ಚಿಕ್ಕಮಗಳೂರು ಅಯ್ಯನಕೆರೆಯಲ್ಲಿ ವೃದ್ಧೆಯ ಶವ ಪತ್ತೆ, ವಿಜಯಪುರ ಕಡಣಿ ಗ್ರಾಮದಲ್ಲಿ ಯುವ ರೈತ ಆತ್ಮಹತ್ಯೆ

ಆಲಮೇಲ ಕಡಣಿ ರಸ್ತೆಯಲ್ಲಿರುವ ಜಮೀನಿನಲ್ಲಿನ ಮರಕ್ಕೆ ಪುಂಡಲಿಂಗ ಜೀರಟಗಿ (22) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿದ್ದ ಬೆಳೆ ಹಾಳಾಗಿದ್ದು, ಜಮೀನಿನ‌ ಲೀಸ್ ಹಣ ಕೊಡಲಾಗದೆ ಯುವ ರೈತ ನೇಣಿಗೆ ಶರಣಾಗಿದ್ದಾರೆ.

ಚಿಕ್ಕಮಗಳೂರು ಅಯ್ಯನಕೆರೆಯಲ್ಲಿ ವೃದ್ಧೆಯ ಶವ ಪತ್ತೆ, ವಿಜಯಪುರ ಕಡಣಿ ಗ್ರಾಮದಲ್ಲಿ ಯುವ ರೈತ ಆತ್ಮಹತ್ಯೆ
ಚಿಕ್ಕಮಗಳೂರಿನ ವೃದ್ಧೆ ಮತ್ತು ವಿಜಯಪುರದ ಪುಂಡಲಿಂಗ ಜೀರಟಗಿ
Follow us
| Updated By: ಸಾಧು ಶ್ರೀನಾಥ್​

Updated on: Feb 13, 2021 | 12:13 PM

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಅಯ್ಯನಕೆರೆಯಲ್ಲಿ 60 ವರ್ಷದ ಅಪರಿಚಿತ ವೃದ್ಧೆಯ ಶವ ಪತ್ತೆಯಾಗಿದ್ದು, ಈ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು 55 ರಿಂದ 60 ವಯಸ್ಸಿನ ವೃದ್ಧೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಇದು ಮೇಲುನೋಟಕ್ಕೆ ಆತ್ಮಹತ್ಯೆಯಂತೆ ಕಾಣುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಡೂರಿನಿಂದ ಸಖರಾಯಪಟ್ಟಣಕ್ಕೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ವೃದ್ಧೆ ಬಂದಿದ್ದಾರೆ ಎಂದು ಪರ್ಸ್​ನಲ್ಲಿ ಸಿಕ್ಕಿರುವ ಟಿಕೆಟ್​ನಿಂದ ತಿಳಿದುಬಂದಿದೆ.

ವಿಜಯಪುರ ಜಿಲ್ಲೆಯಲ್ಲಿ ಯುವ ರೈತ ಆತ್ಮಹತ್ಯೆ: ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಪ್ರಕರಣ ಅಲಮೇಲ‌‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಆಲಮೇಲ ಕಡಣಿ ರಸ್ತೆಯಲ್ಲಿರುವ ಜಮೀನಿನಲ್ಲಿನ ಮರಕ್ಕೆ ಪುಂಡಲಿಂಗ ಜೀರಟಗಿ (22) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿದ್ದ ಬೆಳೆ ಹಾಳಾಗಿದ್ದು, ಜಮೀನಿನ‌ ಲೀಸ್ ಹಣ ಕೊಡಲಾಗದೆ ಹಾಗೂ‌ ಖಾಸಗಿಯಾಗಿ ಮಾಡಿದ ಸಾಲ‌ ಮರು ಪಾವತಿ ಮಾಡಲಾರದೆ ನೇಣಿಗೆ ಪುಂಡಲಿಂಗ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: DySP Lakshmi Suicide Case.. 50 ದಿನ ಕಳೆದ್ರೂ ಪತ್ತೆಯಾಗಿಲ್ಲ ಲಕ್ಷ್ಮೀ ಬಳಸ್ತಿದ್ದ ಮೊಬೈಲ್

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ