AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಶಾಲೆಯ ಅಕ್ರಮ ಪ್ರಶ್ನಿಸಿದ್ದಕ್ಕೆ ಶಿಕ್ಷಕಿ ಮೈಮೇಲೆ ಬಂದ ದೇವರು; ವಿಡಿಯೋ ವೈರಲ್​

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಟ್ಟಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಡಳಿತಾತ್ಮಕವಾಗಿ ಲೋಪ ಆಗಿದೆ ಎಂಬ ದೂರು ಬಂದ ಹಿನ್ನೆಲೆ ಇಂದು (ಆ.31) ಬಿಇಓ ಶಾಲೆಗೆ ಭೇಟಿ ನೀಡಿದ್ದರು. ಬಳಿಕ ತನಿಖೆ ಆರಂಭವಾಗುತ್ತಿದ್ದಂತೆ ಮುಖ್ಯ ಶಿಕ್ಷಕಿ ದೇವರು ಬಂದಂತೆ ನಟಿಸಿದ್ದಾರೆ. ಕೂಡಲೇ ಮೂಡಿಗೆರೆ ಬಿಇಓ ಶಿಕ್ಷಕಿಯನ್ನು ತನಿಖೆ ನಡೆಸದೆ ಶಾಲೆಯಿಂದ ತೆರಳಿರುವ ಘಟನೆ ನಡೆದಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Aug 31, 2023 | 2:45 PM

Share

ಚಿಕ್ಕಮಗಳೂರು, ಆ.31: ಕೆಲವೊಮ್ಮೆ ನಮ್ಮ ಊಹೆಗೂ ಮೀರಿ ವಿಚಿತ್ರ ಘಟನೆಗಳು ನಡೆಯುತ್ತದೆ. ಅದರಂತೆ ಇದೀಗ ಶಾಲೆಯ ಅಕ್ರಮ ಪ್ರಶ್ನಿಸಿದ್ದಕ್ಕೆ ಮುಖ್ಯಶಿಕ್ಷಕಿ (HeadMaster) ಲಲಿತಮ್ಮ ಎಂಬುವವರ ಮೈಮೇಲೆ ಏಕಾಏಕಿ ದೇವರು ಬಂದ ಘಟನೆ ಚಿಕ್ಕಮಗಳೂರು (Chikmagalur) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಬೆಟ್ಟಗೆರೆ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ನಡೆದಿದೆ. ಈ ವೇಳೆ ‘ಮಾಜಿ ಸಚಿವ ಬಿಬಿ ನಿಂಗಯ್ಯ ರಕ್ತಕಾರಿ ಸಾಯ್ತಾನೆ ಬಿಡಲ್ಲ ಅವರನ್ನು ಎಂಬ ಮುಖ್ಯ ಶಿಕ್ಷಕಿಯ ಮಾತು ಕೇಳಿ ಬಿಇಓ ಹಾಗೂ ಇನ್ನಿತರ ಶಿಕ್ಷಕರು ತಬ್ಬಿಬ್ಬಾಗಿದ್ದಾರೆ.

ಶಾಲೆಗೆ ಭೇಟಿ ನೀಡಿದ್ದ ಬಿಇಓ

ಶಾಲೆಯಲ್ಲಿ ಅಡಳಿತಾತ್ಮಕವಾಗಿ ಲೋಪ ಆಗಿದೆ ಎಂಬ ದೂರು ಬಂದ ಹಿನ್ನೆಲೆ ಇಂದು (ಆ.31) ಬಿಇಓ ಶಾಲೆಗೆ ಭೇಟಿ ನೀಡಿದ್ದರು. ಬಳಿಕ ಶಾಲೆಯ ಕಡತಗಳ ಕುರಿತು ಮಾಹಿತಿ ಪಡೆಯಲು ಮುಂದಾಗುತ್ತಿದ್ದಂತೆ ಶಿಕ್ಷಕಿಯ ಮಾತಿನ ದಾಟಿ ದಿಢೀರ್ ಬದಲಾವಣೆಯಾಗಿ ‘ಮೊದಲು ದೇವಸ್ಥಾನ ಕಟ್ಟಿ ನಂತರ ಶಾಲೆಯನ್ನು ನಡೆಸಿ. ಯಾರನ್ನು ಬಿಡೋಲ್ಲ 9 ಮಂದಿ ಜೀವ ಪಡೆಯುತ್ತೇನೆ ಎಂದಿದ್ದಾರೆ. ಮುಖ್ಯ ಶಿಕ್ಷಕಿಯ ವಿಚಿತ್ರ ಮಾತಿನ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಗದಗ: ಸರ್ಕಾರಿ ಶಾಲೆಯ ಮೈದಾನದಲ್ಲಿ ತೆಲೆ ಎತ್ತಿದ ಅಕ್ರಮ ಮನೆಗಳು; ನಮ್ಮ ಶಾಲೆ ಉಳಿಸಿ ಎಂದು ವಿದ್ಯಾರ್ಥಿಗಳ ಆಕ್ರೋಶ!

ಶಿಕ್ಷಕಿಯನ್ನು ತನಿಖೆ ನಡೆಸದೆ ಶಾಲೆಯಿಂದ ತೆರಳಿದ ಮೂಡಿಗೆರೆ ಬಿಇಓ

ಹೌದು, ಕುಡಿಯುವ ನೀರು, ಶೌಚಾಲಯದ ಹಣ ದುರುಪಯೋಗದ ಆರೋಪ ಕೇಳಿಬಂದಿದ್ದ ಹಿನ್ನಲೆ ಮುಖ್ಯ ಶಿಕ್ಷಕಿ ಲಲಿತಮ್ಮ ಅವರನ್ನು ತನಿಖೆ ಮಾಡಲು ಬಿಇಓ ಮತ್ತು ಸಿಬ್ಬಂದಿ ಶಾಲೆಗೆ ಆಗಮಿಸಿದ್ದರು. ಇನ್ನು ತನಿಖೆ ಆರಂಭವಾಗುತ್ತಿದ್ದಂತೆ ಮುಖ್ಯ ಶಿಕ್ಷಕಿ ದೇವರು ಬಂದಂತೆ ನಟಿಸಿದ್ದಾರೆ. ಕೂಡಲೇ ಮೂಡಿಗೆರೆ ಬಿಇಓ ಶಿಕ್ಷಕಿಯನ್ನು ತನಿಖೆ ನಡೆಸದೆ ಶಾಲೆಯಿಂದ ತೆರಳಿದ್ದಾರೆ. ಇದೀಗ ಮುಖ್ಯ ಶಿಕ್ಷಕಿ ವರ್ತನೆಗೆ ಎಸ್​ಡಿಎಂಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಎಸ್​ಡಿಎಂಸಿ ಅಧ್ಯಕ್ಷರು ಬಿಇಓಗೆ ದೂರು ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Thu, 31 August 23

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ