AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಸೂರಿಲ್ಲದೆ ಕಣ್ಣೀರು ಹಾಕಿದ ವೃದ್ಧ ದಂಪತಿ

ಮಳೆಯ ಆರ್ಭಟಕ್ಕೆ ಮನೆ ಕುಸಿದಿದ್ದು, ವೃದ್ಧ ದಂಪತಿ ಕಂಗಾಲಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ ಗ್ರಾಮದ ದುಗ್ಗೇಗೌಡ-ಜಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಸೂರಿಲ್ಲದೆ ಕಣ್ಣೀರು ಹಾಕಿದ ವೃದ್ಧ ದಂಪತಿ
ಕುಸಿದ ಮನೆ
TV9 Web
| Edited By: sandhya thejappa|

Updated on:Aug 01, 2021 | 3:15 PM

Share

ಚಿಕ್ಕಮಗಳೂರು: ಮಳೆಯಿಂದಾಗಿ ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ ಗ್ರಾಮದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆಯ (Heavy Rains) ಆರ್ಭಟದಿಂದ ಹತ್ತಾರು ವರ್ಷ ಬಾಳಿ ಬದುಕಿದ ಮನೆ ನೆಲಸಮವಾಗಿದೆ. ವಿಧಿಯಿಲ್ಲದೇ ಪಕ್ಕದ ಮನೆಯವರ ಅಂಗಡಿಯ ಚಿಕ್ಕ ಕೋಣೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ. ಈ ಮಳೆಗಾಲದಲ್ಲಿ ಜೀವನ ಮಾಡುವುದೇ ದೊಡ್ಡ ಸವಾಲಾಗಿದೆ. ದಯವಿಟ್ಟು ನಮಗೆ ಸೂಕ್ತ ಪರಿಹಾರ ನೀಡಿ ಅಂತ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.

ವೃದ್ಧ ದಂಪತಿ ಕಂಗಾಲು ಮಳೆಯ ಆರ್ಭಟಕ್ಕೆ ಮನೆ ಕುಸಿದಿದ್ದು, ವೃದ್ಧ ದಂಪತಿ ಕಂಗಾಲಾಗಿದ್ದಾರೆ. ಚಿಕ್ಕಮಗಳೂರು (Chikmagalur)ತಾಲೂಕಿನ ಕೆರೆಮಕ್ಕಿ ಗ್ರಾಮದ ದುಗ್ಗೇಗೌಡ-ಜಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಗೋಡೆಗಳು ಬಿರುಕು ಬಿಟ್ಟಿದ್ದರಿಂದ ಹಿರಿ ಜೀವಗಳು ಮನೆ ಖಾಲಿ ಮಾಡಿದ್ದರು. ರಾತ್ರೋರಾತ್ರಿ ಮನೆ ಕುಸಿದಿದೆ. ಮನೆ ಕುಸಿತದಿಂದ ಹಂಚುಗಳು, ಪೀಠೋಪಕರಣಗಳು ಧ್ವಂಸವಾಗಿವೆ.

ಹೊಸ ಮನೆಗೆ ಒಂದು ವರ್ಷದ ಹಿಂದೆಯೇ ವೃದ್ಧ ದಂಪತಿ ಅರ್ಜಿ ಸಲ್ಲಿಸಿದ್ದರು. ಮನೆ ಮಂಜೂರಾಗಿದ್ದರೂ ಹಣ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದು, ಮನೆ ಕಳೆದುಕೊಂಡ ವೃದ್ಧ ದಂಪತಿ ಕಣ್ಣೀರಿಡುತ್ತಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಸೂರು ಕಲ್ಪಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ. ಪ್ರವಾಹ ಸಂತ್ರಸ್ತರಿಗೆ ನಿವೇಶನ ಕೊಡಲು 3 ಸಮಸ್ಯೆ ಇದೆ. ಒಂದು ಗುಂಪಿನ ಜನರು ಬೇರೆ ಕಡೆ ಹೋಗಲು ಸಿದ್ಧರಿಲ್ಲ. 2ನೇ ಗುಂಪು ಜಮೀನನ್ನು ಕೊಡಬೇಕು ಎಂದು ಹೇಳುತ್ತಿದ್ದಾರೆ. 3ನೇ ಗುಂಪು ಜಮೀನಿನ ಬಳಿಯೇ ಮನೆಗೆ ಜಾಗ ಕೇಳುತಿದ್ದಾರೆ. ಅದಕ್ಕೆ ಅರಣ್ಯ ಜಮೀನುಗಳಿರುವುದರಿಂದ ಸಮಸ್ಯೆಯಾಗುತ್ತಿದೆ. 9 ಜನರಿಗೆ ಸೂರು ಕಲ್ಪಿಸಲು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಅಂತ ಟಿವಿ9ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾಹಿತಿ ನೀಡಿದರು.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ಸಾಲುಸಾಲು ವೈರಸ್​ಗಳು; ಮೊದಲ ಝಿಕಾ ಪ್ರಕರಣ ಪತ್ತೆ, 25 ಮಂದಿಯಲ್ಲಿ ಚಿಕೂನ್​ಗುನ್ಯಾ, ಡೆಂಘೆ ಆತಂಕ

ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು: ಮಾಲೀಕನನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

(Houses collapsed due to Heavy Rains in Chikmagalur and An elderly couple crying to House collapse)

Published On - 2:58 pm, Sun, 1 August 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ