AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕರ ವೇತನ ವಾಪಸ್​ ಕೇಳಿದ ಸರ್ಕಾರ: ಹಿರೇಮಗಳೂರು ಕಣ್ಣನ್​​ಗೆ ನೋಟಿಸ್

ಅರ್ಚಕರಿಗೆ ನೀಡುತ್ತಿದ್ದ ವೇತನವನ್ನು ರಾಜ್ಯ ಸರ್ಕಾರ ವಾಪಸ್ ಕೇಳಿದೆ. ಕನ್ನಡದ ಪಂಡಿತ, ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ತಡೆ ಹಿಡಿದು, 4500 ರೂಪಾಯಿಯಂತೆ 10 ವರ್ಷಕ್ಕೆ 4,74,000 ರೂ. ಹಣವನ್ನು ಸರ್ಕಾರಕ್ಕೆ ವಾಪಸ್​​ ನೀಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ನೋಟಿಸ್​ ಜಾರಿ ಮಾಡಿದೆ.

ಅರ್ಚಕರ ವೇತನ ವಾಪಸ್​ ಕೇಳಿದ ಸರ್ಕಾರ: ಹಿರೇಮಗಳೂರು ಕಣ್ಣನ್​​ಗೆ ನೋಟಿಸ್
ಕನ್ನಡ ಪಂಡಿತ, ಅರ್ಚಕ ಹಿರೇಮಗಳೂರು ಕಣ್ಣನ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Jan 23, 2024 | 10:42 AM

Share

ಚಿಕ್ಕಮಗಳೂರು, ಜನವರಿ 23: ದೇಶದಾದ್ಯಂತ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Government) ಅರ್ಚಕರಿಗೆ ನೀಡಿದ್ದ ವೇತನವನ್ನೇ ವಾಪಸ್ ಕೇಳಿದೆ. ಕನ್ನಡದಲ್ಲೇ ರಾಮನ ಅರ್ಚನೆ ಮಾಡುವ ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ (Hiremagaluru Kannan) ಅವರ ವೇತನ ವಾಪಸ್ ಕೇಳುವ ಮೂಲಕ ಸಿದ್ದರಾಮಯ್ಯ ಸರ್ಕಾರ ಅವರಿಗೆ ಶಾಕ್ ನೀಡಿದೆ. ಅಷ್ಟೇ ಅಲ್ಲದೆ, ಅವರಿಗೆ ನೀಡಲಾಗುತ್ತಿರುವ ವೇತನವನ್ನೂ ತಡೆಹಿಡಿಯಲಾಗಿದೆ. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ಕನ್ನಡದ ಪಂಡಿತ, ಅರ್ಚಕ ಹಿರೇಮಗಳೂರು ಕಣ್ಣನ್​​ ಅವರಿಗೆ ಜಿಲ್ಲಾಡಳಿತ ನೋಟಿಸ್​​ ನೀಡಿದೆ.

ಕನ್ನಡದ ಪಂಡಿತ, ಕನ್ನಡ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರು ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರ ವಲಯದಲ್ಲಿರುವ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ‌ ಇದೆ ಅಂತ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ, ಈ ತಿಂಗಳ ವೇತನವನ್ನು ತಡೆ ಹಿಡಿದು 2023ರ ಡಿಸೆಂಬರ್​ 2ರಂದು  ತಹಶಿಲ್ದಾರ್ ಸುಮಂತ್ ನೋಟಿಸ್​ ನೀಡಿದ್ದಾರೆ.

ಒಂದೆಡೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿದೆ. ಇತ್ತ ಬೆಂಗಳೂರು ಪೂರ್ವ ತಾಲ್ಲೂಕಿನ ಹಿರಂಡಗಹಳ್ಳಿಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿರುವ ಸಿದ್ದರಾಮಯ್ಯ ನಾವು ಗಾಂಧೀಜಿಯವರು ಆರಾಧಿಸಿದ ರಾಮನ ಆರಾಧಕರು ಎಂದು ಹೇಳಿದ್ದಾರೆ. ಆದರೆ, ಇದೀಗ ಸರ್ಕಾರ ರಾಮ ದೇಗುಲದ ಅರ್ಚಕರಿಗೇ ವೇತನ ವಾಪಸ್ ಕೇಳಿ ನೋಟಿಸ್ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕಲ್ಯಾಣ ರಾಮನ 1200 ವರ್ಷಗಳ ಪುರಾತನ ದೇವಾಲಯ: ನಿತ್ಯವೂ ಕನ್ನಡದಲ್ಲೇ ಮಂತ್ರಘೋಷ

 ದೇವಾಲಯದಲ್ಲಿ ಕನ್ನಡದಲ್ಲೇ ಮಂತ್ರಘೋಷ

ಈ ದೇಗುಲದಲ್ಲಿ ದಿನ ನಿತ್ಯವೂ ಸೀತಾ ರಾಮ ಲಕ್ಷ್ಮಣರಿಗೆ ಕನ್ನಡದಲ್ಲೇ ಮಂತ್ರಘೋಷಗಳಿಂದ ಪೂಜೆ ಸಲ್ಲಿಸುವುದು ವಿಶೇಷವಾಗಿದೆ. ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ನೇತೃತ್ವದಲ್ಲಿ ಕನ್ನಡದಲ್ಲಿ ಕಲ್ಯಾಣ ರಾಮನಿಗೆ ಕನ್ನಡದಲ್ಲಿ ಪೂಜೆ ಕಾರ್ಯ ನಡೆಯುತ್ತದೆ. ರಾಜ್ಯ ಹೊರ ರಾಜ್ಯದಿಂದ ಆಗಮಿಸುವ ನೂರಾರು ಭಕ್ತರು ಕಲ್ಯಾಣ ರಾಮರ ದರ್ಶನ ಪಡೆಯುತ್ತಿದ್ದಾರೆ.

ಕನ್ನಡದಲ್ಲೇ ಪೂಜಿಸುವ ಅರ್ಚಕರಿಗೆ ಸಂಕಷ್ಟ

ಒಂದಡೆ ರಾಜ್ಯ ಕಾಂಗ್ರೆಸ್ ನಾಯಕರು​ ಹಿಂದಿ ಹೇರಿಕೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಆದರೆ ಇತ್ತ  ಕನ್ನಡದಲ್ಲೇ ಮಂತ್ರಗಳನ್ನು ಹೇಳುತ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬರುವಂತೆ ಮಾಡಿರುವ ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್​ ಅವರಿಗೆ ರಾಜ್ಯ ಕಾಂಗ್ರೆಸ್​ ಸರ್ಕಾರ ನೋಟಿಸ್​ ನೀಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:12 am, Tue, 23 January 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?