AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಶಾಲೆಯ ಅಕ್ರಮ ಪ್ರಶ್ನಿಸಿದ್ದಕ್ಕೆ ಶಿಕ್ಷಕಿ ಮೈಮೇಲೆ ಬಂದ ದೇವರು; ವಿಡಿಯೋ ವೈರಲ್​

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಟ್ಟಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಡಳಿತಾತ್ಮಕವಾಗಿ ಲೋಪ ಆಗಿದೆ ಎಂಬ ದೂರು ಬಂದ ಹಿನ್ನೆಲೆ ಇಂದು (ಆ.31) ಬಿಇಓ ಶಾಲೆಗೆ ಭೇಟಿ ನೀಡಿದ್ದರು. ಬಳಿಕ ತನಿಖೆ ಆರಂಭವಾಗುತ್ತಿದ್ದಂತೆ ಮುಖ್ಯ ಶಿಕ್ಷಕಿ ದೇವರು ಬಂದಂತೆ ನಟಿಸಿದ್ದಾರೆ. ಕೂಡಲೇ ಮೂಡಿಗೆರೆ ಬಿಇಓ ಶಿಕ್ಷಕಿಯನ್ನು ತನಿಖೆ ನಡೆಸದೆ ಶಾಲೆಯಿಂದ ತೆರಳಿರುವ ಘಟನೆ ನಡೆದಿದೆ.

Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 31, 2023 | 2:45 PM

ಚಿಕ್ಕಮಗಳೂರು, ಆ.31: ಕೆಲವೊಮ್ಮೆ ನಮ್ಮ ಊಹೆಗೂ ಮೀರಿ ವಿಚಿತ್ರ ಘಟನೆಗಳು ನಡೆಯುತ್ತದೆ. ಅದರಂತೆ ಇದೀಗ ಶಾಲೆಯ ಅಕ್ರಮ ಪ್ರಶ್ನಿಸಿದ್ದಕ್ಕೆ ಮುಖ್ಯಶಿಕ್ಷಕಿ (HeadMaster) ಲಲಿತಮ್ಮ ಎಂಬುವವರ ಮೈಮೇಲೆ ಏಕಾಏಕಿ ದೇವರು ಬಂದ ಘಟನೆ ಚಿಕ್ಕಮಗಳೂರು (Chikmagalur) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಬೆಟ್ಟಗೆರೆ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ನಡೆದಿದೆ. ಈ ವೇಳೆ ‘ಮಾಜಿ ಸಚಿವ ಬಿಬಿ ನಿಂಗಯ್ಯ ರಕ್ತಕಾರಿ ಸಾಯ್ತಾನೆ ಬಿಡಲ್ಲ ಅವರನ್ನು ಎಂಬ ಮುಖ್ಯ ಶಿಕ್ಷಕಿಯ ಮಾತು ಕೇಳಿ ಬಿಇಓ ಹಾಗೂ ಇನ್ನಿತರ ಶಿಕ್ಷಕರು ತಬ್ಬಿಬ್ಬಾಗಿದ್ದಾರೆ.

ಶಾಲೆಗೆ ಭೇಟಿ ನೀಡಿದ್ದ ಬಿಇಓ

ಶಾಲೆಯಲ್ಲಿ ಅಡಳಿತಾತ್ಮಕವಾಗಿ ಲೋಪ ಆಗಿದೆ ಎಂಬ ದೂರು ಬಂದ ಹಿನ್ನೆಲೆ ಇಂದು (ಆ.31) ಬಿಇಓ ಶಾಲೆಗೆ ಭೇಟಿ ನೀಡಿದ್ದರು. ಬಳಿಕ ಶಾಲೆಯ ಕಡತಗಳ ಕುರಿತು ಮಾಹಿತಿ ಪಡೆಯಲು ಮುಂದಾಗುತ್ತಿದ್ದಂತೆ ಶಿಕ್ಷಕಿಯ ಮಾತಿನ ದಾಟಿ ದಿಢೀರ್ ಬದಲಾವಣೆಯಾಗಿ ‘ಮೊದಲು ದೇವಸ್ಥಾನ ಕಟ್ಟಿ ನಂತರ ಶಾಲೆಯನ್ನು ನಡೆಸಿ. ಯಾರನ್ನು ಬಿಡೋಲ್ಲ 9 ಮಂದಿ ಜೀವ ಪಡೆಯುತ್ತೇನೆ ಎಂದಿದ್ದಾರೆ. ಮುಖ್ಯ ಶಿಕ್ಷಕಿಯ ವಿಚಿತ್ರ ಮಾತಿನ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಗದಗ: ಸರ್ಕಾರಿ ಶಾಲೆಯ ಮೈದಾನದಲ್ಲಿ ತೆಲೆ ಎತ್ತಿದ ಅಕ್ರಮ ಮನೆಗಳು; ನಮ್ಮ ಶಾಲೆ ಉಳಿಸಿ ಎಂದು ವಿದ್ಯಾರ್ಥಿಗಳ ಆಕ್ರೋಶ!

ಶಿಕ್ಷಕಿಯನ್ನು ತನಿಖೆ ನಡೆಸದೆ ಶಾಲೆಯಿಂದ ತೆರಳಿದ ಮೂಡಿಗೆರೆ ಬಿಇಓ

ಹೌದು, ಕುಡಿಯುವ ನೀರು, ಶೌಚಾಲಯದ ಹಣ ದುರುಪಯೋಗದ ಆರೋಪ ಕೇಳಿಬಂದಿದ್ದ ಹಿನ್ನಲೆ ಮುಖ್ಯ ಶಿಕ್ಷಕಿ ಲಲಿತಮ್ಮ ಅವರನ್ನು ತನಿಖೆ ಮಾಡಲು ಬಿಇಓ ಮತ್ತು ಸಿಬ್ಬಂದಿ ಶಾಲೆಗೆ ಆಗಮಿಸಿದ್ದರು. ಇನ್ನು ತನಿಖೆ ಆರಂಭವಾಗುತ್ತಿದ್ದಂತೆ ಮುಖ್ಯ ಶಿಕ್ಷಕಿ ದೇವರು ಬಂದಂತೆ ನಟಿಸಿದ್ದಾರೆ. ಕೂಡಲೇ ಮೂಡಿಗೆರೆ ಬಿಇಓ ಶಿಕ್ಷಕಿಯನ್ನು ತನಿಖೆ ನಡೆಸದೆ ಶಾಲೆಯಿಂದ ತೆರಳಿದ್ದಾರೆ. ಇದೀಗ ಮುಖ್ಯ ಶಿಕ್ಷಕಿ ವರ್ತನೆಗೆ ಎಸ್​ಡಿಎಂಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಎಸ್​ಡಿಎಂಸಿ ಅಧ್ಯಕ್ಷರು ಬಿಇಓಗೆ ದೂರು ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Thu, 31 August 23

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್