ಚಿಕ್ಕಮಗಳೂರು ಅರಣ್ಯ ವಲಯದ ಹೋಂಸ್ಟೇ, ರೆಸಾರ್ಟ್​​ಗಳಿಗೆ ಅರಣ್ಯ ಇಲಾಖೆ ನೋಟಿಸ್​

| Updated By: ವಿವೇಕ ಬಿರಾದಾರ

Updated on: Sep 10, 2024 | 9:26 AM

ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್​ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್ ಮಾಲಿಕರಿಗೆ ನೋಟಿಸ್​ ನೀಡಿದೆ.

ಚಿಕ್ಕಮಗಳೂರು ಅರಣ್ಯ ವಲಯದ ಹೋಂಸ್ಟೇ, ರೆಸಾರ್ಟ್​​ಗಳಿಗೆ ಅರಣ್ಯ ಇಲಾಖೆ ನೋಟಿಸ್​
ಅರಣ್ಯ ಇಲಾಖೆ
Follow us on

ಚಿಕ್ಕಮಗಳೂರು, ಸೆಪ್ಟೆಂಬರ್​ 10: ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತ (Shiradi Ghat Landslide) ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ (Karnataka Government) ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್​​ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್​ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.

ಚಿಕ್ಕಮಗಳೂರು ಅರಣ್ಯ ವಲಯ (Chikmagalur Forest Zone) ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್​ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್​ ಮಾಲಿಕರು ತಮ್ಮ ಹೋಂಸ್ಟೇಗೆ ಸಂಬಂಧಿಸಿದ ಕಂದಾಯ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಡಿಎಫ್​ಒ ರಮೇಶ್ ಬಾಬು ಅವರು ನೋಟಿಸ್ ಹೊರಡಿಸಿದ್ದಾರೆ.

ಇದನ್ನೂ ಓದಿ: ಟ್ರೆಕ್ಕಿಂಗ್​ ಪ್ರಿಯರಿಗೆ ಅರಣ್ಯ ಇಲಾಖೆಯಿಂದ ಶಾಕ್;​ ರಾಜ್ಯಾದ್ಯಂತ ತಾತ್ಕಾಲಿಕವಾಗಿ ಚಾರಣಕ್ಕೆ ನಿರ್ಬಂಧ!

ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್​​​ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು. ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ​​ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿತ್ತು.

ಇದೀಗ, ಅನಧೀಕೃತವಾಗಿ ನಡೆಯುತ್ತಿರುವ ರೆಸಾರ್ಟ್​ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 am, Tue, 10 September 24