AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸರ್ಕಾರದ ಅಂಗಳಕ್ಕೆ ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ ವಿಚಾರ

2018ರ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು.

ಮತ್ತೆ ಸರ್ಕಾರದ ಅಂಗಳಕ್ಕೆ ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ ವಿಚಾರ
ದತ್ತಪೀಠ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Sep 28, 2021 | 3:29 PM

Share

ಬೆಂಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದ ಪೂಜಾ ವಿಧಾನದ ಗೊಂದಲ ಇದೀಗ ಮತ್ತೆ ಸರ್ಕಾರಕ್ಕೆ ಅಂಗಳಕ್ಕೆ ಬಂದಿದೆ. 2018ರ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು.

ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಹೈಕೋರ್ಟ್​ ತಳ್ಳಿಹಾಕಿದೆ. ವಿಶೇಷ ಸಮಿತಿಯ ವರದಿಯನ್ನು ಪರಿಗಣಿಸದೆ ಪ್ರಕರಣವನ್ನು ಹೊಸದಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

2018ರಲ್ಲಿ ಸರ್ಕಾರ ಕೈಗೊಂಡಿದ್ದ ಈ ನಿರ್ಧಾರವನ್ನು ಇದೀಗ ಹೈಕೋರ್ಟ್​ ರದ್ದುಪಡಿಸಿ, ಪೂಜಾವಿಧಾನದ ಕುರಿತು ಹೊಸದಾಗಿ ತೀರ್ಮಾನಿಸಲು ಆದೇಶ ನೀಡಿದೆ. ತಜ್ಞರ ಸಮಿತಿಯ ವರದಿ ಪರಿಗಣಿಸದೇ ತೀರ್ಮಾನಿಸಲು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಶ್ರೀ ಗುರು ದತ್ತಾತ್ರೇಯ ಸಂವರ್ಧನಾ ಸಮಿತಿ ಈ ಸಂಬಂಧ ನ್ಯಾಯಾಲಯಕ್ಕೆ ರಿಟ್ ಸಲ್ಲಿಸಿತ್ತು.

ಬಾಬಾಬುಡನ್​ಗಿರಿಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾಕ್ಕೆ ಹಿಂದೂ ಮತ್ತು ಮುಸ್ಲಿಮ್ ಸಮುದಾಯದ ಭಕ್ತರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದಾರೆ. ಈ ಪವಿತ್ರ ಸ್ಥಳದಲ್ಲಿ ಹಿಂದೂಗಳನ್ನೇ ಪೂಜಾರಿಗಳನ್ನಾಗಿ ನೇಮಿಸಬೇಕು ಎಂದು ಬಿಜೆಪಿ ಹಿಂದಿನಿಂದ ಒತ್ತಾಯಿಸುತ್ತಿತ್ತು. ಪೀಠವನ್ನು ಮುಜರಾಯಿ ಇಲಾಖೆಯೇ ನಿರ್ವಹಿಸುತ್ತಿತ್ತು.

2014ರಲ್ಲಿ ಸುಪ್ರೀಂಕೋರ್ಟ್​ ಸಹ ಮುಜರಾಯಿ ಆಯುಕ್ತರಿಗೆ ಪೂಜಾರಿ ನೇಮಕದ ಅಧಿಕಾರ ನೀಡಿತ್ತು. ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವು ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದ ನಂತರ ಈ ವಿಚಾರ ನಿರ್ಧರಿಸುವುದಾಗಿ ತಿಳಿಸಿತ್ತು. ಆದರೆ ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರವು ಪೂಜಾರಿಗಳ ನೇಮಕಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಆರೋಪಿಸಿತ್ತು.

(High Court asks Karnataka Govt to Decide on Baba Budangiri Dattatreya Peetha)

ಇದನ್ನೂ ಓದಿ: ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ

ಇದನ್ನೂ ಓದಿ: ದತ್ತಪೀಠವನ್ನು ಹಿಂದೂಗಳಿಗೆ ವಹಿಸುವ ಬುದ್ಧಿ ಬಿಜೆಪಿಗೆ ಬರಲಿ: ಪ್ರಮೋದ್​ ಮುತಾಲಿಕ್

Published On - 3:13 pm, Tue, 28 September 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ