AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಮುಳ್ಳಯ್ಯನಗಿರಿಯಲ್ಲಿ ಕಂಟ್ರೋಲ್ ಟೂರಿಸಂ, ಗಿರಿಗೆ ಬರಲು ಬುಕ್ ಮಾಡಿಕೊಂಡು ಬನ್ನಿ

ಕಾಫಿನಾಡು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ವಾಹನ ದಟ್ಟಣೆ ಹೆಚ್ಚುತ್ತಿದೆ. ಹೀಗಾಗಿ, ಜಿಲ್ಲಾಡಳಿತ ಆ ನಿಸರ್ಗ ಮಾತೆಯ ತವರನ್ನು ಉಳಿಸಲು ಕಂಟ್ರೋಲ್ ಟೂರಿಸಂಗೆ ಮುಂದಾಗುತ್ತಿದೆ. ಹಾಗಾದರೆ, ಲಿಮಿಟೆಡ್ ಟೂರಿಸ್ಟಾ, ಟೂರಿಸ್ಟ್ ವೆಹಿಕಲ್ ಬ್ಯಾನಾ? ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಚಿಕ್ಕಮಗಳೂರು ಮುಳ್ಳಯ್ಯನಗಿರಿಯಲ್ಲಿ ಕಂಟ್ರೋಲ್ ಟೂರಿಸಂ, ಗಿರಿಗೆ ಬರಲು ಬುಕ್ ಮಾಡಿಕೊಂಡು ಬನ್ನಿ
ಮುಳ್ಳಯ್ಯನಗಿರಿಯಲ್ಲಿ ಸಂಚಾರ ದಟ್ಟಣೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 26, 2024 | 7:57 AM

Share

ಚಿಕ್ಕಮಗಳೂರು, ಜೂನ್​ 26: ಮುಳ್ಳಯ್ಯನಗಿರಿ (Mullayangiri) ರಾಜ್ಯದ ಅತ್ಯಂತ ಎತ್ತರ ಶಿಖರ. ಎತ್ತ ನೋಡಿದರೂ ಮುಗಿಲೆತ್ತರದ ಬೆಟ್ಟಗುಡ್ಡಗಳು. ಇತ್ತೀಚಿನ ವರ್ಷಗಳಲ್ಲಿ ಪ್ರವಾಸಿಗರು, ವಾಹನಗಳಿಂದ ಮುಳ್ಳಯ್ಯನಗಿರಿ ಸೊರಗುತ್ತಿರುವುದೆ. ವೀಕ್​ಎಂಡ್‍ನಲ್ಲಿ ಸಾವಿರಾರು ಜನರು ಇಲ್ಲಿಗೆ ಆಗಮಿಸುತ್ತಾರೆ. ಹೀಗೆ ಬರುವ ಪ್ರವಾಸಿಗರು ಸ್ವಂತ ವಾಹನದಲ್ಲಿ ಪ್ಲಾಸ್ಟಿಕ್, ಮದ್ಯವನ್ನು ತರುತ್ತಾರೆ. ಇದರಿಂದ ಮುಳ್ಳಯ್ಯಗಿರಿ ಮಲೀನವಾಗುತ್ತಿದೆ ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಕಂಟ್ರೋಲ್ ಟೂರಿಸಂ (Control Tourism) ತೆರೆಯಲು ಮುಂದಾಗಿದೆ.

ಸರ್ಕಾರ ಮುಳ್ಳಯ್ಯನಗಿರಿಗೆ ಆನ್‍ಲೈನ್ ಪೋರ್ಟಲ್ ತೆರೆಯಲಿದ್ದು, ನಿತ್ಯ ಇಂತಿಷ್ಟೆ ಪ್ರವಾಸಿಗರು ಭೇಟಿ ನೀಡಬೇಕೆಂದು ನಿಯಮ ಜಾರಿಗೆ ತರಲಿದೆ. ಬುಕ್ಕಿಂಗ್​​ ಅನ್ನು ಕ್ಯೂಆರ್​ ಕೋಡ್ ಅಥವಾ ವೆಬ್​ ಪೋರ್ಟಲ್​​ಗೆ ಭೇಟಿ ನೀಡಿ ಬುಕ್ಕಿಂಗ್ ಮಾಡುವ ಅವಕಾಶವಿದೆ. ಅದು ಕಡಿಮೆ ಜನರಿಗೆ ಮಾತ್ರ ಅವಕಾಶವಿದೆ.

ಇದನ್ನೂ ಓದಿ: ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಜಿಲ್ಲಾಡಳಿತ ಮುಳ್ಳಯ್ಯನಗಿರಿ ಉಳಿವಿಗೆ ಈ ಮಹತ್ವದ ಹೆಜ್ಜೆ ಇಟ್ಟಿದೆ. ಗಿರಿ ಭಾಗಕ್ಕೆ ಕಂಟ್ರೋಲ್ ಟೂರಿಸಂ ಮಾಡದಿದ್ದರೆ ಮುಂದೊಂದು ದಿನ ಗಿರಿಗೆ ಅನಾಹುತ ಕಟ್ಟಿಟ್ಟ ಬುತ್ತಿ. ಈಗಾಗಲೇ ಭಾರಿ ವಾಹನಗಳಿಗೆ ನಿಷೇಧಿಸಲಾಗಿದೆ. ಆದರೆ, ಇದೀಗ ಪ್ರವಾಸಿಗರ ಸಣ್ಣ ಸಣ್ಣ ವಾಹನಗಳಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ, ಮುಳ್ಳಯ್ಯನಗಿರಿಯ ಪಶ್ಚಿಮ ಘಟ್ಟಗಳ ಸಾಲನ್ನು ಉಳಿಸುವುದು ಅನಿವಾರ್ಯವಾಗಿದೆ. ಮುಂಜಾನೆ ಸಮಯದಲ್ಲಿ ಇಂತಿಷ್ಟು, ಮಧ್ಯಾಹ್ನದ ನಂತರ ಇಂತಿಷ್ಟು ವಾಹನಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.

ಒಟ್ಟಾರೆ, ಜಿಲ್ಲಾಡಳಿತ ಕಂಟ್ರೋಲ್ ಟೂರಿಸಂ ತೆರೆಯಲು ಚಿಂತಿಸಿರುವುದನ್ನು ಸ್ಥಳೀಯರು ಮತ್ತು ಪರಿಸರವಾದಿಗಳು ಸ್ವಾಗತಿಸಿದ್ದಾರೆ. ಈ ಹಿಂದೆ ಕೂಡ ಇದೇ ಯೋಜನೆ ರೂಪಿಸಲಾಗಿತ್ತು. ಆದರೆ, ಕಂಪ್ಲೀಟ್ ಟೂರಿಸ್ಟ್ ವೆಹಿಕಲ್ ಬ್ಯಾನ್ ಮಾಡುವ ಆ ಯೋಜನೆಯೂ ಅರ್ಧಕ್ಕೆ ಮೊಟಕುಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ