AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸರ್ಕಾರದ ಅಂಗಳಕ್ಕೆ ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ ವಿಚಾರ

2018ರ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು.

ಮತ್ತೆ ಸರ್ಕಾರದ ಅಂಗಳಕ್ಕೆ ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ ವಿಚಾರ
ದತ್ತಪೀಠ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Sep 28, 2021 | 3:29 PM

Share

ಬೆಂಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದ ಪೂಜಾ ವಿಧಾನದ ಗೊಂದಲ ಇದೀಗ ಮತ್ತೆ ಸರ್ಕಾರಕ್ಕೆ ಅಂಗಳಕ್ಕೆ ಬಂದಿದೆ. 2018ರ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು.

ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಹೈಕೋರ್ಟ್​ ತಳ್ಳಿಹಾಕಿದೆ. ವಿಶೇಷ ಸಮಿತಿಯ ವರದಿಯನ್ನು ಪರಿಗಣಿಸದೆ ಪ್ರಕರಣವನ್ನು ಹೊಸದಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

2018ರಲ್ಲಿ ಸರ್ಕಾರ ಕೈಗೊಂಡಿದ್ದ ಈ ನಿರ್ಧಾರವನ್ನು ಇದೀಗ ಹೈಕೋರ್ಟ್​ ರದ್ದುಪಡಿಸಿ, ಪೂಜಾವಿಧಾನದ ಕುರಿತು ಹೊಸದಾಗಿ ತೀರ್ಮಾನಿಸಲು ಆದೇಶ ನೀಡಿದೆ. ತಜ್ಞರ ಸಮಿತಿಯ ವರದಿ ಪರಿಗಣಿಸದೇ ತೀರ್ಮಾನಿಸಲು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಶ್ರೀ ಗುರು ದತ್ತಾತ್ರೇಯ ಸಂವರ್ಧನಾ ಸಮಿತಿ ಈ ಸಂಬಂಧ ನ್ಯಾಯಾಲಯಕ್ಕೆ ರಿಟ್ ಸಲ್ಲಿಸಿತ್ತು.

ಬಾಬಾಬುಡನ್​ಗಿರಿಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾಕ್ಕೆ ಹಿಂದೂ ಮತ್ತು ಮುಸ್ಲಿಮ್ ಸಮುದಾಯದ ಭಕ್ತರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದಾರೆ. ಈ ಪವಿತ್ರ ಸ್ಥಳದಲ್ಲಿ ಹಿಂದೂಗಳನ್ನೇ ಪೂಜಾರಿಗಳನ್ನಾಗಿ ನೇಮಿಸಬೇಕು ಎಂದು ಬಿಜೆಪಿ ಹಿಂದಿನಿಂದ ಒತ್ತಾಯಿಸುತ್ತಿತ್ತು. ಪೀಠವನ್ನು ಮುಜರಾಯಿ ಇಲಾಖೆಯೇ ನಿರ್ವಹಿಸುತ್ತಿತ್ತು.

2014ರಲ್ಲಿ ಸುಪ್ರೀಂಕೋರ್ಟ್​ ಸಹ ಮುಜರಾಯಿ ಆಯುಕ್ತರಿಗೆ ಪೂಜಾರಿ ನೇಮಕದ ಅಧಿಕಾರ ನೀಡಿತ್ತು. ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವು ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದ ನಂತರ ಈ ವಿಚಾರ ನಿರ್ಧರಿಸುವುದಾಗಿ ತಿಳಿಸಿತ್ತು. ಆದರೆ ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರವು ಪೂಜಾರಿಗಳ ನೇಮಕಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಆರೋಪಿಸಿತ್ತು.

(High Court asks Karnataka Govt to Decide on Baba Budangiri Dattatreya Peetha)

ಇದನ್ನೂ ಓದಿ: ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ

ಇದನ್ನೂ ಓದಿ: ದತ್ತಪೀಠವನ್ನು ಹಿಂದೂಗಳಿಗೆ ವಹಿಸುವ ಬುದ್ಧಿ ಬಿಜೆಪಿಗೆ ಬರಲಿ: ಪ್ರಮೋದ್​ ಮುತಾಲಿಕ್

Published On - 3:13 pm, Tue, 28 September 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ