AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮುಖಂಡರ ನಡುವೆ ಹೊಡೆದಾಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಅಧ್ಯಕ್ಷರ ನೇಮಕ ವಿಚಾರದಲ್ಲಿ ಬಿಜೆಪಿ ಮುಖಂಡರ ಜಗಳ ಬೀದಿಗೆ ಬಿದ್ದಿದೆ.ಮೂಡಿಗೆರೆ ತಾಲೂಕು ಅಧ್ಯಕ್ಷ ಹುದ್ದೆಗಾಗಿ ಬಿಜೆಪಿ ಮುಖಂಡರ ನಡುವೆ ಮಾರಾಮಾರಿ ನಡೆದಿದ್ದು, ಗಲಾಟೆಯಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರೊಬ್ಬರಿಗೆ ಗಾಯವಾಗಿದೆ. ಇನ್ನು ಬೀದಿಯಲ್ಲಿ ಹೊಡೆದಾಡುಕೊಂಡಿರುವ ವಿಡಿಯೋ ಫುಲ್ ವೈರಲ್ ಆಗಿದೆ.

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮುಖಂಡರ ನಡುವೆ ಹೊಡೆದಾಟ
TV9 Web
| Edited By: |

Updated on: Feb 09, 2024 | 7:35 PM

Share

ಚಿಕ್ಕಮಗಳೂರು, (ಫೆಬ್ರವರಿ 09): ಲೋಕಸಭಾ ಚುನಾವಣೆ (Loksabha Elections 2024) ಸಂಬಂಧ ಕರ್ನಾಟಕ ಬಿಜೆಪಿಯಲ್ಲಿರುವ ಅಸಮಾಧಾನಗಳನ್ನು ಬಿವೈ ವಿಜಯೇಂದ್ರ(BY Vijayendra) ಹಾಗೂ ಯಡಿಯೂರಪ್ಪ (BS Yediyurappa) ಒಂದೊಂದಾಗಿಯೇ ಬಗೆಹರಿಸುತ್ತಿದ್ದಾರೆ. ಇದರ ಮಧ್ಯೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ (Chikkamagaluru BJP) ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮೂಡಿಗೆರೆ ತಾಲೂಕು ಅಧ್ಯಕ್ಷ ನೇಮಕ ವಿಚಾರದಲ್ಲಿ ಬಿಜೆಪಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ.ಬೀದಿಯಲ್ಲಿ ಹೊಡೆದಾಟದ ವಿಡಿಯೋ ವೈರಲ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಮೂಡಿಗೆರೆ ನೂತನ ಅಧ್ಯಕ್ಷರನ್ನಾಗಿ ಗಜೇಂದ್ರ ಅವರನ್ನು ನೇಮಕ ಮಾಡಿ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಆದೇಶ ಹೊರಡಿಸಿದ್ದು, ಇದರ ಬೆನ್ನಲ್ಲೇ ಇನ್ನುಳಿದ ಆಕಾಂಕ್ಷಿಗಳ ಆಕ್ರೋಶದ ಕಟ್ಟೆ ಹೊಡೆದಿದೆ. ಕೆ.ಸಿ.ರತನ್ ಹಸ್ತ ಕ್ಷೇಪದಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತೋರ್ವ ಆಕಾಂಕ್ಷಿ ಭರತ್ ಗಲಾಟೆ ಮಾಡಿದ್ದಾರೆ. ಈ ವೇಳೆ .ರತನ್ ಅವರಿಗೆ ಗಾಯವಾಗಿದೆ.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಪ್ರದರ್ಶನ: ಕೈ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿದ ಬಿಜೆಪಿಗರು

ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ 12 ಮಂದಿ ಆಕಾಂಕ್ಷಿಗಳಿದ್ದರು. ಈ ಪೈಕಿ ಇಂದು ಗಜೇಂದ್ರ ಅವರನ್ನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ರೊಚ್ಚಿಗೆದ್ದ ಇನ್ನೊಂದು ಗುಂಪು ಗಲಾಟೆ ಮಾಡಿದೆ. ಮೂಡಿಗೆರೆ ಪಟ್ಟಣದ ಬಿಜೆಪಿ ಕಚೇರಿಯ ಮುಂಭಾಗ ಹೊಡೆದಾಟ ನಡೆದಿದ್ದು, ಇದರಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ. ರತನ್ ಅವರಿಗೆ ಗಾಯವಾಗಿದ್ದು,ಕೂಡಲೇ ಅವರನ್ನು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ