AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಸೂರಿಲ್ಲದೆ ಕಣ್ಣೀರು ಹಾಕಿದ ವೃದ್ಧ ದಂಪತಿ

ಮಳೆಯ ಆರ್ಭಟಕ್ಕೆ ಮನೆ ಕುಸಿದಿದ್ದು, ವೃದ್ಧ ದಂಪತಿ ಕಂಗಾಲಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ ಗ್ರಾಮದ ದುಗ್ಗೇಗೌಡ-ಜಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಸೂರಿಲ್ಲದೆ ಕಣ್ಣೀರು ಹಾಕಿದ ವೃದ್ಧ ದಂಪತಿ
ಕುಸಿದ ಮನೆ
TV9 Web
| Edited By: |

Updated on:Aug 01, 2021 | 3:15 PM

Share

ಚಿಕ್ಕಮಗಳೂರು: ಮಳೆಯಿಂದಾಗಿ ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ ಗ್ರಾಮದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆಯ (Heavy Rains) ಆರ್ಭಟದಿಂದ ಹತ್ತಾರು ವರ್ಷ ಬಾಳಿ ಬದುಕಿದ ಮನೆ ನೆಲಸಮವಾಗಿದೆ. ವಿಧಿಯಿಲ್ಲದೇ ಪಕ್ಕದ ಮನೆಯವರ ಅಂಗಡಿಯ ಚಿಕ್ಕ ಕೋಣೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ. ಈ ಮಳೆಗಾಲದಲ್ಲಿ ಜೀವನ ಮಾಡುವುದೇ ದೊಡ್ಡ ಸವಾಲಾಗಿದೆ. ದಯವಿಟ್ಟು ನಮಗೆ ಸೂಕ್ತ ಪರಿಹಾರ ನೀಡಿ ಅಂತ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.

ವೃದ್ಧ ದಂಪತಿ ಕಂಗಾಲು ಮಳೆಯ ಆರ್ಭಟಕ್ಕೆ ಮನೆ ಕುಸಿದಿದ್ದು, ವೃದ್ಧ ದಂಪತಿ ಕಂಗಾಲಾಗಿದ್ದಾರೆ. ಚಿಕ್ಕಮಗಳೂರು (Chikmagalur)ತಾಲೂಕಿನ ಕೆರೆಮಕ್ಕಿ ಗ್ರಾಮದ ದುಗ್ಗೇಗೌಡ-ಜಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಗೋಡೆಗಳು ಬಿರುಕು ಬಿಟ್ಟಿದ್ದರಿಂದ ಹಿರಿ ಜೀವಗಳು ಮನೆ ಖಾಲಿ ಮಾಡಿದ್ದರು. ರಾತ್ರೋರಾತ್ರಿ ಮನೆ ಕುಸಿದಿದೆ. ಮನೆ ಕುಸಿತದಿಂದ ಹಂಚುಗಳು, ಪೀಠೋಪಕರಣಗಳು ಧ್ವಂಸವಾಗಿವೆ.

ಹೊಸ ಮನೆಗೆ ಒಂದು ವರ್ಷದ ಹಿಂದೆಯೇ ವೃದ್ಧ ದಂಪತಿ ಅರ್ಜಿ ಸಲ್ಲಿಸಿದ್ದರು. ಮನೆ ಮಂಜೂರಾಗಿದ್ದರೂ ಹಣ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದು, ಮನೆ ಕಳೆದುಕೊಂಡ ವೃದ್ಧ ದಂಪತಿ ಕಣ್ಣೀರಿಡುತ್ತಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಸೂರು ಕಲ್ಪಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ. ಪ್ರವಾಹ ಸಂತ್ರಸ್ತರಿಗೆ ನಿವೇಶನ ಕೊಡಲು 3 ಸಮಸ್ಯೆ ಇದೆ. ಒಂದು ಗುಂಪಿನ ಜನರು ಬೇರೆ ಕಡೆ ಹೋಗಲು ಸಿದ್ಧರಿಲ್ಲ. 2ನೇ ಗುಂಪು ಜಮೀನನ್ನು ಕೊಡಬೇಕು ಎಂದು ಹೇಳುತ್ತಿದ್ದಾರೆ. 3ನೇ ಗುಂಪು ಜಮೀನಿನ ಬಳಿಯೇ ಮನೆಗೆ ಜಾಗ ಕೇಳುತಿದ್ದಾರೆ. ಅದಕ್ಕೆ ಅರಣ್ಯ ಜಮೀನುಗಳಿರುವುದರಿಂದ ಸಮಸ್ಯೆಯಾಗುತ್ತಿದೆ. 9 ಜನರಿಗೆ ಸೂರು ಕಲ್ಪಿಸಲು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಅಂತ ಟಿವಿ9ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾಹಿತಿ ನೀಡಿದರು.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ಸಾಲುಸಾಲು ವೈರಸ್​ಗಳು; ಮೊದಲ ಝಿಕಾ ಪ್ರಕರಣ ಪತ್ತೆ, 25 ಮಂದಿಯಲ್ಲಿ ಚಿಕೂನ್​ಗುನ್ಯಾ, ಡೆಂಘೆ ಆತಂಕ

ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು: ಮಾಲೀಕನನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

(Houses collapsed due to Heavy Rains in Chikmagalur and An elderly couple crying to House collapse)

Published On - 2:58 pm, Sun, 1 August 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ