ತೇಗೂರಿನಲ್ಲಿ ಜೋಡೆತ್ತುಗಳ ಭರ್ಜರಿ ಓಟ, ಜಿದ್ದಿಗೆ ಬಿದ್ದು ಸ್ಪರ್ಧೆಗಿಳಿದ ಹೋರಿಗಳು

ಚಿಕ್ಕಮಗಳೂರು: ಖದರ್ ಅಂದ್ರೆ ಇದು. ಮಿಂಚಿನ ಓಟ ಅಂದ್ರೆ ಹಿಂಗೆ. ಜೋಡೆತ್ತುಗಳ ಪವರ್ ನೋಡಿದ್ರೆ ಎಂಥವ್ರಿಗೂ ರೋಮಾಂಚನವಾಗುತ್ತೆ. ಕೇಕೆ, ಶಿಳ್ಳೆ ಶಬ್ದ ಕೇಳಿದರಂತೂ ಹೋರಿಗಳ ಮೈಯಲ್ಲೆಲ್ಲಾ ಕರೆಂಟ್ ಪಾಸಾಗುತ್ತೆ. ಚಿಕ್ಕಮಗಳೂರಿನ ತೇಗೂರಿನಲ್ಲಿ ಎತ್ತುಗಳಿಗಾಗಿಯೇ ಏರ್ಪಡಿಸಿದ್ದ ಜೋಡೆತ್ತಿನ ಗಾಡಿ ಸ್ಪರ್ಧೆಯ ಝಲಕ್‍ ಮೈ ರೋಮಾಂಚನ ವಾಗುವಂತೆ ಮಾಡಿತ್ತು. ಕನ್ನಡ ರಾಜ್ಯೋತ್ಸವ ಅಂಗವಾಗಿ ಅರಸು ಗೆಳೆಯರ ಬಳಗ ನಡೆಸೋ ಈ ಸ್ಪರ್ಧೆಗೆ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ ಸೇರಿ ರಾಜ್ಯದ ನಾನಾ ಭಾಗದಿಂದ 80ಕ್ಕೂ ಹೆಚ್ಚು ಜೋಡೆತ್ತುಗಳು […]

ತೇಗೂರಿನಲ್ಲಿ ಜೋಡೆತ್ತುಗಳ ಭರ್ಜರಿ ಓಟ, ಜಿದ್ದಿಗೆ ಬಿದ್ದು ಸ್ಪರ್ಧೆಗಿಳಿದ ಹೋರಿಗಳು
Follow us
|

Updated on: Jan 01, 2020 | 2:36 PM

ಚಿಕ್ಕಮಗಳೂರು: ಖದರ್ ಅಂದ್ರೆ ಇದು. ಮಿಂಚಿನ ಓಟ ಅಂದ್ರೆ ಹಿಂಗೆ. ಜೋಡೆತ್ತುಗಳ ಪವರ್ ನೋಡಿದ್ರೆ ಎಂಥವ್ರಿಗೂ ರೋಮಾಂಚನವಾಗುತ್ತೆ. ಕೇಕೆ, ಶಿಳ್ಳೆ ಶಬ್ದ ಕೇಳಿದರಂತೂ ಹೋರಿಗಳ ಮೈಯಲ್ಲೆಲ್ಲಾ ಕರೆಂಟ್ ಪಾಸಾಗುತ್ತೆ.

ಚಿಕ್ಕಮಗಳೂರಿನ ತೇಗೂರಿನಲ್ಲಿ ಎತ್ತುಗಳಿಗಾಗಿಯೇ ಏರ್ಪಡಿಸಿದ್ದ ಜೋಡೆತ್ತಿನ ಗಾಡಿ ಸ್ಪರ್ಧೆಯ ಝಲಕ್‍ ಮೈ ರೋಮಾಂಚನ ವಾಗುವಂತೆ ಮಾಡಿತ್ತು. ಕನ್ನಡ ರಾಜ್ಯೋತ್ಸವ ಅಂಗವಾಗಿ ಅರಸು ಗೆಳೆಯರ ಬಳಗ ನಡೆಸೋ ಈ ಸ್ಪರ್ಧೆಗೆ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ ಸೇರಿ ರಾಜ್ಯದ ನಾನಾ ಭಾಗದಿಂದ 80ಕ್ಕೂ ಹೆಚ್ಚು ಜೋಡೆತ್ತುಗಳು ಆಗಮಿಸಿದ್ವು. ಜಿದ್ದಿಗೆ ಬಿದ್ದಂತೆ ಸ್ಪರ್ಧೆಗೆ ಇಳಿದ ಹೋರಿಗಳು ಗುರಿಯತ್ತ ನುಗ್ಗಿ ಬಂದ್ವು.

ಇಂಥ ಸ್ಪರ್ಧೆಗಾಗಿಯೇ ಕೆಲ ಎತ್ತುಗಳನ್ನ ರೈತರು ಮೀಸಲಿಡ್ತಾರೆ. ಕೆಲ ರೈತರು ಹೊಲ ಗದ್ದೆಗಳಲ್ಲಿ ಕೆಲಸ ಮುಗಿದ ನಂತರ ಇಂಥ ಓಟಗಳಲ್ಲಿ ಭಾಗವಹಿಸಿ ಖುಷಿಪಡ್ತಾರೆ. ಇನ್ನು ಸ್ಪರ್ಧೆಯ ಹದಿನೈದು ದಿನ ಮುಂಚಿತವಾಗೇ ಎತ್ತುಗಳಿಗೆ ವಿಶೇಷ ತರಬೇತಿ ನೀಡಲಾಗುತ್ತೆ. ಹಿಂಡಿ, ಬೂಸಾ, ರಾಗಿ ಹುಲ್ಲು, ಮೆಕ್ಕೆಜೋಳದ ಜೊತೆ ಮೊಟ್ಟೆ ಹಾಗೂ ಮೆಂತೆ ಮುದ್ದೆಯನ್ನ ನೀಡಿ ರೆಡಿ ಮಾಡ್ತಾರೆ. ಸ್ಪರ್ಧೆಯಲ್ಲಿ ಪ್ರಶಸ್ತಿ ಗೆಲ್ಲೋದ್ಕಿಂತ ಭಾಗವಹಿಸೋದೆ ರೈತರಿಗೆ ಸಂತಸ.

ಮಲೆನಾಡಿನಲ್ಲಿ ಅಪರೂಪವೆನಿಸಿದ್ದ ಈ ಜೋಡೆತ್ತಿನಗಾಡಿ ಸ್ಪರ್ಧೆಯನ್ನ ನೋಡಲು ಸುತ್ತಮುತ್ತಲ ಗ್ರಾಮಗಳ ಐದು ಸಾವಿರಕ್ಕೂ ಹೆಚ್ಚ ಜನ ಬರ್ತಾರೆ. ಒಟ್ನಲ್ಲಿ, ಗ್ರಾಮೀಣ ಕ್ರೀಡೆಗಳು ನಶಿಸ್ತಿರೋ ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರಿನ ತೇಗೂರಿನಲ್ಲಿ ನಡೆದ ಈ ಸ್ಪರ್ಧೆ ಜನಮನ ಸೆಳೆಯಿತು.

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​