AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ಬದಲಾವಣೆಯ ಎಫೆಕ್ಟ್​: ಭಾರತದ ಕಾಫಿ ಉತ್ಪಾದನೆಯಲ್ಲಿ ಭಾರಿ ಕುಸಿತ

ನಿರಂತರ ಮಳೆ ಹಾಗೂ ಹವಾಮಾನ ಬದಲಾವಣೆಯಿಂದಾಗಿ ಕರ್ನಾಟಕದಲ್ಲಿ ಕಾಫಿ ಉತ್ಪಾದನೆ ಭಾರಿ ಕುಸಿತ ಕಂಡಿದೆ. ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ (KPA) ಪ್ರಕಾರ, ಭಾರತದ ಕಾಫಿ ಉತ್ಪಾದನೆಯಲ್ಲಿ 30,000 ಟನ್ ಇಳಿಕೆಯಾಗುವ ನಿರೀಕ್ಷೆಯಿದೆ. ಅರಬಿಕಾ ಮತ್ತು ರೋಬಸ್ಟಾ ಬೆಳೆಗಳ ಇಳುವರಿ ಕಡಿಮೆಯಾಗಿದ್ದು, ಮಳೆಯಿಂದ ಎಲೆ ಕೊಳೆ ರೋಗವೂ ಹೆಚ್ಚಿದೆ. ಇದು ಕಾಫಿ ಬೆಳೆಗಾರರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.

ಹವಾಮಾನ ಬದಲಾವಣೆಯ ಎಫೆಕ್ಟ್​: ಭಾರತದ ಕಾಫಿ ಉತ್ಪಾದನೆಯಲ್ಲಿ ಭಾರಿ ಕುಸಿತ
ಕಾಫಿ ಬೆಳೆ
ಪ್ರಸನ್ನ ಹೆಗಡೆ
|

Updated on: Nov 18, 2025 | 7:38 AM

Share

ಚಿಕ್ಕಮಗಳೂರು, ನವೆಂಬರ್​ 18: ಈ ವರ್ಷ ಮೇ ತಿಂಗಳಿಂದ ನವೆಂಬರ್ ಮಧ್ಯಭಾಗದವರೆಗೆ ಆರು ತಿಂಗಳು ನಿರಂತರವಾಗಿ ಸುರಿದ ಮಳೆಯ ಪರಿಣಾಮ ಕಾಫಿ ತೋಟಗಳು ತತ್ತರಿಸಿಹೋಗಿವೆ. ಹೀಗಾಗಿ ಈ ವರ್ಷ ಭಾರತದ ಕಾಫಿ ಉತ್ಪಾದನೆಯಲ್ಲಿ 30,000 ಟನ್ ಕಡಿಮೆಯಾಗಲಿದೆ ಎಂದು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರನ್ನು ಪ್ರತಿನಿಧಿಸುವ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಶನ್‌ (KPA) ತಿಳಿಸಿದೆ. 2025–26ರ ಸಾಲಿನಲ್ಲಿ ದೇಶದ ಕಾಫಿ ಉತ್ಪಾದನೆ 4,03,000 ಟನ್ ಆಗಬಹುದೆಂದು ಅಂದಾಜಿಸಲಾಗಿತ್ತು. ಆದರೆ ಅದು 3,73,000 ಟನ್ ತಲುಪಬಹುದು ಎಂದು KPA ಹೇಳಿದೆ.

ಈ ವರ್ಷ ಅರಬಿಕಾ ಬೆಳೆಯನ್ನು 1,18,125 ಟನ್ ಅಂದಾಜಿಸಲಾಗಿತ್ತು. ಆದರೆ ಬೆಳೆ 1 ಲಕ್ಷದಿಂದ 1.2 ಲಕ್ಷ ಟನ್​ ಸಿಗಲಿದೆ. ಹಾಗೆಯೇ ರೋಬಸ್ಟಾ ಉತ್ಪಾದನೆ 2.6 ಲಕ್ಷ ಟನ್‌ನಿಂದ 2.7 ಲಕ್ಷ ಟನ್ ಸಿಗಬಹುದಾಗಿದ್ದು, ನಿರೀಕ್ಷೆ 2,84,875 ಟನ್ ಇದ್ದವು ಎಂದು ತನ್ನ ಉತ್ಪಾದನಾ ಅಂದಾಜನ್ನು KPA ಸೋಮವಾರ ಚಿಕ್ಕಮಗಳೂರಿನಲ್ಲಿ ನಡೆದ 67ನೇ ವಾರ್ಷಿಕ ಮಹಾಸಭೆ ಸಂದರ್ಭ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕಾಫಿ ಪ್ರಿಯರಿಗೆ ಬಿಗ್​​ ಶಾಕ್​, ನಾಲಿಗೆ ಮಾತ್ರವಲ್ಲ ಜೇಜೂ ಸುಡಲಿದೆ ನಿಮ್ಮ ಫೆವರೇಟ್​ ಪೇಯ

ಮೇ ತಿಂಗಳಿಂದ ಅಕ್ಟೋಬರ್ ಮಧ್ಯಭಾಗದವರೆಗೆ ಸುರಿದ ನಿರಂತರ ಮಳೆಯಿಂದಾಗಿ ಉಂಟಾದ ತಂಪು ಹವಾಮಾನ ಮತ್ತು ಸೂರ್ಯರಶ್ಮಿಯ ಕೊರತೆಯಿಂದಾಗಿ ಎಲೆ ಮತ್ತು ಕಾಂಡ ಕೊಳೆ ರೋಗಗಳು ಕಾಣಿಸಿಕೊಂಡಿವೆ. ಅಲ್ಲದೆ, ಮಳೆ ಬೆಳೆಯ ಮೇಲೆ ನಾನಾ ರೀತಿ ಪರಿಣಾಮ ಬೀರಿರುವ ಕಾರಣ ಕಾಫಿ ಉತ್ಪಾದನೆಯಲ್ಲಿ ಈ ಬಾರಿ ಕುಸಿತ ಉಂಟಾಗಲಿದೆ. ದೇಶದ ಒಟ್ಟು 4.65 ಲಕ್ಷ ಹೆಕ್ಟೇರ್ ಕಾಫಿ ಬೆಳೆ ಪ್ರದೇಶದಲ್ಲಿ ಕರ್ನಾಟಕದ ಪಾಲು 2.46 ಲಕ್ಷ ಹೆಕ್ಟೇರ್. ದೇಶದ ಶೇ.70 ರಷ್ಟು ಕಾಫಿಯನ್ನು ಕರ್ನಾಟಕ ಬೆಳೆಯುತ್ತದೆ. ಆದರೆ ಕಳೆದ 20 ವರ್ಷಗಳಲ್ಲಿ ಉತ್ಪಾದನಾಶಕ್ತಿ ಮತ್ತು ಬೆಳೆ ಪ್ರದೇಶ ಎರಡೂ ತೀವ್ರ ಹವಾಮಾನದ ಪರಿಣಾಮವಾಗಿ ಕುಸಿಯುತ್ತಿವೆ ಎಂದು KPA ಅಧ್ಯಕ್ಷ ಎ. ಅರವಿಂದ್ ರಾವ್ ತಿಳಿಸಿದ್ದಾರೆ.

ಕರ್ನಾಟಕದ ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನ 2,000ಕ್ಕೂ ಹೆಚ್ಚು ಕಾಫಿ ಬೆಳೆಗಾರರಿಗೆ 400 ಕೋಟಿ – 500 ಕೋಟಿಯಷ್ಟು ಸಾಲ ಬಾಕಿಯಿದ್ದು, ಇವರಲ್ಲಿ ಅನೇಕರು ಬ್ಯಾಂಕುಗಳ ವಿವಿಧ ರೀತಿಯ ಕಿರುಕುಳವನ್ನು ಎದುರಿಸುತ್ತಿದ್ದಾರೆ. ಬ್ಯಾಂಕುಗಳು SARFAESI ಕಾಯ್ದೆಯ ವಿಧಿಗಳನ್ನು ಬಳಸಿಕೊಂಡು ಕೃಷಿಕರ ಆಸ್ತಿಯನ್ನು ಹರಾಜು ಮಾಡಬಹುದಾಗಿದೆ. ಆದ್ದರಿಂದ, ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಿ ಪರಿಹಾರ ಮಾರ್ಗ ಒದಗಿಸುವ ಅಗತ್ಯವಿದೆ ಎಂದು ಬೆಳೆಗಾರರು ಮನವಿ ಮಾಡಿರೋದಾಗಿ ದಿ ಹಿಂದು ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್