ಚಿಕ್ಕಮಗಳೂರಿನಲ್ಲಿ ಅಪರೂಪದ ಕಾಡುಪಾಪ ದರ್ಶನ.. ನಾಯಿಗಳಿಂದ ರಕ್ಷಿಸಿ, ಸೆಲ್ಫಿ ಕ್ಲಿಕ್ಕಿಸಿ ಸಂತಸಪಟ್ಟ ಜನ

ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ..

ಚಿಕ್ಕಮಗಳೂರಿನಲ್ಲಿ ಅಪರೂಪದ ಕಾಡುಪಾಪ ದರ್ಶನ.. ನಾಯಿಗಳಿಂದ ರಕ್ಷಿಸಿ, ಸೆಲ್ಫಿ ಕ್ಲಿಕ್ಕಿಸಿ ಸಂತಸಪಟ್ಟ ಜನ
ಕಾಡುಪಾಪ
Follow us
|

Updated on:Mar 24, 2021 | 9:58 AM

ಚಿಕ್ಕಮಗಳೂರು: ಕಾಡಿನಿಂದ ನಾಡಿಗೆ ಬಂದಿದ್ದ ಪ್ರಾಣಿಯೊಂದಿಗೆ ಜನ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ನಡೆದಿದೆ. ತಡರಾತ್ರಿ ಕಾಡುಪಾಪವೊಂದು ಕಾಡಿನಿಂದ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್​ಗೆ ದಾರಿತಪ್ಪಿ ಬಂದಿದ್ದು ನಾಯಿಗಳಿಂದ ಅಪರೂಪದ ಅತಿಥಿಯನ್ನು ರಕ್ಷಿಸಿದ್ದಾರೆ. ಅಡವಿ ಪಾಪನ ಕಂಡು ಜನ ಸಂತಸಗೊಂಡಿದ್ದಾರೆ. ಮೊದಲಿಗೆ ಭಯವಾದರೂ ಅದು ಕಾಡುಪಾಪ ಎಂದು ತಿಳಿದ ಮೇಲೆ ಪೆಟ್ರೋಲ್ ಬಂಕ್​ಗೆ ಬಂದಿದ್ದ ಸವಾರರು ಕಾಡುಪಾಪದೊಂದಿಗೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನು ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿ ಅವರ ಸಮ್ಮುಖದಲ್ಲೇ ಚಾರ್ಮಾಡಿ ಅರಣ್ಯದಲ್ಲಿ ಕಾಡುಪಾಪ ಬಿಟ್ಟು ಬಂದಿದ್ದಾರೆ.

ಇನ್ನು ಕಾಡುಪಾಪಗಳಿಗೆ ದೊಡ್ಡ ಕಣ್ಣು(ಪಾಪೆ) ಇರುವುದರಿಂದ ಅದನ್ನು ಅಡವಿ ಪಾಪ ಎಂದೂ ಸಹ ಕರೆಯುತ್ತಾರೆ. ಕಾಡು ಪ್ರಾಣಿಗಳಲ್ಲೇ ಇದು ಅತ್ಯಂತ ಮುಗ್ಧ ಜೀವಿ. ಕಾಡುಪಾಪಗಳಿಗೆ ಹೆಚ್ಚು ನಾಚಿಕೆ ಸ್ವಭಾವವಿರುತ್ತೆ. ಇವು ನಿಶಾಚರಿ ಜೀವಿಗಳಾದ್ದರಿಂದ ಜನರ ಕಣ್ಣಿಗೆ ಬೀಳುವುದು ಅಪರೂಪ. ತಂಪು ಹವೆಯ ಎಲೆ ತೋಟಗಳು, ಮಾವಿನಮರ, ನೀಲಗಿರಿ, ಆಲ, ಅರಳಿ, ಹುಣಸೆ ಮರಗಳಲ್ಲಿ ಇವು ಬೀಡು ಬಿಡುತ್ತವೆ. ಹಣ್ಣು, ಕಾಯಿ, ಕೀಟ, ಜೀರುಂಡೆ, ಮಿಡತೆ, ಹಲ್ಲಿ, ಹಾವುರಾಣಿ, ಹಕ್ಕಿಗಳ ಮೊಟ್ಟೆ, ಮರಗಪ್ಪೆ ತಿನ್ನುತ್ತವೆ ಎಂದು ಪ್ರಾಣಿ ಪ್ರಿಯರು ಹೇಳುತ್ತಾರೆ.

kadupapa slender loris

ಕಾಡುಪಾಪ

kadupapa slender loris

ಅಪರೂಪದ ಅತಿಥಿ ನೋಡಿ ಸಂತಸಗೊಂಡ ಮಂದಿ

ಇದನ್ನೂ ಓದಿ: ನೆಲಮಂಗಲದಲ್ಲಿ ಕಾಡುಪಾಪ ಕಂಡು ಪುಳಕಿತಗೊಂಡ ಮಾನವ ಪಾಪಾಗಳು!

Published On - 8:36 am, Wed, 24 March 21

ತಾಜಾ ಸುದ್ದಿ
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ
ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಕುರಿತು ಕಮಿಷನರ್​ ಹೇಳಿದ್ದಿಷ್ಟು
ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಕುರಿತು ಕಮಿಷನರ್​ ಹೇಳಿದ್ದಿಷ್ಟು
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ವಿಜಯೇಂದ್ರ
ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ವಿಜಯೇಂದ್ರ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ