AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕ್ರಿಶ್ಚಿಯನ್ ಇಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ: ಹಿಂದೂಪರ ಸಂಘಟನೆ, ಗ್ರಾಮಸ್ಥರ ವಿರೋಧ

ಮನೆಗೆ ಮಂಜೂರಾಗಿರುವ ಜಾಗದಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ ಮಾಡಲು ಮುಂದಾಗಿದ್ದು ಕ್ರಿಶ್ಚಿಯನ್ ಕುಟುಂಬದ ಮನೆಯಿಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಮಾಡುತ್ತಿರುವುದಕ್ಕೆ ಹಿಂದೂಪರ ಸಂಘಟನೆ, ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು: ಕ್ರಿಶ್ಚಿಯನ್ ಇಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ: ಹಿಂದೂಪರ ಸಂಘಟನೆ, ಗ್ರಾಮಸ್ಥರ ವಿರೋಧ
ಚರ್ಚ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು|

Updated on:Aug 07, 2023 | 11:16 AM

Share

ಚಿಕ್ಕಮಗಳೂರು, ಆ.07: ಮಲೆನಾಡಲ್ಲಿ ಮತ್ತೆ ಮತಾಂತರದ ಕಿಚ್ಚು ಹತ್ತಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ವಿರೋಧ ಭುಗಿಲೆದ್ದಿದೆ. ಒಂದೂ ಕ್ರಿಶ್ಚಿಯನ್ ಕುಟುಂಬದ ಮನೆಯಿಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಮಾಡುತ್ತಿರುವುದಕ್ಕೆ ಹಿಂದೂಪರ ಸಂಘಟನೆ, ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಚರ್ಚ್ ಕಟ್ಟಡ ನಿರ್ಮಾಣ ಕಾಮಗಾರಿ ನಿಲ್ಲಿಸುವಂತೆ ಪಟ್ಟು ಹಿಡಿದಿದ್ದಾರೆ.

ಗ್ರಾಮಕ್ಕೆ ಸಂಬಂಧ ಪಡದ ಮೂಡಿಗೆರೆ ಸಮೀಪದ ಹಾಂದಿ ಗ್ರಾಮದ ರಂಗ ಎಂಬ ವ್ಯಕ್ತಿ ಕ್ರಿಶ್ಚಿಯನ್ ಕುಟುಂಬಗಳೇ ಇಲ್ಲದ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ಮುಂದಾಗಿದ್ದಾರೆ.ರಂಗ ಕೂಡ ಮತಾಂತರ ಹೊಂದಿದವರಾಗಿದ್ದು ಸರ್ಕಾರದಿಂದ ಮನೆ ಕಟ್ಟಿಸಲು ಮಂಜೂರಾಗಿರುವ ಜಾಗದಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಲೋಕವಳ್ಳಿ ಗ್ರಾಮಕ್ಕೆ‌ ಹಳೆ ಮೂಡಿಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿದ್ದಾರೆ. ಇನ್ನು ಚರ್ಚ್ ನಿರ್ಮಾಣ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ. ಅಕ್ರಮ ಮತಾಂತರಕ್ಕಾಗಿ ಚರ್ಚ್ ನಿರ್ಮಾಣದ ಆರೋಪ ಮಾಡಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಒಂದು ಕುಟುಂಬವಿಲ್ಲದ ಊರಿನಲ್ಲಿ ಚರ್ಚ್ ನಿರ್ಮಾಣಕ್ಕೆ ಮುಂದಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಕುತೂಹಲ ಮೂಡಿಸಿದ ಬೊಮ್ಮಾಯಿ ದಿಲ್ಲಿ ಪ್ರವಾಸ

ಎರಡು ಕಾರುಗಳ ನಡುವೆ ಅಪಘಾತ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು ರಭಸಕ್ಕೆ ಕಾರು ಪಲ್ಟಿಯಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ‌ಯಾಗಿದೆ. ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ‌ಗಳಾಗಿವೆ. ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ನಾಲ್ವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೇನುಬೈಲಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Published On - 9:15 am, Mon, 7 August 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!