AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಗೂರಿನಲ್ಲಿ ಜೋಡೆತ್ತುಗಳ ಭರ್ಜರಿ ಓಟ, ಜಿದ್ದಿಗೆ ಬಿದ್ದು ಸ್ಪರ್ಧೆಗಿಳಿದ ಹೋರಿಗಳು

ಚಿಕ್ಕಮಗಳೂರು: ಖದರ್ ಅಂದ್ರೆ ಇದು. ಮಿಂಚಿನ ಓಟ ಅಂದ್ರೆ ಹಿಂಗೆ. ಜೋಡೆತ್ತುಗಳ ಪವರ್ ನೋಡಿದ್ರೆ ಎಂಥವ್ರಿಗೂ ರೋಮಾಂಚನವಾಗುತ್ತೆ. ಕೇಕೆ, ಶಿಳ್ಳೆ ಶಬ್ದ ಕೇಳಿದರಂತೂ ಹೋರಿಗಳ ಮೈಯಲ್ಲೆಲ್ಲಾ ಕರೆಂಟ್ ಪಾಸಾಗುತ್ತೆ. ಚಿಕ್ಕಮಗಳೂರಿನ ತೇಗೂರಿನಲ್ಲಿ ಎತ್ತುಗಳಿಗಾಗಿಯೇ ಏರ್ಪಡಿಸಿದ್ದ ಜೋಡೆತ್ತಿನ ಗಾಡಿ ಸ್ಪರ್ಧೆಯ ಝಲಕ್‍ ಮೈ ರೋಮಾಂಚನ ವಾಗುವಂತೆ ಮಾಡಿತ್ತು. ಕನ್ನಡ ರಾಜ್ಯೋತ್ಸವ ಅಂಗವಾಗಿ ಅರಸು ಗೆಳೆಯರ ಬಳಗ ನಡೆಸೋ ಈ ಸ್ಪರ್ಧೆಗೆ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ ಸೇರಿ ರಾಜ್ಯದ ನಾನಾ ಭಾಗದಿಂದ 80ಕ್ಕೂ ಹೆಚ್ಚು ಜೋಡೆತ್ತುಗಳು […]

ತೇಗೂರಿನಲ್ಲಿ ಜೋಡೆತ್ತುಗಳ ಭರ್ಜರಿ ಓಟ, ಜಿದ್ದಿಗೆ ಬಿದ್ದು ಸ್ಪರ್ಧೆಗಿಳಿದ ಹೋರಿಗಳು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 01, 2020 | 2:36 PM

Share

ಚಿಕ್ಕಮಗಳೂರು: ಖದರ್ ಅಂದ್ರೆ ಇದು. ಮಿಂಚಿನ ಓಟ ಅಂದ್ರೆ ಹಿಂಗೆ. ಜೋಡೆತ್ತುಗಳ ಪವರ್ ನೋಡಿದ್ರೆ ಎಂಥವ್ರಿಗೂ ರೋಮಾಂಚನವಾಗುತ್ತೆ. ಕೇಕೆ, ಶಿಳ್ಳೆ ಶಬ್ದ ಕೇಳಿದರಂತೂ ಹೋರಿಗಳ ಮೈಯಲ್ಲೆಲ್ಲಾ ಕರೆಂಟ್ ಪಾಸಾಗುತ್ತೆ.

ಚಿಕ್ಕಮಗಳೂರಿನ ತೇಗೂರಿನಲ್ಲಿ ಎತ್ತುಗಳಿಗಾಗಿಯೇ ಏರ್ಪಡಿಸಿದ್ದ ಜೋಡೆತ್ತಿನ ಗಾಡಿ ಸ್ಪರ್ಧೆಯ ಝಲಕ್‍ ಮೈ ರೋಮಾಂಚನ ವಾಗುವಂತೆ ಮಾಡಿತ್ತು. ಕನ್ನಡ ರಾಜ್ಯೋತ್ಸವ ಅಂಗವಾಗಿ ಅರಸು ಗೆಳೆಯರ ಬಳಗ ನಡೆಸೋ ಈ ಸ್ಪರ್ಧೆಗೆ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ ಸೇರಿ ರಾಜ್ಯದ ನಾನಾ ಭಾಗದಿಂದ 80ಕ್ಕೂ ಹೆಚ್ಚು ಜೋಡೆತ್ತುಗಳು ಆಗಮಿಸಿದ್ವು. ಜಿದ್ದಿಗೆ ಬಿದ್ದಂತೆ ಸ್ಪರ್ಧೆಗೆ ಇಳಿದ ಹೋರಿಗಳು ಗುರಿಯತ್ತ ನುಗ್ಗಿ ಬಂದ್ವು.

ಇಂಥ ಸ್ಪರ್ಧೆಗಾಗಿಯೇ ಕೆಲ ಎತ್ತುಗಳನ್ನ ರೈತರು ಮೀಸಲಿಡ್ತಾರೆ. ಕೆಲ ರೈತರು ಹೊಲ ಗದ್ದೆಗಳಲ್ಲಿ ಕೆಲಸ ಮುಗಿದ ನಂತರ ಇಂಥ ಓಟಗಳಲ್ಲಿ ಭಾಗವಹಿಸಿ ಖುಷಿಪಡ್ತಾರೆ. ಇನ್ನು ಸ್ಪರ್ಧೆಯ ಹದಿನೈದು ದಿನ ಮುಂಚಿತವಾಗೇ ಎತ್ತುಗಳಿಗೆ ವಿಶೇಷ ತರಬೇತಿ ನೀಡಲಾಗುತ್ತೆ. ಹಿಂಡಿ, ಬೂಸಾ, ರಾಗಿ ಹುಲ್ಲು, ಮೆಕ್ಕೆಜೋಳದ ಜೊತೆ ಮೊಟ್ಟೆ ಹಾಗೂ ಮೆಂತೆ ಮುದ್ದೆಯನ್ನ ನೀಡಿ ರೆಡಿ ಮಾಡ್ತಾರೆ. ಸ್ಪರ್ಧೆಯಲ್ಲಿ ಪ್ರಶಸ್ತಿ ಗೆಲ್ಲೋದ್ಕಿಂತ ಭಾಗವಹಿಸೋದೆ ರೈತರಿಗೆ ಸಂತಸ.

ಮಲೆನಾಡಿನಲ್ಲಿ ಅಪರೂಪವೆನಿಸಿದ್ದ ಈ ಜೋಡೆತ್ತಿನಗಾಡಿ ಸ್ಪರ್ಧೆಯನ್ನ ನೋಡಲು ಸುತ್ತಮುತ್ತಲ ಗ್ರಾಮಗಳ ಐದು ಸಾವಿರಕ್ಕೂ ಹೆಚ್ಚ ಜನ ಬರ್ತಾರೆ. ಒಟ್ನಲ್ಲಿ, ಗ್ರಾಮೀಣ ಕ್ರೀಡೆಗಳು ನಶಿಸ್ತಿರೋ ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರಿನ ತೇಗೂರಿನಲ್ಲಿ ನಡೆದ ಈ ಸ್ಪರ್ಧೆ ಜನಮನ ಸೆಳೆಯಿತು.

Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"