ದೇವಸ್ಥಾನಕ್ಕೆ ಕೂಡಿಟ್ಟ ಹಣವನ್ನೂ ಸರ್ಕಾರಿ ಶಾಲೆಗೆ ಕೊಟ್ಟ ಗ್ರಾಮಸ್ಥರು; ಶಿಥಿಲಗೊಂಡಿದ್ದ ಶಾಲೆಗೆ ಮರುಜೀವ

ಗ್ರಾಮದ ಜನ ದೇವಸ್ಥಾನಕ್ಕೆಂದು ಇಟ್ಟಿದ್ದ ಹಣವನ್ನೂ ತಮ್ಮ ಮಕ್ಕಳು ಓದೋ ಶಾಲೆಗೆ ಕೊಟ್ಟಿರುವುದು ವಿಶೇಷ. ಮಕ್ಕಳಿಗೆ ಅಕ್ಷರ ಕಲಿಸೋ ಶಾಲೆ ಕೂಡ ನಮಗೆ ದೇವಸ್ಥಾನ ಇದ್ದಂತೆ ಎಂದು ಶಾಲೆ ಅಭಿವೃದ್ಧಿಗೆ ಹಣ ನೀಡಿದ್ದಾರೆ. ಊರಿನ ಮುಖಂಡರ ಜೊತೆ ಶಿಕ್ಷಕರು ಹೋದ ಕೂಡಲೇ ಯಾರೂ ಕೂಡ ಬರೀಗೈಲಿ ಕಳಿಸಿಲ್ಲ. ಎರಡೇ ಗಂಟೆಗೆ 35 ಸಾವಿರ ಹಣವನ್ನು ಹೊಂದಿಸಿ ಕೊಟ್ಟಿದ್ದಾರೆ.

ದೇವಸ್ಥಾನಕ್ಕೆ ಕೂಡಿಟ್ಟ ಹಣವನ್ನೂ ಸರ್ಕಾರಿ ಶಾಲೆಗೆ ಕೊಟ್ಟ ಗ್ರಾಮಸ್ಥರು; ಶಿಥಿಲಗೊಂಡಿದ್ದ ಶಾಲೆಗೆ ಮರುಜೀವ
ಶಿಥಿಲಗೊಂಡಿದ್ದ ಶಾಲೆಗೆ ಮರುಜೀವ
Follow us
| Updated By: preethi shettigar

Updated on: Apr 03, 2021 | 8:23 AM

ಚಿಕ್ಕಮಗಳೂರು: ಟ್ಯಾಕ್ಟ್ರಿ ಶೇಖ್ರಣ್ಣ 1000, ಸುರೇಶ 1000, ಆಂಜನಮ್ಮ 1000., ಶಂಕರಪ್ಪ 500, ರುದ್ರಪ್ಪ 500, ಸತೀಶ 700, ನವೀನ್ 100, ಚೇತನ್ 250 ಇದು ಯಾವುದೋ ದಂಡ ಅಥವಾ ಬಹುಮಾನದ ಹಣವನ್ನು ಘೋಷಿಸುತ್ತಿರೋ ಪಟ್ಟಿಯಲ್ಲ. ಬದಲಾಗಿ ಹಳ್ಳಿಯ ಜನ, ನಮ್ಮೂರ ದೇವಸ್ಥಾನ ಬೇರೆ ಅಲ್ಲ, ನಮ್ಮ ಮಕ್ಕಳು ಓದೋ ಶಾಲೆ ಬೇರೆ ಅಲ್ಲ ಅಂತ ಶಾಲೆಯ ಅಭಿವೃದ್ಧಿಗೆ ನೀಡಿರೋ ದೇಣಿಗೆ ಹಣದ ಸಣ್ಣ ಪಟ್ಟಿ. ಇದು ಶಾಲೆಯನ್ನ ಉಳಿಸಿಕೊಳ್ಳಲು ಸ್ವತಃ ಮುಂದಾದ ಗ್ರಾಮಸ್ಥರು ಪಣ ತೊಟ್ಟ ಬಗೆ.

ಸುಣ್ಣ ಬಣ್ಣದಿಂದ ಕಂಗೊಳಿಸುತ್ತಿರುವ ಈ ಶಾಲೆ ಚಿಕ್ಕಮಗಳೂರು ತಾಲೂಕಿನ ಸಿರಿಬಡಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದೋ? ನಾಳೆಯೋ? ಎನ್ನುವ ಪರಿಸ್ಥಿತಿಯಲ್ಲಿತ್ತು. ಯಾಕಂದ್ರೆ ಸರ್ಕಾರದಿಂದ ವರ್ಷಕ್ಕೆ ಕೇವಲ 6 ಸಾವಿರ ರೂಪಾಯಿ ಹಣ ಮಾತ್ರ ಬರ್ತಿತ್ತು. ಅದು ಸಹ ಎರಡು ಕಂತಿನಲ್ಲಿ! ಈ ಬಾರಿ ಕೊರೊನಾ ದೆಸೆಯಿಂದ ಆ ಹಣವೂ ಬಂದಿಲ್ಲ. ಹಾಗಂತ ಹಣವಿಲ್ಲ ಎಂದು ಶಾಲೆಯನ್ನು ನಿರ್ಲಕ್ಷ್ಯ ಮಾಡದ ಗ್ರಾಮಸ್ಥರು, ಹೀಗೆ ಬಿಟ್ರೆ ಶಾಲೆ ಬಿದ್ದೇ ಹೋಗುತ್ತೆ ಎಂದು ತಾವೇ ಮುಂದಾಗಿ ತಮ್ಮೂರ ಶಾಲೆಗೆ ಹೊಸ ರೂಪ ಕೊಟ್ಟಿದ್ದಾರೆ.

ಕೆಳ ಸಿರಿಬಡಿಗೆ ಹಾಗೂ ಮೇಲಿನ ಸಿರಿಬಡಿಗೆ ಗ್ರಾಮದಲ್ಲಿ ಸುಮಾರು 150 ಮನೆಗಳಿವೆ. ಎಲ್ಲರೂ ಸೇರಿ 100 ರಿಂದ 1000 ದವರೆಗೂ ಅವರ ಕೈಲಾದಷ್ಟು ಹಣ ಹಾಕಿ ₹35 ಸಾವಿರ ಹಣವನ್ನ ಶಾಲಾ ಶಿಕ್ಷಕರಿಗೆ ಕೊಟ್ಟಿದ್ದಾರೆ. ಆ ಹಣಕ್ಕೆ ಶಿಕ್ಷಕರೇ ಮತ್ತಷ್ಟು ಸೇರಿಸಿ ಆಗಲೋ, ಈಗಲೋ ಅಂತಿದ್ದ ಶಾಲೆಗೆ ಮರುಜೀವ ಕೊಟ್ಟಿದ್ದಾರೆ. ಮೇಲ್ಛಾವಣಿ ದುರಸ್ಥಿ ಮಾಡಿಸಿದ್ದಾರೆ. ಮಕ್ಕಳು ಕೂರುವುದಕ್ಕೆ ಕುರ್ಚಿ ವ್ಯವಸ್ಥೆ ಮಾಡಿದ್ದಾರೆ. 1 ರಿಂದ 7ನೇ ತರಗತಿವರೆಗೆ 48 ಮಕ್ಕಳು ಓದೋ ಎಂಟು ಕೊಠಡಿಗಳಿಗೂ ಸುಣ್ಣ ಬಣ್ಣ ಹೊಡೆಸಿ ಸಿಂಗರಿಸಿದ್ದಾರೆ. ಶಾಲೆಯಲ್ಲಿನ ಉತ್ತಮ ಶಿಕ್ಷಣ ವ್ಯವಸ್ಥೆ ಕಂಡು ಖಾಸಗಿ ಶಾಲೆಗೆ ಹೋಗ್ತಿದ್ದ ಸುಮಾರು 20 ಮಕ್ಕಳು ಇದೀಗ ಈ ಶಾಲೆಗೆ ಸೇರಿದ್ದಾರೆ.

Government School Developed with the help of villagers

ಅಂದಗೊಂಡ ಶಾಲೆಯ ಮುಂದೆ ಗ್ರಾಮಸ್ಥರು

ದೇವಸ್ಥಾನಕ್ಕೆ ಕೂಡಿಟ್ಟ ಹಣವನ್ನೂ ಶಾಲೆಗೆ ಕೊಟ್ಟರು ಗ್ರಾಮದ ಜನ ದೇವಸ್ಥಾನಕ್ಕೆಂದು ಇಟ್ಟಿದ್ದ ಹಣವನ್ನೂ ತಮ್ಮ ಮಕ್ಕಳು ಓದೋ ಶಾಲೆಗೆ ಕೊಟ್ಟಿರುವುದು ವಿಶೇಷ. ಮಕ್ಕಳಿಗೆ ಅಕ್ಷರ ಕಲಿಸೋ ಶಾಲೆ ಕೂಡ ನಮಗೆ ದೇವಸ್ಥಾನ ಇದ್ದಂತೆ ಎಂದು ಶಾಲೆ ಅಭಿವೃದ್ಧಿಗೆ ಹಣ ನೀಡಿದ್ದಾರೆ. ಊರಿನ ಮುಖಂಡರ ಜೊತೆ ಶಿಕ್ಷಕರು ಹೋದ ಕೂಡಲೇ ಯಾರೂ ಕೂಡ ಬರೀಗೈಲಿ ಕಳಿಸಿಲ್ಲ. ಎರಡೇ ಗಂಟೆಗೆ 35 ಸಾವಿರ ಹಣವನ್ನು ಹೊಂದಿಸಿ ಕೊಟ್ಟಿದ್ದಾರೆ. ಇದರಿಂದ ಇಂದು ಶಾಲೆ ನಳನಳಿಸುತ್ತಿದೆ. ಊರಿನ ಜನರ ಸಹಕಾರವನ್ನು ಕಂಡು ಬೆರಗಾದ ಶಿಕ್ಷಕರು ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸದ್ಯ ಊರಿನವರ ಹೃದಯ ಶ್ರೀಮಂತಿಕೆಯಿಂದ ಶಿಥಿಲಗೊಂಡಿದ್ದ ಶಾಲೆ ಇದೀಗ ಮರುಜೀವ ಪಡೆದಿದೆ. ಒಟ್ಟಾರೆ, ರಾಜ್ಯದ ಪ್ರತಿಯೊಂದು ಹಳ್ಳಿಯ ಜನರೂ ಸರ್ಕಾರದ ದಾರಿಗೆ ಕಾಯುತ್ತಾ ಕೂರದೇ ತಮ್ಮೂರ ಶಾಲೆಗಳನ್ನು ಇದೇ ರೀತಿಯಲ್ಲಿ ಉಳಿಸಿಕೊಳ್ಳಲು ಮುಂದಾದ್ರೆ ಯಾವ ಸರ್ಕಾರಿ ಶಾಲೆಗಳೂ ಬಾಗಿಲು ಹಾಕುವ ಪರಿಸ್ಥಿತಿಗೆ ತಲುಪುವುದಿಲ್ಲವೇನು. ಈ ನಿಟ್ಟಿನಲ್ಲಿ ಇಡೀ ರಾಜ್ಯಕ್ಕೆ ಸಿರಿಬಡಿಗೆ ಗ್ರಾಮಸ್ಥರು ಮಾದರಿಯಾಗಿದ್ದಾರೆ ಎಂದರೆ ಅತಿಶಯೋಕ್ತಿ ಅಲ್ಲ.

Government School Developed with the help of villagers

ಮರುಜೀವ ಪಡೆದು ಕಂಗೊಳಿಸುತ್ತಿರುವ ಸರ್ಕಾರಿ ಶಾಲೆ

(ವರದಿ: ಪ್ರಶಾಂತ್ – 9980914139)

ಇದನ್ನೂ ಓದಿ: ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಕೈಬೀಸಿ ಕರೆಯುತ್ತಿದೆ ಶಿಕ್ಷಕರ ಕುಂಚದಲ್ಲಿ ಅರಳಿರುವ ಚಿತ್ರ-ಚಿತ್ತಾರ 

ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದ ಹಾವೇರಿ ಯುವಕ

(Government School Developed with the help of villagers in Chikmagalur)

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!