AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ಉತ್ತರ ಬರೆಯಲು ಯತ್ನ! ವಿದ್ಯಾರ್ಥಿ ಪೊಲೀಸರ ವಶಕ್ಕೆ

ಚಿಕ್ಕಮಗಳೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಂದು (ಜೂನ್​​ 18) ರಂದು ನಡೆಯುತ್ತಿದ್ದ ರಸಾಯನ ವಿಜ್ಞಾನ ವಿಷಯದ ಸಿಇಟಿ ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ಉತ್ತರ ಬರೆಯಲು ಯತ್ನಿಸಿದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಇಟಿ ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ಉತ್ತರ ಬರೆಯಲು ಯತ್ನ! ವಿದ್ಯಾರ್ಥಿ ಪೊಲೀಸರ ವಶಕ್ಕೆ
ಸಂಗ್ರಹ ಚಿತ್ರ
TV9 Web
| Edited By: |

Updated on: Jun 18, 2022 | 6:08 PM

Share

ಚಿಕ್ಕಮಗಳೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು (ಜೂನ್​​ 18) ನಡೆಯುತ್ತಿದ್ದ ರಸಾಯನ ವಿಜ್ಞಾನ (Chemistry) ವಿಷಯದ ಸಿಇಟಿ (CET) ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ಉತ್ತರ ಬರೆಯಲು ಯತ್ನಿಸಿದ ವಿದ್ಯಾರ್ಥಿಯನ್ನು (Student) ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿ ಮೈಸೂರು ಮೂಲದವನಾಗಿದ್ದು, ಮೊಬೈಲ್‌ ಫೋನ್‌ ಮೂಲಕ ಗೂಗಲ್‌ನಲ್ಲಿ ಉತ್ತರ ಹುಡುಕಲು ಯತ್ನಸಿದ್ದಾನೆ. ಈ ವೇಳೆ ಕೊಠಡಿ ಮೇಲ್ವಿಚಾರಕರು ಪರಿಶೀಲಿಸಿದಾಗ ಮೊಬೈಲ್‌ ಪತ್ತೆಯಾಗಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ನಡೆದ ಸಿಇಟಿ ಪರೀಕ್ಷೆ

ರಾಜ್ಯದಲ್ಲಿ ಜೂನ್ 16, 17 ಮತ್ತು 18ರಂದು ಸಿಇಟಿ ಪರೀಕ್ಷೆ ನಡೆದಿವೆ. ಈ ಪರೀಕ್ಷೆಯನ್ನು ನೀಟ್ ಮಾದರಿಯಲ್ಲಿ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ವಹಿಸಿದೆ. ಈ ಬಾರಿ 2.11 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಜೂನ್ 16ರಂದು ಜೀವಶಾಸ್ತ್ರ ಹಾಗೂ ಗಣಿತ ಪರೀಕ್ಷೆ , ಜೂನ್ 17ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಜೂನ್ 18ರಂದು ಹೊರನಾಡ ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆದಿವೆ.

ಇದನ್ನೂ ಓದಿ
Image
Career Guidance: ದ್ವಿತೀಯ ಪಿಯುಸಿ ನಂತರ BSC ಫಾರ್ಮಸಿ, BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ
Image
Career Guidance: ದ್ವಿತೀಯ ಪಿಯುಸಿ ನಂತರ ಮುಂದಿನ ಆಯ್ಕೆ ಏನು? ಮಾಹಿತಿ ಇಲ್ಲಿದೆ
Image
Karnataka 2nd PUC Result 2022: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
Image
Karnataka 2nd PUC Toppers List 2022: ದ್ವಿತೀಯ ಪಿಯುಸಿ ಫಲಿತಾಂಶ; ಶ್ವೇತಾ, ಸಹನಾ ಕಲಾ ವಿಭಾಗದಲ್ಲಿ, ಮಾನವ್​ ವಿನಯ್​ ವಾಣಿಜ್ಯದಲ್ಲಿ, ಸೀಮ್ರಾನ್ ವಿಜ್ಞಾನದಲ್ಲಿ ಕರ್ನಾಟಕಕ್ಕೆ ಪ್ರಥಮ

ಇದನ್ನು ಓದಿ: Karnataka 2nd PUC Result 2022: ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಫಲಿತಾಂಶದ ಬಗ್ಗೆ ಹೇಳಿದ್ದೇನು?

ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಸಿಇಟಿ ಪರೀಕ್ಷೆಗೆ ಬರುವಂತಿಲ್ಲ ಎಂದು ಪ್ರಾಧಿಕಾರವು ಸ್ಪಷ್ಟಪಡಿಸಿತ್ತು. ಈ ಬಾರಿ 2.11 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 1.4 ಲಕ್ಷ ಪುರುಷ ವಿದ್ಯಾರ್ಥಿಗಳು, 1.7 ಲಕ್ಷ ಮಹಿಳಾ ವಿದ್ಯಾರ್ಥಿಗಳು. ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್​ಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿಯಾಗಿತ್ತು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್ ಅಂಗಡಿಗಳಿಗೆ ಬೀಗ ಹಾಕಬೇಕು ಎಂದು ಸೂಚಿಸಲಾಗಿತ್ತು.

ಇದನ್ನು ಓದಿ: Career Guidance: ದ್ವಿತೀಯ ಪಿಯುಸಿ ನಂತರ BSC ಫಾರ್ಮಸಿ, BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

486 ಕೇಂದ್ರಗಳು:

ಸಿಇಟಿ ಪರೀಕ್ಷೆ ಕುರಿತು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಿದ್ದರು. ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಗಡಿ ಭಾಗದ 6 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿಯೂ ಅದೇ ರೀತಿ ಪರೀಕ್ಷೆ ನಡೆದಿದೆ. 486 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಈ ಪೈಕಿ ಬೆಂಗಳೂರಿನಲ್ಲಿ 87, ಇತರ ಜಿಲ್ಲೆಗಳಲ್ಲಿ 399 ಕೇಂದ್ರಗಳು ಇದ್ದವು. ಕಳೆದ ವರ್ಷಕ್ಕಿಂದ ಈ ಬಾರಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಒಟ್ಟು 486 ವೀಕ್ಷಕರು, 972 ವಿಶೇಷ ಜಾಗೃತ ದಳದ ಸದಸ್ಯರು, 486 ಪ್ರಶ್ನೆಪತ್ರಿಕೆ ಪಾಲಕರು, ಸುಮಾರು 9600 ಕೊಠಡಿ ಮೇಲ್ವಿಚಾರಕರು ಸೇರಿದಂತೆ ಒಟ್ಟು 20,483 ಸಿಬ್ಬಂದಿಯನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ಬಾರಿ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು ಎಂದು ಹೇಳಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ