AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಅರಣ್ಯ ಭೂಮಿ ಒತ್ತುವರಿ ತೆರವು ಆತಂಕದಿಂದ ಒಂದೇ ವಾರದಲ್ಲಿ ಇಬ್ಬರು ರೈತರು ಆತ್ಮಹತ್ಯೆ

ಒತ್ತುವರಿ ತೆರವು ಸದ್ಯ ಕಾಫಿನಾಡು ಚಿಕ್ಕಮಗಳೂರಿನ ರೈತರನ್ನ ನಿದ್ದೆಗೆಡಿಸಿದೆ. ಒಂದು ಕಡೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದರೆ, ಮತ್ತೊಂದು ಕಡೆ ಕಂದಾಯ ಭೂಮಿ ತೆರವು ಕಾರ್ಯ ನಡೆಯುತ್ತಿದೆ. ಈ ನಡುವೆ ಕೆರೆ ಒತ್ತುವರಿ ತೆರವಿಗೂ ಸರ್ಕಾರ ಸೂಚನೆ ನೀಡಿದ್ದು, ರೈತರನ್ನ ಕಂಗಾಲಾಗಿಸಿದೆ. ಈ ಹಿನ್ನಲೆ ಒಂದೇ ವಾರದಲ್ಲಿ ಅಕ್ರಮ ಒತ್ತುವರಿ ತೆರವು ಆತಂಕಕ್ಕೆ ಇಬ್ಬರು ಬಲಿಯಾಗಿದ್ದು, ಈ ಕುರಿತು ಒಂದು ಸ್ಟೋರಿ ಇಲ್ಲಿದೆ. 

ಚಿಕ್ಕಮಗಳೂರು: ಅರಣ್ಯ ಭೂಮಿ ಒತ್ತುವರಿ ತೆರವು ಆತಂಕದಿಂದ ಒಂದೇ ವಾರದಲ್ಲಿ ಇಬ್ಬರು ರೈತರು ಆತ್ಮಹತ್ಯೆ
ಅರಣ್ಯ ಭೂಮಿ ಒತ್ತುವರಿ ತೆರವು ಆತಂಕದಿಂದ ಆತ್ಮಹತ್ಯೆಗೆ ಶರಣಾದ  ಕರುಣಾಕರ್, ಮಲ್ಲೇಶ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Oct 08, 2024 | 6:26 PM

Share

ಚಿಕ್ಕಮಗಳೂರು, ಅ.08: ಜಿಲ್ಲೆಯ ಕೊಪ್ಪ(Koppa) ತಾಲೂಕಿನ ಮೇಗುಂದಾ ಗ್ರಾಮದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಆತಂಕದಿಂದ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಒಂದೇ ವಾರದಲ್ಲಿ ಜಿಲ್ಲೆಯ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತ ಕರುಣಾಕರ್ (58) ಮೃತ ರ್ದುದೈವಿ. ಮೂರು ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡಿದ್ದ ಮೃತ ರೈತ, ಕೃಷಿ ನಂಬಿ ಸೊಸೈಟಿ, ಬ್ಯಾಂಕ್​ಗಳಲ್ಲಿ ಸಾಲ ಮಾಡಿಕೊಂಡಿದ್ದ. ಒತ್ತುವರಿ ತೆರವು ಆತಂಕದಿಂದ ಇಂದು ರೈತ ಕರುಣಾಕರ್​ ಆತ್ಮಹ್ಯತೆ ಮಾಡಿಕೊಂಡಿದ್ದಾನೆ.

ಎರಡು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ ರೈತ ಮಲ್ಲೇಶ್​

ಚಿಕ್ಕಮಗಳೂರು ತಾಲೂಕಿನ ಕಂಚೇನಹಳ್ಳಿ ಗ್ರಾಮದ ರೈತ ಮಲ್ಲೇಶ್​ ಎಂಬಾತ ಕೆರೆ ಪಕ್ಕದ ಜಾಗದಲ್ಲಿ ಕಾಫಿ ತೋಟ ಬೆಳೆದಿದ್ದ. ಅಧಿಕಾರಿಗಳು ಏಕಾಏಕಿ ಸ್ಥಳಕ್ಕೆ ಹೋಗಿ ಒಂದೂ ನೋಟಿಸ್ ನೀಡದೆ ತೆರವಿಗೆ ಮುಂದಾಗಿದ್ದರು. ಒಂದು ಕಡೆ ಸಾಲದ ಶೂಲ, ಮತ್ತೊಂದು ಕಡೆ ತೆರವಿನ ಆತಂಕಕ್ಕೆ ಒಳಗಾಗಿ ಅಧಿಕಾರಿಗಳ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಲ್ಲೇಶ್ ಚಿಕಿತ್ಸೆ ಫಲಿಸದೆ ಕಳೆದ ಎರಡು ದಿನಗಳ ಹಿಂದೆ ಸಾವನ್ನಪ್ಪಿದ್ದ. ಇದೀಗ ಮತ್ತೋರ್ವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ:700 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಆದೇಶ

ಒಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒತ್ತುವರಿ ತೆರವು ಆತಂಕ ಮನೆ ಮಾಡಿದ್ದು, ಒತ್ತುವರಿ ತೆರವಿಗೆ ಹೆದರಿ ಒಂದೇ ವಾರದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆಗಳನ್ನ ಉಳಿಸುವ ನಿಟ್ಟಿನಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸರ್ಕಾರ ಸೂಚನೆ ನೀಡಿದೆ. ಆದ್ರೆ, ತೆರವಿಗೆ ಫಸಲು ಕಟಾವಿನವರೆಗೂ ಒಂದಷ್ಟು ಅವಕಾಶ ನೀಡಬೇಕು ಎಂದು ರೈತರು ಮನವಿ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ