AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟ; ವಸತಿ ಶಾಲೆಯಲ್ಲಿರುವ 40 ಜನರಿಗೆ ಸೋಂಕು ದೃಢ

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಿಗೋಡು ಗ್ರಾಮದ ಬಳಿಯಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟಗೊಂಡಿದೆ. ವಸತಿ ಶಾಲೆಯಲ್ಲಿರುವ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಈಗ ಜವಾಹರ್ ನವೋದಯ ವಿದ್ಯಾಲಯ ಸೀಲ್‌ಡೌನ್ ಮಾಡಲಾಗಿದೆ.

ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟ; ವಸತಿ ಶಾಲೆಯಲ್ಲಿರುವ 40 ಜನರಿಗೆ ಸೋಂಕು ದೃಢ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 05, 2021 | 8:29 AM

Share

ಚಿಕ್ಕಮಗಳೂರು: ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಿದೆ. ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟಗೊಂಡಿದೆ. ಇದರ ನಡುವೆ ಒಮಿಕ್ರಾನ್ ಕರ್ನಾಟಕಕ್ಕೆ ಕಾಲಿಟ್ಟಿರುವುದು ಆತಂಕ ದುಪ್ಪಟ್ಟಾಗಿದೆ. ಕರ್ನಾಟಕದಲ್ಲಿ ಎರಡು ಒಮಿಕ್ರಾನ್ ಕೇಸ್ ದಾಖಲಾಗಿದ್ದು ದೇಶದಲ್ಲಿ ನಿನ್ನೆ ಮತ್ತೆರಡು ಕೇಸ್ ಪತ್ತೆಯಾಗಿವೆ.

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಿಗೋಡು ಗ್ರಾಮದ ಬಳಿಯಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟಗೊಂಡಿದೆ. ವಸತಿ ಶಾಲೆಯಲ್ಲಿರುವ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಈಗ ಜವಾಹರ್ ನವೋದಯ ವಿದ್ಯಾಲಯ ಸೀಲ್‌ಡೌನ್ ಮಾಡಲಾಗಿದೆ.

ಮೂವರು ವಿದ್ಯಾರ್ಥಿಗಳು, 4 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ವಸತಿ ಶಾಲೆಯಲ್ಲಿದ್ದ 418 ವಿದ್ಯಾರ್ಥಿಗಳು, ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವಿದ್ಯಾರ್ಥಿಗಳು, ಸಿಬ್ಬಂದಿಗೆ ರೋಗ ಲಕ್ಷಣಗಳಿಲ್ಲ. ಜಿಲ್ಲಾಡಳಿತ ವಸತಿ ಶಾಲೆಯಲ್ಲಿಯೇ ಕ್ವಾರಂಟೈನ್ ವ್ಯವಸ್ಥೆ ಮಾಡಿದೆ. ವಸತಿ ಶಾಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಜಗತ್ತಿನ 31 ದೇಶಗಳಲ್ಲಿ ಒಮಿಕ್ರಾನ್ ಪತ್ತೆ ದಕ್ಷಿಣ ಆಫ್ರಿಕಾದಲ್ಲಿ 227, ಬೋಟ್ಸ್ವಾನ್ 21 ಸೋಂಕಿತರು ಪತ್ತೆಯಾದ್ರೆ, ಬೆಲ್ಜಿಯಂ 6, ಇಂಗ್ಲೆಂಡ್ 74, ಜೆರ್ಮನ್ 51, ಆಸ್ಟ್ರೇಲಿಯಾ 11, ಇಟಲಿ 4, ಜೆಕ್ ಗಣರಾಜ್ಯ 1, ಡೆನ್ಮಾರ್ಕ್ 2, ಆಸ್ಟ್ರಿಯಾ 11, ಕೆನಡಾ 10 , ಸ್ವಿಡನ್ನಲ್ಲಿ 1, ಸ್ವಿಟ್ಜರ್ಲ್ಯಾಂಡ್ ನಲ್ಲಿ 6, ಸ್ಪೇನ್ನಲ್ಲಿ 7, ಪೋರ್ಚುಗಲ್ ನಲ್ಲಿ 13, ಜಪಾನ್ 2, ಫ್ರಾನ್ಸ್ 4, ಘನಾ 33, ದಕ್ಷಿಣ ಕೋರಿಯಾದಲ್ಲಿ 3, ನೈಜೀರಿಯಾದಲ್ಲಿ 3, ಬ್ರಿಜಿಲ್ ನಲ್ಲಿ 2, ಅಮೆರಿಕದಲ್ಲಿ 16 ಒಮಿಕ್ರಾನ್ ಕೇಸ್ ಪತ್ತೆಯಾಗಿವೆ.

ದೇಶದ ಎಲ್ಲ ಪ್ರಮುಖ ನಗರಗಳಲ್ಲೂ ಒಮಿಕ್ರಾನ್ ಇದೆ ಒಂದ್ಕಡೆ ಒಮಿಕ್ರಾನ್ ತಲೆನೋವು ತಂದಿಟ್ಟಿದ್ರೆ, CSIR-CCMB ಮುಖ್ಯಸ್ಥ ರಾಕೇಶ್ ಮಿಶ್ರಾ ಆತಂಕ ಪಡೋ ಅಗತ್ಯವಿಲ್ಲ ಎಂದಿದ್ದಾರೆ. ಯಾಕಂದ್ರೆ, ದೇಶದಲ್ಲಿ ಅಂದ್ರೆ ಕರ್ನಾಟಕದಲ್ಲಿ ಯಾವುದೇ ವಿದೇಶ ಪ್ರಯಾಣದ ಹಿಸ್ಟರಿ ಇಲ್ಲದವರಲ್ಲೂ ಒಮಿಕ್ರಾನ್ ವೈರಸ್ ಪತ್ತೆಯಾಗಿದೆ ಹೀಗಾಗಿ, ಈ ವೈರಸ್ ವಿದೇಶದಿಂದ ಬರ್ತಿಲ್ಲ ಈಗಾಗಲೇ ಒಮಿಕ್ರಾನ್ ದೇಶದಲ್ಲೇ ಇದೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಶೇ.100ರ ಸಾಧನೆ ಮಾಡಿದ ಹಿಮಾಚಲ ಪ್ರದೇಶ; ಎರಡೂ ಡೋಸ್​ ಪೂರ್ಣ, ಡಿ.5ಕ್ಕೆ ಸನ್ಮಾನ ಕಾರ್ಯಕ್ರಮ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ