AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಡಿಕೆ ಶಿವಕುಮಾರ್ ಎದುರೇ ಅಸಮಾಧಾನ ಹೊರಹಾಕಿದ ಹೆಚ್​ಡಿ ತಮ್ಮಯ್ಯ

ಬಿಜೆಪಿ ಏಜೆಂಟ್​ ಎಂದು ತಮ್ಮ ವಿರುದ್ಧ ಅಪಪ್ರಚಾರ ನಡೆಯುತ್ತಿರುವ ವಿಚಾರವಾಗಿ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿರುವ ಹೆಚ್​​ಡಿ ತಮ್ಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎದುರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು: ಡಿಕೆ ಶಿವಕುಮಾರ್ ಎದುರೇ ಅಸಮಾಧಾನ ಹೊರಹಾಕಿದ ಹೆಚ್​ಡಿ ತಮ್ಮಯ್ಯ
ಹೆಚ್ ಡಿ ತಮ್ಮಯ್ಯ
ಗಣಪತಿ ಶರ್ಮಾ
|

Updated on: Apr 10, 2023 | 5:16 PM

Share

ಚಿಕ್ಕಮಗಳೂರು: ಬಿಜೆಪಿ ಏಜೆಂಟ್​ ಎಂದು ತಮ್ಮ ವಿರುದ್ಧ ಅಪಪ್ರಚಾರ ನಡೆಯುತ್ತಿರುವ ವಿಚಾರವಾಗಿ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿರುವ ಹೆಚ್​​ಡಿ ತಮ್ಮಯ್ಯ (HD Thammaiah) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎದುರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ತಮ್ಮಯ್ಯಗೆ ಟಿಕೆಟ್ ನೀಡಬಾರದು ಎಂದು ಒಂದು ಬಣ ಆಕ್ಷೇಪ ವ್ಯಕ್ತಪಡಿಸಿದೆ. ತಮ್ಮಯ್ಯಗೆ ಟಿಕೆಟ್ ನೀಡುವ ವಿಚಾರವಾಗಿ ಪ್ರತಿಭಟನೆಗಳೂ ನಡೆದಿವೆ. ಈ ಮಧ್ಯೆ, ತಮ್ಮಯ್ಯ ಅವರು ಬಿಜೆಪಿ ಏಜೆಂಟ್​ ಎಂಬ ಆರೋಗಳೂ ಕೇಳಿಬಂದಿದ್ದವು. ಇದರಿಂದ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ.

ತಮ್ಮ ವಿರುದ್ಧದ ಅಪಪ್ರಚಾರದ ವಿಚಾರವಾಗಿ ಶೃಂಗೇರಿಯಲ್ಲಿ ಡಿಕೆ ಶಿವಕುಮಾರ್ ಬಳಿ ಪ್ರಸ್ತಾಪಿಸಿದ ತಮ್ಮಯ್ಯ, ಹೆಚ್​ಡಿ ತಮ್ಮಯ್ಯನನ್ನು ನಾವೇ ಕಾಂಗ್ರೆಸ್​ಗೆ ಕಳುಹಿಸಿದ್ದೇವೆ ಎಂಬುದಾಗಿ ಅವರು ಹೇಳುತ್ತಾರೆ. ಈ ಮೂಲಕ ನನ್ನ ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಷಡ್ಯಂತ್ರ ಮಾಡಿ ಚುನಾವಣೆಗೆ ಸಿದ್ಧರಾಗಿದ್ದಾರೆ. ಶಾರದಾಂಬೆ ಸನ್ನಿಧಾನದಲ್ಲಿ ಸತ್ಯ ಹೇಳುವೆ, ಒಳಒಪ್ಪಂದ ಮಾಡಿಕೊಂಡಿಲ್ಲ ಎಂದು ತಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್​ನಲ್ಲೇ ಕೆಲವರು ಬಿಜೆಪಿ ಪ್ರಾಯೋಜಿತ ವ್ಯಕ್ತಿಗಳು ಇದ್ದಾರೆ. ಈ ಹಿಂದೆ ಕಾಂಗ್ರೆಸ್​ ಸೋಲಲು ಅವರ ಪಾತ್ರವಿದೆ. ಸಿಟಿ ರವಿ ಜತೆ ಯಾಱರು ಒಳಒಪ್ಪಂದ ಮಾಡಿಕೊಂಡಿದ್ದಾರೆಂದು ಗೊತ್ತಿದೆ. ಒಂದು ಕಾಲದಲ್ಲಿ ರವಿ ಆಪ್ತನಾಗಿ ಇದ್ದುದರಿಂದ ಇದೆಲ್ಲವೂ ಚೆನ್ನಾಗಿ ಗೊತ್ತಿದೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ ಯಾರೇ ‘ಕೈ’ ಅಭ್ಯರ್ಥಿಯಾದರೂ ಗೆಲ್ಲಬೇಕು. ಕಾಂಗ್ರೆಸ್​ನಲ್ಲಿರುವ ಬಿಜೆಪಿ ಚೇಲಾಗಳು ನನ್ನ ವಿರುದ್ಧ ಆರೋಪ ಮಾಡುತ್ತಿವೆ ಎಂದು ತಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಟಿ ರವಿ, ಅವರ ಭಾವನ ಕುಟುಂಬ ಮಾಡಿರುವ ಹಗರಣ ಬಯಲಿಗೆ ಎಳೆಯುತ್ತೇನೆ ಎಂದೂ ತಮ್ಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಚಿಕ್ಕಮಗಳೂರು ಲಿಂಗಾಯತ​ ಮುಖಂಡ; ಸಿಟಿ ರವಿಗೆ ತಲೆ ಬಿಸಿ

ಸಿಟಿ ರವಿ ಆಪ್ತರಾಗಿದ್ದ ತಮ್ಮಯ್ಯ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇವರು ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ರಾಜಕೀಯ ಚಟುವಟಿಕೆಗಳೂ ಬಿರುಸುಗೊಂಡಿವೆ.

ಚಿಕ್ಕಮಗಳೂರಿನಲ್ಲಿ ಹೇಗಿದ್ದರೂ ಸಿಟಿ ರವಿನೇ ಗೆಲ್ಲೋದು ಸರ್ ಎಂದು ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ಹೇಳಿದ್ದಾರೆ ಎನ್ನಲಾದ ಆಡಿಯೋ ಇತ್ತೀಚೆಗೆ ವೈರಲ್​​​ ಆಗಿತ್ತಿ. ಆಡಿಯೋ ವೈರಲ್​ ಆಗುತ್ತಿದ್ದಂತೆ ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!