AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾಗತಿ ಆಯ್ತು, ಆದರೆ ನಕ್ಸಲರ ಬಳಿ ಇದ್ದ ಶಸ್ತ್ರಾಸ್ತ್ರ ಎಲ್ಲಿ ಹೋಯ್ತು!?

ಆರು ಮಂದಿ ನಕ್ಸಲರು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾಗಿದ್ದಾರೆ. ಆದರೆ, ಅವರು ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ ಎಂಬುದು ತಿಳಿದುಬಂದಿದೆ. ಆ ಬಗ್ಗೆ ಇದೀಗ ಪೊಲೀಸರು ತನಿಖೆ ನಡೆಸಲಿದ್ದಾರೆ. ನಕ್ಸಲರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆಯಲಿದ್ದಾರೆ. ಈ ಮಧ್ಯೆ, ನಕ್ಸಲರಿಗೆ ಪ್ಯಾಕೇಜ್ ನೀಡುವ ಬಗ್ಗೆ ಬಿಜೆಪಿ ಯುಷ ಮೋರ್ಚಾ ಆಕ್ಷೇಪ ವ್ಯಕ್ತಪಡಿಸಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ.

ಶರಣಾಗತಿ ಆಯ್ತು, ಆದರೆ ನಕ್ಸಲರ ಬಳಿ ಇದ್ದ ಶಸ್ತ್ರಾಸ್ತ್ರ ಎಲ್ಲಿ ಹೋಯ್ತು!?
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದ ಶಸರಣಾದ ನಕ್ಸಲರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma|

Updated on: Jan 09, 2025 | 10:16 AM

Share

ಬೆಂಗಳೂರು, ಜನವರಿ 9: ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಮೋಸ್ಟ್ ವಾಂಟೆಡ್ ನಕ್ಸಲರು 6 ಮಂದಿ ಬುಧವಾರ ಶರಣಾಗಿದ್ದಾರೆ. ಇದರ ಬೆನ್ನಲ್ಲೇ, ಫಾಸ್ಟ್​ ಟ್ರ್ಯಾಕ್ ಕೋರ್ಟ್​ಗಳನ್ನು ನಿರ್ಮಿಸಿ ಅವರಿಗೆ ತ್ವರಿತ ನ್ಯಾಯ ಒದಗಿಸುವ ಯೋಚನೆ ಸರ್ಕಾರಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ. ಇದೆಲ್ಲ ನಿಜ, ಆದರೆ ಶರಣಾದ ನಕ್ಸಲರ ಬಳಿ ಇದ್ದ ಶಸ್ತ್ರಾಸ್ತ್ರಗಳು ಈಗೆಲ್ಲಿವೆ ಎಂಬ ಪ್ರಶ್ನೆ ಉದ್ಭವಿಸಿದೆ.

ಶರಣಾಗತಿ ವೇಳೆ ನಕ್ಸಲರು ಶಸ್ತ್ರಾಸ್ತ್ರಗಳನ್ನು ಸರೆಂಡರ್ ಮಾಡಿಲ್ಲ ಎನ್ನಲಾಗಿದೆ. ಹೀಗಾಗಿ ಸದ್ಯ ನಕ್ಸಲರ ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ‌ ಹಾಕುತ್ತಿದ್ದಾರೆ.

ನಕ್ಸಲರು ಶಸ್ತ್ರಾಸ್ತ್ರ ಸಮೇತ ಚಿಕ್ಕಮಗಳೂರು ಕಾಡಿನಲ್ಲಿ ಓಡಾಡುತ್ತಿದ್ದುದಕ್ಕೆ, ಅವರ ಬಳಿ ಶಸ್ತ್ರಾಸ್ತ್ರ ಇರುವ ಬಗ್ಗೆ 4 ತಿಂಗಳ ಹಿಂದೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಹೀಗಾಗಿ ಪೊಲೀಸರು ನಕ್ಸಲರ ಬಳಿ ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ನಕ್ಸಲರ ತನಿಖೆಗೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಡಿವೈಎಸ್​ಪಿ ಬಾಲಾಜಿ ಸಿಂಗ್ ನೇತೃತ್ವದ ತಂಡ ರಚನೆ ಮಾಡಲಾಗಿದೆ. ಸದ್ಯ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳಿರುವ ಬಾಲಾಜಿ ಸಿಂಗ್ ತಂಡ ಮಾಹಿತಿ ಕಲೆಹಾಕಲಿದೆ.

ಆರು ಮಂದಿ ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ವಿದಾಯ ಹೇಳಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಬುಧವಾರ ಶರಣಾಗಿದ್ದರು. ಶರಣಾದ ನಕ್ಸಲರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆ ನಡೆಸಿದ್ದು, ಅವರ ಸಮಸ್ಯೆ, ಬೇಡಿಕೆಗಳನ್ನು ಆಲಿಸಿದ್ದಾರೆ. ಅಲ್ಲದೇ ಅವರ ಪ್ರೋತ್ಸಾಹ ಧನದ ಬಗ್ಗೆಯೂ ಚರ್ಚಿಸಿದ್ದಾರೆ.

ಬುಧವಾರ ಶರಣಾದ ನಕ್ಸಲರ ಪೈಕಿ ಮಹಿಳೆಯರನ್ನು ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಸದ್ಯ ಅವರನ್ನು ಮಡಿವಾಳ ಎಫ್ಎಸ್ಎಲ್​ಗೆ ಪೊಲೀಸರು ಕರೆದೊಯ್ದಿದ್ದಾರೆ. ಮತ್ತಿಬ್ಬರು ಪುರುಷರನ್ನು ಮಡಿವಾಳದ ಎಫ್ಎಸ್ಎಲ್ ಸ್ಪೇಷಲ್ ಸೆಲ್​​ನಲ್ಲಿಯೇ ಇರಿಸಲಾಗಿತ್ತು.

ಬಿಜೆಪಿನ ಯುವ ಮೋರ್ಚಾ ಆಕ್ಷೇಪ

ಏತನ್ಮಧ್ಯೆ, ಶರಣಾದ ನಕ್ಸಲರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾದಿಂದ ವಿರೋಧ ವ್ಯಕ್ತವಾಗಿದೆ. ನಮ್ಮ ಮೇಲೂ ಕೇಸ್​ಗಳಿವೆ, ವಾಪಸ್ ಪಡೆದು ಪ್ಯಾಕೇಜ್ ನೀಡಿ. ಸಂಪೂರ್ಣ ಕೇಸ್ ಕ್ಲಿಯರ್ ಮಾಡಿ ಭೂಮಿ ನೀಡಿ ಎಂದು ಯುವ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸಿಎಂ ಮುಂದೆ 6 ನಕ್ಸಲರು ಶರಣಾಗತಿ, ಕರ್ನಾಟಕದ ಇತಿಹಾಸದಲ್ಲಿಯೇ ಇದೇ ಮೊದಲು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಫೇಸ್​ಬುಕ್ ಅಭಿಯಾನವನ್ನೂ ಆರಂಭಿಸಿದೆ. ನಕ್ಸಲರ ಶರಣಾಗತಿ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ. ಕೇಂದ್ರ ಗೃಹ ಇಲಾಖೆಗೂ ಬಿಜೆಪಿ ಕಾರ್ಯಕರ್ತರು ಮನವಿ ಮಾಡಲಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ