AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮುಖಂಡರ ನಡುವೆ ಹೊಡೆದಾಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಅಧ್ಯಕ್ಷರ ನೇಮಕ ವಿಚಾರದಲ್ಲಿ ಬಿಜೆಪಿ ಮುಖಂಡರ ಜಗಳ ಬೀದಿಗೆ ಬಿದ್ದಿದೆ.ಮೂಡಿಗೆರೆ ತಾಲೂಕು ಅಧ್ಯಕ್ಷ ಹುದ್ದೆಗಾಗಿ ಬಿಜೆಪಿ ಮುಖಂಡರ ನಡುವೆ ಮಾರಾಮಾರಿ ನಡೆದಿದ್ದು, ಗಲಾಟೆಯಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರೊಬ್ಬರಿಗೆ ಗಾಯವಾಗಿದೆ. ಇನ್ನು ಬೀದಿಯಲ್ಲಿ ಹೊಡೆದಾಡುಕೊಂಡಿರುವ ವಿಡಿಯೋ ಫುಲ್ ವೈರಲ್ ಆಗಿದೆ.

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮುಖಂಡರ ನಡುವೆ ಹೊಡೆದಾಟ
TV9 Web
| Edited By: |

Updated on: Feb 09, 2024 | 7:35 PM

Share

ಚಿಕ್ಕಮಗಳೂರು, (ಫೆಬ್ರವರಿ 09): ಲೋಕಸಭಾ ಚುನಾವಣೆ (Loksabha Elections 2024) ಸಂಬಂಧ ಕರ್ನಾಟಕ ಬಿಜೆಪಿಯಲ್ಲಿರುವ ಅಸಮಾಧಾನಗಳನ್ನು ಬಿವೈ ವಿಜಯೇಂದ್ರ(BY Vijayendra) ಹಾಗೂ ಯಡಿಯೂರಪ್ಪ (BS Yediyurappa) ಒಂದೊಂದಾಗಿಯೇ ಬಗೆಹರಿಸುತ್ತಿದ್ದಾರೆ. ಇದರ ಮಧ್ಯೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ (Chikkamagaluru BJP) ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮೂಡಿಗೆರೆ ತಾಲೂಕು ಅಧ್ಯಕ್ಷ ನೇಮಕ ವಿಚಾರದಲ್ಲಿ ಬಿಜೆಪಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ.ಬೀದಿಯಲ್ಲಿ ಹೊಡೆದಾಟದ ವಿಡಿಯೋ ವೈರಲ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಮೂಡಿಗೆರೆ ನೂತನ ಅಧ್ಯಕ್ಷರನ್ನಾಗಿ ಗಜೇಂದ್ರ ಅವರನ್ನು ನೇಮಕ ಮಾಡಿ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಆದೇಶ ಹೊರಡಿಸಿದ್ದು, ಇದರ ಬೆನ್ನಲ್ಲೇ ಇನ್ನುಳಿದ ಆಕಾಂಕ್ಷಿಗಳ ಆಕ್ರೋಶದ ಕಟ್ಟೆ ಹೊಡೆದಿದೆ. ಕೆ.ಸಿ.ರತನ್ ಹಸ್ತ ಕ್ಷೇಪದಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತೋರ್ವ ಆಕಾಂಕ್ಷಿ ಭರತ್ ಗಲಾಟೆ ಮಾಡಿದ್ದಾರೆ. ಈ ವೇಳೆ .ರತನ್ ಅವರಿಗೆ ಗಾಯವಾಗಿದೆ.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಪ್ರದರ್ಶನ: ಕೈ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿದ ಬಿಜೆಪಿಗರು

ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ 12 ಮಂದಿ ಆಕಾಂಕ್ಷಿಗಳಿದ್ದರು. ಈ ಪೈಕಿ ಇಂದು ಗಜೇಂದ್ರ ಅವರನ್ನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ರೊಚ್ಚಿಗೆದ್ದ ಇನ್ನೊಂದು ಗುಂಪು ಗಲಾಟೆ ಮಾಡಿದೆ. ಮೂಡಿಗೆರೆ ಪಟ್ಟಣದ ಬಿಜೆಪಿ ಕಚೇರಿಯ ಮುಂಭಾಗ ಹೊಡೆದಾಟ ನಡೆದಿದ್ದು, ಇದರಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ. ರತನ್ ಅವರಿಗೆ ಗಾಯವಾಗಿದ್ದು,ಕೂಡಲೇ ಅವರನ್ನು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್