪ್ಪಿಸೋದು ಸುಲಭವಲ್ಲ ಅಂತ ಕೈಚೆಲ್ಲಿದ್ದಾರಂತೆ ಅದಕ್ಕಾಗಿ ಅನ್ನದಾತರು ಈ ಮಾರ್ಗ ಹುಡುಕಿಕೊಂಡಿದ್ದಾರೆ. ಆದ್ರೆ ಶಾಶ್ವತವಾಗಿ ಇದಕ್ಕೊಂದು ಪರಿಹಾರ ಕಲ್ಪಿಸಬೇಕು ಅನ್ನೋದು ಸ್ಥಳೀಯರ ಆಗ್ರಹ.

ವರದಿ: ಪ್ರಶಾಂತ್, ಟಿವಿ9 ಚಿಕ್ಕಮಗಳೂರು farmers Installed mike set and DJ System to save crops 1

farmers Installed mike set and DJ System to save crops 1

ಇದನ್ನೂ ಓದಿ: ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಮಾತುಕತೆ

ಗಬ್ಬರ್ ಜೇಬಿಗೆ 4 ಕೋಟಿ ರೂ. ಕತ್ತರಿ! ಐಪಿಎಲ್​ನಲ್ಲಿ 8.25 ಕೋಟಿ ಸಂಭಾವನೆ ಪಡೆದ ಧವನ್​ಗೆ ಶಾಕ್​ ಕೊಟ್ಟ ಬಿಸಿಸಿಐ!

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್