AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಪೂರ್ಣೇಶ್ವರಿ ಬ್ರಹ್ಮರಥೋತ್ಸವ: ವೈಭವದ ಮೆರವಣಿಗೆ, ಭಕ್ತಿಯಲ್ಲಿ ಮಿಂದೆದ್ದ ಜನ

ಚಿಕ್ಕಮಗಳೂರು: ಹೊರನಾಡು ಅನ್ನಪೂರ್ಣೇಶ್ವರಿ ಅಂದ್ರೆ ಬೇಡಿದ್ದನ್ನ ಕರುಣಿಸೋ ಮಹಾತಾಯಿ. ಹೀಗಾಗೇ ವರ್ಷಪೂರ್ತಿ ಭಕ್ತರ ದಂಡೇ ದೇಗುಲಕ್ಕೆ ಹರಿದುಬರುತ್ತೆ. ಅದ್ರಲ್ಲೂ ವರ್ಷಕ್ಕೊಮ್ಮೆ ನಡೆಯೋ ಬ್ರಹ್ಮರಥೋತ್ಸವವಂತೂ ನೋಡೋದೇ ಚೆಂದ. ಮನದ ತುಂಬೆಲ್ಲಾ ಜಗನ್ಮಾತೆಯ ಧ್ಯಾನ. ಹೆಜ್ಜೆ ಹೆಜ್ಜೆಗೂ ಭಕ್ತಿಯ ಪುಳಕ. ಗಂಟೆನಾದದ ಜೊತೆ ಸ್ವರಗಳ ನಾದ. ಸರ್ವಾಲಂಕಾರಗಳಿಂದ ಅಮ್ಮನ ತೇರು ಮುಂದೆ ಬರ್ತಿದ್ರೆ ಮೈಮನ ರೋಮಾಂಚನಗೊಂಡಿತ್ತು. ಎಲ್ಲರ ಮನದಲ್ಲೂ ಆಧ್ಯಾತ್ಮದ ಭಾವ ಮೂಡಿತ್ತು. ಅನ್ನಪೂರ್ಣೆಗೆ ನಮೋ ನಮಃ ಅಂದಿದ್ರು. ಸುಡು ಬಿಸಿಲಿನ ಲೆಕ್ಕವಿಲ್ಲ. ಹಸಿವಿನ ಚಿಂತೆಯಿಲ್ಲ. ಜನಸಂದಣಿಯ ಕಿರಿ ಕಿರಿ […]

ಅನ್ನಪೂರ್ಣೇಶ್ವರಿ ಬ್ರಹ್ಮರಥೋತ್ಸವ: ವೈಭವದ ಮೆರವಣಿಗೆ, ಭಕ್ತಿಯಲ್ಲಿ ಮಿಂದೆದ್ದ ಜನ
ಸಾಧು ಶ್ರೀನಾಥ್​
|

Updated on:Feb 27, 2020 | 2:09 PM

Share

ಚಿಕ್ಕಮಗಳೂರು: ಹೊರನಾಡು ಅನ್ನಪೂರ್ಣೇಶ್ವರಿ ಅಂದ್ರೆ ಬೇಡಿದ್ದನ್ನ ಕರುಣಿಸೋ ಮಹಾತಾಯಿ. ಹೀಗಾಗೇ ವರ್ಷಪೂರ್ತಿ ಭಕ್ತರ ದಂಡೇ ದೇಗುಲಕ್ಕೆ ಹರಿದುಬರುತ್ತೆ. ಅದ್ರಲ್ಲೂ ವರ್ಷಕ್ಕೊಮ್ಮೆ ನಡೆಯೋ ಬ್ರಹ್ಮರಥೋತ್ಸವವಂತೂ ನೋಡೋದೇ ಚೆಂದ.

ಮನದ ತುಂಬೆಲ್ಲಾ ಜಗನ್ಮಾತೆಯ ಧ್ಯಾನ. ಹೆಜ್ಜೆ ಹೆಜ್ಜೆಗೂ ಭಕ್ತಿಯ ಪುಳಕ. ಗಂಟೆನಾದದ ಜೊತೆ ಸ್ವರಗಳ ನಾದ. ಸರ್ವಾಲಂಕಾರಗಳಿಂದ ಅಮ್ಮನ ತೇರು ಮುಂದೆ ಬರ್ತಿದ್ರೆ ಮೈಮನ ರೋಮಾಂಚನಗೊಂಡಿತ್ತು. ಎಲ್ಲರ ಮನದಲ್ಲೂ ಆಧ್ಯಾತ್ಮದ ಭಾವ ಮೂಡಿತ್ತು. ಅನ್ನಪೂರ್ಣೆಗೆ ನಮೋ ನಮಃ ಅಂದಿದ್ರು.

ಸುಡು ಬಿಸಿಲಿನ ಲೆಕ್ಕವಿಲ್ಲ. ಹಸಿವಿನ ಚಿಂತೆಯಿಲ್ಲ. ಜನಸಂದಣಿಯ ಕಿರಿ ಕಿರಿ ಇಲ್ಲ. ಎಲ್ಲರ ಮನದಲ್ಲೂ ಇದ್ದದ್ದು ತಾಯಿಯ ದರ್ಶನ ಪಡೀಬೇಕು ಅನ್ನೋದೇ. ಕಾಫಿನಾಡು ಚಿಕ್ಕಮಗಳೂರಿನ ಧಾರ್ಮಿಕ ಕ್ಷೇತ್ರಗಳಲ್ಲಿ ಅನ್ನಪೂರ್ಣೆಯ ನೆಲೆವೀಡಾಗಿರೋ ಹೊರನಾಡಿಗೆ ವಿಶೇಷ ಸ್ಥಾನವಿದೆ.

ಪ್ರತಿ ವರ್ಷ ಪಾಲ್ಗುಣ ಶುಕ್ಲ ಮಾಸದ ಅಭಿಜಿನ್ ಮಹೂರ್ತದಲ್ಲಿ ನಿನ್ನೆ ಬ್ರಹ್ಮರಥೋತ್ಸವ ನಡೆಸಲಾಯ್ತು. ಐದು ದಿನಗಳ ಕಾಲ ನಡೆಯೋ ಈ ವಾರ್ಷಿಕ ಆಚರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ರು. ರಥೋತ್ಸವದ ಪ್ರಯುಕ್ತ ಅನ್ನಪೂರ್ಣೆಶ್ವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆಯನ್ನ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಪ್ರಾರ್ಥನೆ ಮಾಡಿ ರಥವನ್ನ ಎಳೆದು ಭಕ್ತಿ ಸಮರ್ಪಿಸಿದರು.

ಅನ್ನಪೂರ್ಣೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಛತ್ರಿ ಚಾಮರಗಳ ಮೆರವಣಿಗೆಯಲ್ಲಿ ದೇವಿಯ ಮೂರ್ತಿಯನ್ನ ತಂದು ರಥದಲ್ಲಿ ಕೂರಿಸಲಾಯ್ತು. ನಂತರ ನೆರೆದಿದ್ದ ಭಕ್ತರು ರಥಕ್ಕೆ ಕಾಯಿಯನ್ನ ಒಡೆಯುವ ಮೂಲಕ ಭಕ್ತಿ ಸಮರ್ಪಿಸಿದರು. ವರ್ಷಪೂರ್ತಿ ಗರ್ಭಗುಡಿಯಲ್ಲೇ ಕೂತು ಭಕ್ತರಿಗೆ ದರ್ಶನ ನೀಡೋ ಅನ್ನಪೂರ್ಣೇಶ್ವರಿ ವರ್ಷಕ್ಕೊಮ್ಮೆ ರಥದಲ್ಲಿ ಕೂತು ಸಾಗೋದು ನಿಜಕ್ಕೂ ಸುಂದರ ದೃಶ್ಯ.

ಅಂತೂ ಅನ್ನಪೂರ್ಣೇಶ್ವರಿ ಸನ್ನಿಧಾನದಲ್ಲಿ ನಡೆದ ಬ್ರಹ್ಮರಥೋತ್ಸವ ಭಕ್ತಸಾಗರವನ್ನ ಸೆಳೆದಿತ್ತು. ದೂರದೂರುಗಳಿಂದ ಬಂದಿದ್ದ ಜನ ಸರ್ವಾಲಂಕಾರಗೊಂಡಿದ್ದ ತಾಯಿಯನ್ನ ಕಣ್ತುಂಬಿಕೊಂಡು ರಥ ಎಳೆದ್ರು.

Published On - 2:06 pm, Thu, 27 February 20

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು