AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸರ್ಕಾರದ ಅಂಗಳಕ್ಕೆ ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ ವಿಚಾರ

2018ರ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು.

ಮತ್ತೆ ಸರ್ಕಾರದ ಅಂಗಳಕ್ಕೆ ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ ವಿಚಾರ
ದತ್ತಪೀಠ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Sep 28, 2021 | 3:29 PM

Share

ಬೆಂಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದ ಪೂಜಾ ವಿಧಾನದ ಗೊಂದಲ ಇದೀಗ ಮತ್ತೆ ಸರ್ಕಾರಕ್ಕೆ ಅಂಗಳಕ್ಕೆ ಬಂದಿದೆ. 2018ರ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು.

ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಹೈಕೋರ್ಟ್​ ತಳ್ಳಿಹಾಕಿದೆ. ವಿಶೇಷ ಸಮಿತಿಯ ವರದಿಯನ್ನು ಪರಿಗಣಿಸದೆ ಪ್ರಕರಣವನ್ನು ಹೊಸದಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

2018ರಲ್ಲಿ ಸರ್ಕಾರ ಕೈಗೊಂಡಿದ್ದ ಈ ನಿರ್ಧಾರವನ್ನು ಇದೀಗ ಹೈಕೋರ್ಟ್​ ರದ್ದುಪಡಿಸಿ, ಪೂಜಾವಿಧಾನದ ಕುರಿತು ಹೊಸದಾಗಿ ತೀರ್ಮಾನಿಸಲು ಆದೇಶ ನೀಡಿದೆ. ತಜ್ಞರ ಸಮಿತಿಯ ವರದಿ ಪರಿಗಣಿಸದೇ ತೀರ್ಮಾನಿಸಲು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಶ್ರೀ ಗುರು ದತ್ತಾತ್ರೇಯ ಸಂವರ್ಧನಾ ಸಮಿತಿ ಈ ಸಂಬಂಧ ನ್ಯಾಯಾಲಯಕ್ಕೆ ರಿಟ್ ಸಲ್ಲಿಸಿತ್ತು.

ಬಾಬಾಬುಡನ್​ಗಿರಿಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾಕ್ಕೆ ಹಿಂದೂ ಮತ್ತು ಮುಸ್ಲಿಮ್ ಸಮುದಾಯದ ಭಕ್ತರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದಾರೆ. ಈ ಪವಿತ್ರ ಸ್ಥಳದಲ್ಲಿ ಹಿಂದೂಗಳನ್ನೇ ಪೂಜಾರಿಗಳನ್ನಾಗಿ ನೇಮಿಸಬೇಕು ಎಂದು ಬಿಜೆಪಿ ಹಿಂದಿನಿಂದ ಒತ್ತಾಯಿಸುತ್ತಿತ್ತು. ಪೀಠವನ್ನು ಮುಜರಾಯಿ ಇಲಾಖೆಯೇ ನಿರ್ವಹಿಸುತ್ತಿತ್ತು.

2014ರಲ್ಲಿ ಸುಪ್ರೀಂಕೋರ್ಟ್​ ಸಹ ಮುಜರಾಯಿ ಆಯುಕ್ತರಿಗೆ ಪೂಜಾರಿ ನೇಮಕದ ಅಧಿಕಾರ ನೀಡಿತ್ತು. ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವು ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದ ನಂತರ ಈ ವಿಚಾರ ನಿರ್ಧರಿಸುವುದಾಗಿ ತಿಳಿಸಿತ್ತು. ಆದರೆ ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರವು ಪೂಜಾರಿಗಳ ನೇಮಕಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಆರೋಪಿಸಿತ್ತು.

(High Court asks Karnataka Govt to Decide on Baba Budangiri Dattatreya Peetha)

ಇದನ್ನೂ ಓದಿ: ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ

ಇದನ್ನೂ ಓದಿ: ದತ್ತಪೀಠವನ್ನು ಹಿಂದೂಗಳಿಗೆ ವಹಿಸುವ ಬುದ್ಧಿ ಬಿಜೆಪಿಗೆ ಬರಲಿ: ಪ್ರಮೋದ್​ ಮುತಾಲಿಕ್

Published On - 3:13 pm, Tue, 28 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್