AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಗೂರಿನಲ್ಲಿ ಜೋಡೆತ್ತುಗಳ ಭರ್ಜರಿ ಓಟ, ಜಿದ್ದಿಗೆ ಬಿದ್ದು ಸ್ಪರ್ಧೆಗಿಳಿದ ಹೋರಿಗಳು

ಚಿಕ್ಕಮಗಳೂರು: ಖದರ್ ಅಂದ್ರೆ ಇದು. ಮಿಂಚಿನ ಓಟ ಅಂದ್ರೆ ಹಿಂಗೆ. ಜೋಡೆತ್ತುಗಳ ಪವರ್ ನೋಡಿದ್ರೆ ಎಂಥವ್ರಿಗೂ ರೋಮಾಂಚನವಾಗುತ್ತೆ. ಕೇಕೆ, ಶಿಳ್ಳೆ ಶಬ್ದ ಕೇಳಿದರಂತೂ ಹೋರಿಗಳ ಮೈಯಲ್ಲೆಲ್ಲಾ ಕರೆಂಟ್ ಪಾಸಾಗುತ್ತೆ. ಚಿಕ್ಕಮಗಳೂರಿನ ತೇಗೂರಿನಲ್ಲಿ ಎತ್ತುಗಳಿಗಾಗಿಯೇ ಏರ್ಪಡಿಸಿದ್ದ ಜೋಡೆತ್ತಿನ ಗಾಡಿ ಸ್ಪರ್ಧೆಯ ಝಲಕ್‍ ಮೈ ರೋಮಾಂಚನ ವಾಗುವಂತೆ ಮಾಡಿತ್ತು. ಕನ್ನಡ ರಾಜ್ಯೋತ್ಸವ ಅಂಗವಾಗಿ ಅರಸು ಗೆಳೆಯರ ಬಳಗ ನಡೆಸೋ ಈ ಸ್ಪರ್ಧೆಗೆ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ ಸೇರಿ ರಾಜ್ಯದ ನಾನಾ ಭಾಗದಿಂದ 80ಕ್ಕೂ ಹೆಚ್ಚು ಜೋಡೆತ್ತುಗಳು […]

ತೇಗೂರಿನಲ್ಲಿ ಜೋಡೆತ್ತುಗಳ ಭರ್ಜರಿ ಓಟ, ಜಿದ್ದಿಗೆ ಬಿದ್ದು ಸ್ಪರ್ಧೆಗಿಳಿದ ಹೋರಿಗಳು
ಸಾಧು ಶ್ರೀನಾಥ್​
|

Updated on: Jan 01, 2020 | 2:36 PM

Share

ಚಿಕ್ಕಮಗಳೂರು: ಖದರ್ ಅಂದ್ರೆ ಇದು. ಮಿಂಚಿನ ಓಟ ಅಂದ್ರೆ ಹಿಂಗೆ. ಜೋಡೆತ್ತುಗಳ ಪವರ್ ನೋಡಿದ್ರೆ ಎಂಥವ್ರಿಗೂ ರೋಮಾಂಚನವಾಗುತ್ತೆ. ಕೇಕೆ, ಶಿಳ್ಳೆ ಶಬ್ದ ಕೇಳಿದರಂತೂ ಹೋರಿಗಳ ಮೈಯಲ್ಲೆಲ್ಲಾ ಕರೆಂಟ್ ಪಾಸಾಗುತ್ತೆ.

ಚಿಕ್ಕಮಗಳೂರಿನ ತೇಗೂರಿನಲ್ಲಿ ಎತ್ತುಗಳಿಗಾಗಿಯೇ ಏರ್ಪಡಿಸಿದ್ದ ಜೋಡೆತ್ತಿನ ಗಾಡಿ ಸ್ಪರ್ಧೆಯ ಝಲಕ್‍ ಮೈ ರೋಮಾಂಚನ ವಾಗುವಂತೆ ಮಾಡಿತ್ತು. ಕನ್ನಡ ರಾಜ್ಯೋತ್ಸವ ಅಂಗವಾಗಿ ಅರಸು ಗೆಳೆಯರ ಬಳಗ ನಡೆಸೋ ಈ ಸ್ಪರ್ಧೆಗೆ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ ಸೇರಿ ರಾಜ್ಯದ ನಾನಾ ಭಾಗದಿಂದ 80ಕ್ಕೂ ಹೆಚ್ಚು ಜೋಡೆತ್ತುಗಳು ಆಗಮಿಸಿದ್ವು. ಜಿದ್ದಿಗೆ ಬಿದ್ದಂತೆ ಸ್ಪರ್ಧೆಗೆ ಇಳಿದ ಹೋರಿಗಳು ಗುರಿಯತ್ತ ನುಗ್ಗಿ ಬಂದ್ವು.

ಇಂಥ ಸ್ಪರ್ಧೆಗಾಗಿಯೇ ಕೆಲ ಎತ್ತುಗಳನ್ನ ರೈತರು ಮೀಸಲಿಡ್ತಾರೆ. ಕೆಲ ರೈತರು ಹೊಲ ಗದ್ದೆಗಳಲ್ಲಿ ಕೆಲಸ ಮುಗಿದ ನಂತರ ಇಂಥ ಓಟಗಳಲ್ಲಿ ಭಾಗವಹಿಸಿ ಖುಷಿಪಡ್ತಾರೆ. ಇನ್ನು ಸ್ಪರ್ಧೆಯ ಹದಿನೈದು ದಿನ ಮುಂಚಿತವಾಗೇ ಎತ್ತುಗಳಿಗೆ ವಿಶೇಷ ತರಬೇತಿ ನೀಡಲಾಗುತ್ತೆ. ಹಿಂಡಿ, ಬೂಸಾ, ರಾಗಿ ಹುಲ್ಲು, ಮೆಕ್ಕೆಜೋಳದ ಜೊತೆ ಮೊಟ್ಟೆ ಹಾಗೂ ಮೆಂತೆ ಮುದ್ದೆಯನ್ನ ನೀಡಿ ರೆಡಿ ಮಾಡ್ತಾರೆ. ಸ್ಪರ್ಧೆಯಲ್ಲಿ ಪ್ರಶಸ್ತಿ ಗೆಲ್ಲೋದ್ಕಿಂತ ಭಾಗವಹಿಸೋದೆ ರೈತರಿಗೆ ಸಂತಸ.

ಮಲೆನಾಡಿನಲ್ಲಿ ಅಪರೂಪವೆನಿಸಿದ್ದ ಈ ಜೋಡೆತ್ತಿನಗಾಡಿ ಸ್ಪರ್ಧೆಯನ್ನ ನೋಡಲು ಸುತ್ತಮುತ್ತಲ ಗ್ರಾಮಗಳ ಐದು ಸಾವಿರಕ್ಕೂ ಹೆಚ್ಚ ಜನ ಬರ್ತಾರೆ. ಒಟ್ನಲ್ಲಿ, ಗ್ರಾಮೀಣ ಕ್ರೀಡೆಗಳು ನಶಿಸ್ತಿರೋ ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರಿನ ತೇಗೂರಿನಲ್ಲಿ ನಡೆದ ಈ ಸ್ಪರ್ಧೆ ಜನಮನ ಸೆಳೆಯಿತು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ