AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಶಾಲೆಯ ಅಕ್ರಮ ಪ್ರಶ್ನಿಸಿದ್ದಕ್ಕೆ ಶಿಕ್ಷಕಿ ಮೈಮೇಲೆ ಬಂದ ದೇವರು; ವಿಡಿಯೋ ವೈರಲ್​

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಟ್ಟಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಡಳಿತಾತ್ಮಕವಾಗಿ ಲೋಪ ಆಗಿದೆ ಎಂಬ ದೂರು ಬಂದ ಹಿನ್ನೆಲೆ ಇಂದು (ಆ.31) ಬಿಇಓ ಶಾಲೆಗೆ ಭೇಟಿ ನೀಡಿದ್ದರು. ಬಳಿಕ ತನಿಖೆ ಆರಂಭವಾಗುತ್ತಿದ್ದಂತೆ ಮುಖ್ಯ ಶಿಕ್ಷಕಿ ದೇವರು ಬಂದಂತೆ ನಟಿಸಿದ್ದಾರೆ. ಕೂಡಲೇ ಮೂಡಿಗೆರೆ ಬಿಇಓ ಶಿಕ್ಷಕಿಯನ್ನು ತನಿಖೆ ನಡೆಸದೆ ಶಾಲೆಯಿಂದ ತೆರಳಿರುವ ಘಟನೆ ನಡೆದಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Aug 31, 2023 | 2:45 PM

Share

ಚಿಕ್ಕಮಗಳೂರು, ಆ.31: ಕೆಲವೊಮ್ಮೆ ನಮ್ಮ ಊಹೆಗೂ ಮೀರಿ ವಿಚಿತ್ರ ಘಟನೆಗಳು ನಡೆಯುತ್ತದೆ. ಅದರಂತೆ ಇದೀಗ ಶಾಲೆಯ ಅಕ್ರಮ ಪ್ರಶ್ನಿಸಿದ್ದಕ್ಕೆ ಮುಖ್ಯಶಿಕ್ಷಕಿ (HeadMaster) ಲಲಿತಮ್ಮ ಎಂಬುವವರ ಮೈಮೇಲೆ ಏಕಾಏಕಿ ದೇವರು ಬಂದ ಘಟನೆ ಚಿಕ್ಕಮಗಳೂರು (Chikmagalur) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಬೆಟ್ಟಗೆರೆ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ನಡೆದಿದೆ. ಈ ವೇಳೆ ‘ಮಾಜಿ ಸಚಿವ ಬಿಬಿ ನಿಂಗಯ್ಯ ರಕ್ತಕಾರಿ ಸಾಯ್ತಾನೆ ಬಿಡಲ್ಲ ಅವರನ್ನು ಎಂಬ ಮುಖ್ಯ ಶಿಕ್ಷಕಿಯ ಮಾತು ಕೇಳಿ ಬಿಇಓ ಹಾಗೂ ಇನ್ನಿತರ ಶಿಕ್ಷಕರು ತಬ್ಬಿಬ್ಬಾಗಿದ್ದಾರೆ.

ಶಾಲೆಗೆ ಭೇಟಿ ನೀಡಿದ್ದ ಬಿಇಓ

ಶಾಲೆಯಲ್ಲಿ ಅಡಳಿತಾತ್ಮಕವಾಗಿ ಲೋಪ ಆಗಿದೆ ಎಂಬ ದೂರು ಬಂದ ಹಿನ್ನೆಲೆ ಇಂದು (ಆ.31) ಬಿಇಓ ಶಾಲೆಗೆ ಭೇಟಿ ನೀಡಿದ್ದರು. ಬಳಿಕ ಶಾಲೆಯ ಕಡತಗಳ ಕುರಿತು ಮಾಹಿತಿ ಪಡೆಯಲು ಮುಂದಾಗುತ್ತಿದ್ದಂತೆ ಶಿಕ್ಷಕಿಯ ಮಾತಿನ ದಾಟಿ ದಿಢೀರ್ ಬದಲಾವಣೆಯಾಗಿ ‘ಮೊದಲು ದೇವಸ್ಥಾನ ಕಟ್ಟಿ ನಂತರ ಶಾಲೆಯನ್ನು ನಡೆಸಿ. ಯಾರನ್ನು ಬಿಡೋಲ್ಲ 9 ಮಂದಿ ಜೀವ ಪಡೆಯುತ್ತೇನೆ ಎಂದಿದ್ದಾರೆ. ಮುಖ್ಯ ಶಿಕ್ಷಕಿಯ ವಿಚಿತ್ರ ಮಾತಿನ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಗದಗ: ಸರ್ಕಾರಿ ಶಾಲೆಯ ಮೈದಾನದಲ್ಲಿ ತೆಲೆ ಎತ್ತಿದ ಅಕ್ರಮ ಮನೆಗಳು; ನಮ್ಮ ಶಾಲೆ ಉಳಿಸಿ ಎಂದು ವಿದ್ಯಾರ್ಥಿಗಳ ಆಕ್ರೋಶ!

ಶಿಕ್ಷಕಿಯನ್ನು ತನಿಖೆ ನಡೆಸದೆ ಶಾಲೆಯಿಂದ ತೆರಳಿದ ಮೂಡಿಗೆರೆ ಬಿಇಓ

ಹೌದು, ಕುಡಿಯುವ ನೀರು, ಶೌಚಾಲಯದ ಹಣ ದುರುಪಯೋಗದ ಆರೋಪ ಕೇಳಿಬಂದಿದ್ದ ಹಿನ್ನಲೆ ಮುಖ್ಯ ಶಿಕ್ಷಕಿ ಲಲಿತಮ್ಮ ಅವರನ್ನು ತನಿಖೆ ಮಾಡಲು ಬಿಇಓ ಮತ್ತು ಸಿಬ್ಬಂದಿ ಶಾಲೆಗೆ ಆಗಮಿಸಿದ್ದರು. ಇನ್ನು ತನಿಖೆ ಆರಂಭವಾಗುತ್ತಿದ್ದಂತೆ ಮುಖ್ಯ ಶಿಕ್ಷಕಿ ದೇವರು ಬಂದಂತೆ ನಟಿಸಿದ್ದಾರೆ. ಕೂಡಲೇ ಮೂಡಿಗೆರೆ ಬಿಇಓ ಶಿಕ್ಷಕಿಯನ್ನು ತನಿಖೆ ನಡೆಸದೆ ಶಾಲೆಯಿಂದ ತೆರಳಿದ್ದಾರೆ. ಇದೀಗ ಮುಖ್ಯ ಶಿಕ್ಷಕಿ ವರ್ತನೆಗೆ ಎಸ್​ಡಿಎಂಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಎಸ್​ಡಿಎಂಸಿ ಅಧ್ಯಕ್ಷರು ಬಿಇಓಗೆ ದೂರು ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Thu, 31 August 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?