AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ರ ಮಹಾಮಳೆಗೆ ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ; 3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ

ಸರ್ಕಾರ, ಜಿಲ್ಲಾಡಳಿತದ ಧೋರಣೆ ವಿರೋಧಿಸಿ ಸಂತ್ರಸ್ತರು ಧರಣಿ ನಡೆಸಿದ್ದಾರೆ. ಬದುಕಲು ಬಿಡಿ ಇಲ್ಲಾ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ.

2019ರ ಮಹಾಮಳೆಗೆ ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ; 3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ
3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ
TV9 Web
| Edited By: |

Updated on: Mar 04, 2022 | 11:18 AM

Share

ಚಿಕ್ಕಮಗಳೂರು: ಜಿಲ್ಲೆಯ ಕಳಸ ಸಂತ್ರಸ್ತರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. 2019 ರ ಮಹಾಮಳೆಯಲ್ಲಿ ಮನೆ, ಜಮೀನು ಕಳೆದುಕೊಂಡಿದ್ದ ಜನರಿಗೆ ಈವರೆಗೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ. ಮನೆ, ಜಮೀನು ಕಳೆದುಕೊಂಡ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ಅಷ್ಟೇ ಅಲ್ಲದೆ, ಬಾಡಿಗೆ ಮನೆಯಲ್ಲಿ ವಾಸವಿದ್ದರೂ ಜಿಲ್ಲಾಡಳಿತ ಬಾಡಿಗೆ ಹಣ ನೀಡಿಲ್ಲ. ಸರ್ಕಾರ, ಜಿಲ್ಲಾಡಳಿತದ ಧೋರಣೆ ವಿರೋಧಿಸಿ ಸಂತ್ರಸ್ತರು ಧರಣಿ ನಡೆಸಿದ್ದಾರೆ. ಬದುಕಲು ಬಿಡಿ ಇಲ್ಲಾ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ.

ಇಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಆದರೆ ಹಲವು ಕಡೆ ಸಾಲು ಸಾಲು ಪ್ರತಿಭಟನೆ ನಡೆಯುತ್ತಿವೆ. ಇತ್ತ ಬೆಂಗಳೂರಿನಲ್ಲಿ ಕೂಡ ಇಂದು ಪ್ರತಿಭಟನೆಗಳು ನಡೆಯುತ್ತಿವೆ. ಪೊಲೀಸರಿಗೆ (Police) ನ್ಯಾಯ ಕೊಡಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮನೆ ಮುಂದೆ ವಂದೇಮಾತರಂ ಸಮಾಜಸೇವೆ ಸಂಘಟನೆ ಪ್ರತಿಭಟನೆ ಮಾಡುತ್ತಿದೆ. ಪ್ರಮೋಷನ್ ವಿಳಂಬದ ಬಗ್ಗೆ ಮತ್ತು ಸಂಬಳ ತಾರತಮ್ಯ ಕುರಿತು ಪೊಲೀಸರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ವಂದೇಮಾತರಂ ಸಮಾಜಸೇವೆ ಸಂಘಟನೆ ಬೆಂಗಳೂರಿನ ಆರ್​ಟಿ ನಗರದ ಸಿಎಂ ನಿವಾಸದ ಬಳಿ ಧರಣಿ ಮಾಡುತ್ತಿದ್ದಾರೆ. ಪೊಲೀಸರಿಗೆ ಅನೇಕ ವರ್ಷಗಳಿಂದ ಪ್ರೊಮೋಷನ್ ಆಗಿಲ್ಲ. ಸಂಬಳದಲ್ಲೂ ಅನ್ಯಾಯ ಆಗಿದೆ. ಬಜೆಟ್ನಲ್ಲಿ ಇದನ್ನ ಸರಿಪಡಿಸುವಂತೆ ಅಧ್ಯಕ್ಷ ಶಿವಕುಮಾರ್ ಸಿಎಂಗೆ ಮನವಿ ಮಾಡಿದ್ದಾರೆ.

ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಲು ಆಗ್ರಹ:

ಫ್ರೀಡ್ಂ ಪಾರ್ಕ್​ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಶನ್ ನಿಂದ ಪ್ರತಿಭಟನೆ ನಡೆಯುತ್ತಿದೆ. ಸೇವಾ ಹಿರಿತನದ ಆಧಾರದ ಮೇಲೆ ಗೌರವಧನವನ್ನು ಹೆಚ್ಚಳಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕಾರ್ಯಕರ್ತೆಯರು ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಗಳಿಂದ ಅಂಗನವಾಡಿ ಕಾರ್ಯೆಕರ್ತೆಯರು ಬಂದು ಭಾಗಿಯಾಗಿದ್ದಾರೆ.

ಇದನ್ನೂ ಓದಿ: Karnataka Budget 2022: ಇಂದು ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ; ನಿರೀಕ್ಷೆ ಹೆಚ್ಚಳ

ಇದನ್ನೂ ಓದಿ: ದಾವಣಗೆರೆ: ರಾತ್ರೋರಾತ್ರಿ ಗುಡಿಸಲು ತೆರವುಗೊಳಿಸಿದ ಜಿಲ್ಲಾಡಳಿತ; ಸ್ಥಳೀಯರ ತೀವ್ರ ಆಕ್ರೋಶ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ