AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತಂಕಕಾರಿ: ಕಾಡು ಮಾಂಸಕ್ಕೆ ಪ್ರವಾಸಿಗರಿಂದ ಡಿಮ್ಯಾಂಡ್! ಕಾಫಿ ತೋಟದಲ್ಲಿ ಶಿಕಾರಿ, ಜಿಂಕೆ ಮಾಂಸದ ಜೊತೆಗೆ ನಾಡ ಬಂದೂಕು ವಶ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೊಡಿ ಪ್ರಾದೇಶಿಕ ವ್ಯಾಪ್ತಿಯ ಸಂಗಮ ಕಾಫಿ ತೋಟದಲ್ಲಿ ಜಿಂಕೆ ಬೇಟೆಯಾಡಿ ಬಾಡೂಟಕ್ಕೆ ತಯಾರಿ ನಡೆಸುತ್ತಿದ್ದಾಗ ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿಕಾರಿ ಮಾಡಿದ‌ ಆರೋಪದ ಮೇಲೆ‌ ಮೊಹಮ್ಮದ್ ಶಕೀಲ್ ಸೇರಿದಂತೆ 6 ಜನ ಬಂಧನಕ್ಕೀಡಾಗಿದ್ದಾರೆ. 8 ಕೆಜಿ ಜಿಂಕೆ ಮಾಂಸ, ನಾಡಬಂದೂಕು ವಶಪಡಿಸಿಕೊಳ್ಳಲಾಗಿದೆ.

ಆತಂಕಕಾರಿ: ಕಾಡು ಮಾಂಸಕ್ಕೆ ಪ್ರವಾಸಿಗರಿಂದ ಡಿಮ್ಯಾಂಡ್! ಕಾಫಿ ತೋಟದಲ್ಲಿ ಶಿಕಾರಿ, ಜಿಂಕೆ ಮಾಂಸದ ಜೊತೆಗೆ ನಾಡ ಬಂದೂಕು ವಶ
ಕಾಡು ಮಾಂಸಕ್ಕೆ ಪ್ರವಾಸಿಗರಿಂದ ಡಿಮ್ಯಾಂಡ್! ಕಾಫಿ ತೋಟದಲ್ಲಿ ಶಿಕಾರಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Aug 21, 2023 | 11:52 AM

Share

ಚಿಕ್ಕಮಗಳೂರು, ಆಗಸ್ಟ್​ 21: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ವನ್ಯಜೀವಿಗಳಿಗೆ (Wild Animal) ಆಪತ್ತು ಎದುರಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಮಾಂಸಕ್ಕಾಗಿ ವನ್ಯಜೀವಿಗಳನ್ನ ಬೇಟೆ ಮಾಡುತ್ತಿರುವ (Hunting) ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ.ಚಿಕ್ಕಮಗಳೂರು ತಾಲೂಕಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮೇಲಿನ ಹುಲುವತ್ತಿ ಗ್ರಾಮದ ಸಂಗಮ ಕಾಫಿ ಎಸ್ಟೇಟ್ ಮೇಲೆ ಮತ್ತೋಡಿ ವಿಭಾಗದ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿ ಮಂಗಳೂರು ಮೂಲದ 6 ಜನ‌ ಪ್ರವಾಸಿಗರು ಸೇರಿದಂತೆ ಎಸ್ಟೇಟ್ ಸಿಬ್ಬಂದಿ ಶಕೀಲ್ ನನ್ನ ಬಂಧಿಸಿ 8 ಕೆ.ಜೆ ಜಿಂಕೆ ಮಾಂಸ ,ಶಿಕಾರಿಗೆ ಬಳಸುತ್ತಿದ್ದ ಬಂದೂಕನನ್ನ ವಶ ಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜಿಂಕೆಯನ್ನ ಶಿಕಾರಿ ಮಾಡಿ ಪಾರ್ಟಿ ಮಾಡಲು ಎಸ್ಟೇಟ್ ನಲ್ಲಿ ಸಿದ್ದತೆ ನಡೆಸಲಾಗಿತ್ತು. ನಿರಂತರವಾಗಿ ಸಂರಕ್ಷಿತ ಪ್ರದೇಶಗಳಿಗೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ವನ್ಯಜೀವಿಗಳ ಬೇಟೆ ನಡೆಯುತ್ತಿದ್ದು ಹೊರ ರಾಜ್ಯ ಜಿಲ್ಲೆಗಳಿಂದ ಬಂದು ಮಾಂಸಕ್ಕಾಗಿ ವನ್ಯ ಜೀವಿಗಳನ್ನ ಬೇಟೆ ಮಾಡಲಾಗುತ್ತಿದೆ.

ಕಾಡು ಮಾಂಸಕ್ಕೆ ಡಿಮ್ಯಾಂಡ್ ಮಾಡುತ್ತಿರುವ ಪ್ರವಾಸಿಗರು!

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಹೋಂಸ್ಟೇ, ರೆಸ್ಟೋರೆಂಟ್ ಮಾಲೀಕರಿಗೆ ಕೆಲ ಪ್ರವಾಸಿಗರು ಕಾಡುಮಾಂಸಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಇದ್ರಿಂದ ಅಕ್ರಮವಾಗಿ ಸಂರಕ್ಷಿತ ಅರಣ್ಯಗಳಲ್ಲಿ ಶಿಕಾರಿ ನಡೆಯುತ್ತಿದೆ.ಹೊರ ರಾಜ್ಯ ಜಿಲ್ಲೆಗಳಿಂದ ಚಿಕ್ಕಮಗಳೂರಿಗೆ ಬರುವ ಪ್ರವಾಸಿಗರು ಹೋಂ ಸ್ಟೇ , ರೆಸ್ಟೋರೆಂಟ್ಗಳಲ್ಲಿ ಬುಕಿಂಗ್ ಮಾಡುವ ಮುನ್ನ ಕಾಡುಮಾಂಸದ ಬೇಡಿಕೆ ಮಾಡುತ್ತಿದ್ದು. ಕಾಡುಮಾಂಸಕ್ಕೆ ಪ್ರವಾಸಿಗರಿಂದ ಡಿಮ್ಯಾಂಡ್ ಹೆಚ್ಚುತ್ತಿದ್ದಂತೆ ಹೋಂಸ್ಟೇ, ರೆಸ್ಟೋರೆಂಟ್ ಪ್ರವಾಸಿಗರಿಗಾಗಿ ವನ್ಯಜೀವಿಗಳನ್ನ ಶಿಕಾರಿ ಮಾಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಹೋಂಸ್ಟೇ ,ರೆಸ್ಟೋರೆಂಟ್ ನಲ್ಲಿ ಕಾಡುಮಾಂಸದ ಭೋಜನ!

ಕೆಲ ಹೋಂಸ್ಟೇ ರೆಸ್ಟೋರೆಂಟ್ಗಳಲ್ಲಿ ಕಾಡು ಮಾಂಸದ ಊಟದ ಮೇನ್ಯೂ ಇದ್ದು. ಕೆಲ ಪ್ರವಾಸಿಗರು ಕಾಡು ಮಾಂಸದ ರುಚಿ ನೋಡಲು ಹೋಂಸ್ಟೇ ರೆಸ್ಟೋರೆಂಟ್ ರೂಮ್ ಬುಕಿಂಗ್ ಮಾಡುತ್ತಿದ್ದಾರೆ ,ಪ್ರವಾಸಿಗರಿಂದ. ಕಾಡುಮಾಂಸದ ಊಟಕ್ಕೆ ದುಪ್ಪಟ್ಟು ಹಣ ನಿಗದಿ ಮಾಡಿ ಪ್ರವಾಸಿಗರಿಗೆ ಊಟದ ಜೊತೆ ಕಾಡು ಪ್ರಾಣಿಗಳ ಮಾಂಸವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಬಾಗಲಕೋಟೆ: ಜಿಲ್ಲಾ ವೈದ್ಯಾಧಿಕಾರಿ ಖುರ್ಚಿ‌ಗಾಗಿ ಮತ್ತೆ ಕಿತ್ತಾಟ -ಅಳಿಯನ ಮೇಲೆ ಮತ್ತೊಮ್ಮೆ ಪ್ರೀತಿ ತೋರಿದರಾ ಹೆಚ್ ವೈ ಮೇಟಿ?

ಹೊರ ರಾಜ್ಯ , ಜಿಲ್ಲೆಗಳ ಹೋಂಸ್ಟೇ ರೆಸ್ಟೋರೆಂಟ್ ಗೆ ಚಿಕ್ಕಮಗಳೂರಿನಿಂದ ಕಾಡು ಮಾಂಸವನ್ನು ಕಳಿಸಲಾಗುತ್ತಿದೆ ಎಂಬ ಅಂಶವು ಬೆಳಕಿಗೆ ಬಂದಿದ್ದು ಚಿಕ್ಕಮಗಳೂರು ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.

ಚಿಕ್ಕಮಗಳೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?