2019ರ ಮಹಾಮಳೆಗೆ ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ; 3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ

ಸರ್ಕಾರ, ಜಿಲ್ಲಾಡಳಿತದ ಧೋರಣೆ ವಿರೋಧಿಸಿ ಸಂತ್ರಸ್ತರು ಧರಣಿ ನಡೆಸಿದ್ದಾರೆ. ಬದುಕಲು ಬಿಡಿ ಇಲ್ಲಾ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ.

2019ರ ಮಹಾಮಳೆಗೆ ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ; 3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ
3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ
Follow us
| Updated By: ganapathi bhat

Updated on: Mar 04, 2022 | 11:18 AM

ಚಿಕ್ಕಮಗಳೂರು: ಜಿಲ್ಲೆಯ ಕಳಸ ಸಂತ್ರಸ್ತರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. 2019 ರ ಮಹಾಮಳೆಯಲ್ಲಿ ಮನೆ, ಜಮೀನು ಕಳೆದುಕೊಂಡಿದ್ದ ಜನರಿಗೆ ಈವರೆಗೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ. ಮನೆ, ಜಮೀನು ಕಳೆದುಕೊಂಡ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ಅಷ್ಟೇ ಅಲ್ಲದೆ, ಬಾಡಿಗೆ ಮನೆಯಲ್ಲಿ ವಾಸವಿದ್ದರೂ ಜಿಲ್ಲಾಡಳಿತ ಬಾಡಿಗೆ ಹಣ ನೀಡಿಲ್ಲ. ಸರ್ಕಾರ, ಜಿಲ್ಲಾಡಳಿತದ ಧೋರಣೆ ವಿರೋಧಿಸಿ ಸಂತ್ರಸ್ತರು ಧರಣಿ ನಡೆಸಿದ್ದಾರೆ. ಬದುಕಲು ಬಿಡಿ ಇಲ್ಲಾ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ.

ಇಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಆದರೆ ಹಲವು ಕಡೆ ಸಾಲು ಸಾಲು ಪ್ರತಿಭಟನೆ ನಡೆಯುತ್ತಿವೆ. ಇತ್ತ ಬೆಂಗಳೂರಿನಲ್ಲಿ ಕೂಡ ಇಂದು ಪ್ರತಿಭಟನೆಗಳು ನಡೆಯುತ್ತಿವೆ. ಪೊಲೀಸರಿಗೆ (Police) ನ್ಯಾಯ ಕೊಡಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮನೆ ಮುಂದೆ ವಂದೇಮಾತರಂ ಸಮಾಜಸೇವೆ ಸಂಘಟನೆ ಪ್ರತಿಭಟನೆ ಮಾಡುತ್ತಿದೆ. ಪ್ರಮೋಷನ್ ವಿಳಂಬದ ಬಗ್ಗೆ ಮತ್ತು ಸಂಬಳ ತಾರತಮ್ಯ ಕುರಿತು ಪೊಲೀಸರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ವಂದೇಮಾತರಂ ಸಮಾಜಸೇವೆ ಸಂಘಟನೆ ಬೆಂಗಳೂರಿನ ಆರ್​ಟಿ ನಗರದ ಸಿಎಂ ನಿವಾಸದ ಬಳಿ ಧರಣಿ ಮಾಡುತ್ತಿದ್ದಾರೆ. ಪೊಲೀಸರಿಗೆ ಅನೇಕ ವರ್ಷಗಳಿಂದ ಪ್ರೊಮೋಷನ್ ಆಗಿಲ್ಲ. ಸಂಬಳದಲ್ಲೂ ಅನ್ಯಾಯ ಆಗಿದೆ. ಬಜೆಟ್ನಲ್ಲಿ ಇದನ್ನ ಸರಿಪಡಿಸುವಂತೆ ಅಧ್ಯಕ್ಷ ಶಿವಕುಮಾರ್ ಸಿಎಂಗೆ ಮನವಿ ಮಾಡಿದ್ದಾರೆ.

ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಲು ಆಗ್ರಹ:

ಫ್ರೀಡ್ಂ ಪಾರ್ಕ್​ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಶನ್ ನಿಂದ ಪ್ರತಿಭಟನೆ ನಡೆಯುತ್ತಿದೆ. ಸೇವಾ ಹಿರಿತನದ ಆಧಾರದ ಮೇಲೆ ಗೌರವಧನವನ್ನು ಹೆಚ್ಚಳಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕಾರ್ಯಕರ್ತೆಯರು ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಗಳಿಂದ ಅಂಗನವಾಡಿ ಕಾರ್ಯೆಕರ್ತೆಯರು ಬಂದು ಭಾಗಿಯಾಗಿದ್ದಾರೆ.

ಇದನ್ನೂ ಓದಿ: Karnataka Budget 2022: ಇಂದು ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ; ನಿರೀಕ್ಷೆ ಹೆಚ್ಚಳ

ಇದನ್ನೂ ಓದಿ: ದಾವಣಗೆರೆ: ರಾತ್ರೋರಾತ್ರಿ ಗುಡಿಸಲು ತೆರವುಗೊಳಿಸಿದ ಜಿಲ್ಲಾಡಳಿತ; ಸ್ಥಳೀಯರ ತೀವ್ರ ಆಕ್ರೋಶ

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ