Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಸರ್ಕಾರಿ ಭೂಮಿ ಒತ್ತುವರಿ; ದಕ್ಷಿಣ ಕರ್ನಾಟಕದಲ್ಲಿ ಜಿಲ್ಲೆಗೆ ಅಗ್ರಸ್ಥಾನ

ದಕ್ಷಿಣ ಕರ್ನಾಟಕದಲ್ಲಿ ಸರ್ಕಾರಿ ಭೂಮಿ ಒತ್ತುವರಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ಅಗ್ರಸ್ಥಾನದಲ್ಲಿದೆ. ಜಿಲ್ಲೆಯಾದ್ಯಂತ ಎರಡು ಲಕ್ಷ ಎಕರೆಗೂ ಹೆಚ್ಚು ಸರಕಾರಿ ಭೂಮಿ ಒತ್ತುವರಿಯಾಗಿದೆ.

ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಸರ್ಕಾರಿ ಭೂಮಿ ಒತ್ತುವರಿ; ದಕ್ಷಿಣ ಕರ್ನಾಟಕದಲ್ಲಿ ಜಿಲ್ಲೆಗೆ ಅಗ್ರಸ್ಥಾನ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Aug 06, 2023 | 1:59 PM

ಚಿಕ್ಕಮಗಳೂರು: ದಕ್ಷಿಣ ಕರ್ನಾಟಕದಲ್ಲಿ (South Karnataka) ಸರ್ಕಾರಿ ಭೂಮಿ ಒತ್ತುವರಿಯಲ್ಲಿ (Government Land Encroachment) ಚಿಕ್ಕಮಗಳೂರು (Chikkamagaluru) ಜಿಲ್ಲೆ ಅಗ್ರಸ್ಥಾನದಲ್ಲಿದೆ. ಜಿಲ್ಲೆಯಾದ್ಯಂತ ಎರಡು ಲಕ್ಷ ಎಕರೆಗೂ ಹೆಚ್ಚು ಸರಕಾರಿ ಭೂಮಿ ಒತ್ತುವರಿಯಾಗಿದ್ದು, ಸಾರ್ವಜನಿಕ ಉದ್ದೇಶಕ್ಕೆ ಭೂಮಿ ಸಿಗುವುದು ಕಷ್ಟವಾಗಿದೆ ಎಂದು ಜಿಲ್ಲಾ ನೋಡಲ್ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಹೇಳಿದರು ಎಂದು ಖಾಸಗಿ ಸುದ್ದಿ ಸಂಸ್ಥೆ ಟೈಮ್ಸ್​ ಆಫ್​ ಇಂಡಿಯಾ ವರದಿ ಮಾಡಿದೆ.

ಸಾಗುವಳಿ ಮಾಡಲು ಗೋಮಾಳ ಜಮೀನು ಮಂಜೂರು ಮಾಡಲು ಯಾವುದೇ ಅಧಿಕಾರಿಗಳಿಗೆ ಅಧಿಕಾರವಿಲ್ಲ, ಮಂಜೂರು ಮಾಡಿದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 2002ಕ್ಕಿಂತ ಮೊದಲು ಯಾರಾದರೂ ಗೋಮಾಳದ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದರೆ ಅದನ್ನು ಮಂಜೂರು ಮಾಡಬಹುದು. ಆದರೆ, ಖಾಸಗಿಯವರಿಗೆ ಗೋಮಾಳ ಭೂಮಿ ಮಂಜೂರು ಮಾಡುವಂತಿಲ್ಲ ಎಂದರು.

ಇದನ್ನೂ ಓದಿ: ಚಿಕ್ಕಮಗಳೂರು: ತಂತಿ ಉರುಳಿಗೆ ಸಿಲುಕಿ ನರಳಾಡಿದ ಮೂರು ವರ್ಷದ ಹೆಣ್ಣು ಚಿರತೆ; ಅರವಳಿಗೆ ಮದ್ದು ನೀಡಿ ರಕ್ಷಣೆ

ಜಮೀನು ಮಂಜೂರು ಮಾಡುವಾಗ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು. 50 ಎಕರೆ ಹೊಂದಿರುವವರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಮತ್ತು ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಅತಿಕ್ರಮಣದಿಂದ ಸ್ಮಶಾನಕ್ಕಾಗಿ ಮತ್ತು ಇತರ ಸಾರ್ವಜನಿಕ ಕಾರಣಗಳಿಗಾಗಿ ಭೂಮಿಯನ್ನು ಪಡೆಯುವುದು ಕಷ್ಟಕರವಾಗಿದೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಕಟಾರಿಯಾ ಮಾತನಾಡಿ, ನಿಯಮಾವಳಿ ಉಲ್ಲಂಘಿಸಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿರುವ 48 ಪ್ರಕರಣಗಳಿದ್ದು, ಒಂಬತ್ತು ತಹಶೀಲ್ದಾರ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ಜೈಲಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಇಂದು ಸೂರ್ಯಗ್ರಹಣ ಶನಿ ಪತ ಬದಲಾವಣೆ ಹೇಗೆ?
Daily Devotional: ಇಂದು ಸೂರ್ಯಗ್ರಹಣ ಶನಿ ಪತ ಬದಲಾವಣೆ ಹೇಗೆ?
Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ
Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್