AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಬಿರುಗಾಳಿ ಸಹಿತ ಮಳೆಗೆ ಕೇವಲ 10 ದಿನಗಳ ಅಂತರದಲ್ಲೇ ಎರಡು ಬಲಿ; ಇಬ್ಬರಿಗೆ ಗಂಭೀರ ಗಾಯ

ಮಳೆಗಾಗಿ ಕಾದಿದ್ದ ಮಲೆನಾಡಿಗರಿಗೆ ವರುಣದೇವ ಕೃಪೆ ತೋರಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಆದ್ರೆ, ಮಳೆಗೂ ಮುನ್ನ ಆರಂಭವಾಗುವ ಭಾರೀ ಪ್ರಮಾಣದ ಗುಡುಗು, ಸಿಡಿಲು, ಬಿರುಗಾಳಿ ಜನರಲ್ಲಿ ಭಯ ಹುಟ್ಟಿಸಿದ್ದು. ಕೇವಲ 10 ದಿನಗಳ ಅಂತರದಲ್ಲಿ ಎರಡು ಬಲಿ ಪಡೆದಿದ್ರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿದ್ದಾರೆ. ಇದರಿಂದಾಗಿ ಮಲೆನಾಡಿಗರು ಆತಂಕಕ್ಕೊಳಗಾಗಿದ್ದಾರೆ. 

ಚಿಕ್ಕಮಗಳೂರು: ಬಿರುಗಾಳಿ ಸಹಿತ ಮಳೆಗೆ ಕೇವಲ 10 ದಿನಗಳ ಅಂತರದಲ್ಲೇ ಎರಡು ಬಲಿ; ಇಬ್ಬರಿಗೆ ಗಂಭೀರ ಗಾಯ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 23, 2024 | 9:06 PM

ಚಿಕ್ಕಮಗಳೂರು, ಏ.23: ಕಾಫಿನಾಡು ಚಿಕ್ಕಮಗಳೂರಿನ(Chikkamagaluru) ಮಲೆನಾಡಿಗರು ಇತಿಹಾಸದಲ್ಲೇ ಮೊದಲ ಬಾರಿಗೆ ಕಂಡೂ ಕೇಳರಿಯದಷ್ಟು ಪ್ರಮಾಣದಲ್ಲಿ ಏರಿಕೆಯಾಗಿದ್ದ ಬಿಸಿಲ ತಾಪದಿಂದ ಬೆಂದು ಬಸವಳಿದು ಹೋಗಿದ್ದರು. ಈ ಹಿನ್ನಲೆ ಮಲೆನಾಡಿಗರು ಕೆಲ ದಿನಗಳಿಂದ ದೇವರ ಪೂಜೆ, ಹೋಮ – ಹವನ ನಡೆಸುವ ಮೂಲಕ ವರುಣದೇವನ ಮೊರೆ ಹೋಗಿದ್ದು, ಮಲೆನಾಡಿಗರ ಪೂಜೆಯ ಫಲವೋ ಅಥವಾ ಪ್ರಕೃತಿ ಸೌಂದರ್ಯದ ಮೇಲಿನ ವ್ಯಾಮೋಹವೋ ಎಂಬಂತೆ ಕಳೆದೊಂದು ವಾರದಿಂದ ಸಂಜೆಯಾಗುತ್ತಿದ್ದಂತೆ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಮಲೆನಾಡಲ್ಲಿ ಬಿಸಿಲ ತಾಪ ಸ್ವಲ್ಪಮಟ್ಟಿಗೆ ಇಳಿಕೆಯಾಗಿದ್ದು, ಮಲೆನಾಡಿಗರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಆದ್ರೆ, ಮಳೆಗಾಲ ಆರಂಭಕ್ಕೂ ಮುನ್ನ ಈ ಬಾರಿ ಬಿರುಗಾಳಿ ಸಹಿತ ಮಳೆಗೆ ಇಬ್ಬರು ಬಲಿಯಾಗಿದ್ದು, ಮಲೆನಾಡು ಭಾಗ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಜನರು ಬಿರುಗಾಳಿ, ಗುಡುಗು ಮಿಂಚಿಗೆ ಕಂಗಾಲಾಗಿದ್ದಾರೆ.

ಮಲೆನಾಡಿಗರು ಮಳೆಗಾಗಿ ಕಾದು ಆಕಾಶವನ್ನು ಎದುರು ನೋಡುತ್ತಿದ್ದರು. ಇವರ ನಿರೀಕ್ಷೆಗೆ ತಕ್ಕಂತೆ ಮಳೆರಾಯ ಎಂಟ್ರಿ ಕೊಟ್ಟಿದ್ದು, ಮಲೆನಾಡಿನ ತಾಪವನ್ನ ಸ್ವಲ್ಪ ಮಟ್ಟಿಗೆ ತಣಿಸಿದೆ. ಆದ್ರೆ, ಮಳೆಗೂ ಮುನ್ನ ಆರಂಭವಾಗುವ ಭಾರೀ ಪ್ರಮಾಣದ ಗುಡುಗು ಸಿಡಿಲು ಬಿರುಗಾಳಿ ಈಗಾಗಲೇ ಎರಡು ಜೀವಗಳನ್ನ ಬಲಿ ಪಡೆದುಕೊಂಡಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೌದು, ಕಳೆದ ಹತ್ತು ದಿನಗಳ ಹಿಂದೆ ನರಸಿಂಹರಾಜಪುರ ತಾಲೂಕಿನ ಅರಳಿಕೊಪ್ಪದ ನಿವಾಸಿ 48 ವರ್ಷದ ಶಂಕರ್ ತೋಟಕ್ಕೆಂದು ಹೋಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದರು.

ಇದನ್ನೂ ಓದಿ:ಅದೇ ಕಾಂಟ್ರಾಕ್ಟರ್…! ಅಂದು ಒಂದು ಸೇತುವೆ ಮಳೆಗೆ ಬಲಿ, ಇಂದು ಮತ್ತೊಂದು ಸೇತುವೆ ಗಾಳಿಗೆ ಬಲಿ

ಅಷ್ಟೇ ಅಲ್ಲದೇ ನಿನ್ನೆ(ಏ.22) ತರೀಕೆರೆ ತಾಲೂಕಿನ ಕಲ್ಲತ್ತಿಪುರಕ್ಕೆ ಹೋಗುತ್ತಿದ್ದ ವೇಳೆ ಭಾರೀ ಬಿರುಗಾಳಿಗೆ ಬೃಹತ್ ತೆಂಗಿನ ಮರ ಹಾಗೂ ವಿದ್ಯುತ್ ಕಂಬ ಮಾರುತಿ ಓಮ್ನಿ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು. ಕಾರಿನಲ್ಲಿದ್ದ ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದ ನಿವಾಸಿ ದೇವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಹನುಮಪ್ಪ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಇನ್ನು ಮೂಡಿಗೆರೆ ತಾಲೂಕಿನ ಬೆಟ್ಟಗೆರೆಯ ಗದ್ಗೋಡು ಗ್ರಾಮದ ಲಕ್ಷ್ಮಣ ಶೆಟ್ಟಿ ಎಂಬುವವರ ಮನೆಗೆ ಮಂಗಳವಾರ ರಾತ್ರಿ ಸಿಡಿಲು ಬಡಿದಿದ್ದು, ಲಕ್ಷ್ಮಣ ಶೆಟ್ಟಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಷ್ಟು ದಿನ ಮಳೆ ಇಲ್ಲದೇ ಇದ್ದರೂ ಕಷ್ಟಪಟ್ಟು ಬಿಸಿಲ ತಾಪವನ್ನ ತಡೆದುಕೊಂಡಿದ್ದ ಮಲೆನಾಡಿಗರು ಮಳೆಗಾಲ ಆರಂಭಕ್ಕೂ ಮುನ್ನವೇ ಸಂಭವಿಸುತ್ತಿರುವ ಈ ಪ್ರಾಣ ಹಾನಿಗಳನ್ನು ಕಂಡು ಗದ್ಗದಿತರಾಗಿದ್ದಾರೆ. ಒಟ್ಟಾರೆಯಾಗಿ ಮಳೆಯ ನಾಡು ಚಿಕ್ಕಮಗಳೂರಿನ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದರೂ ಕೂಡ ಗುಡುಗು, ಸಿಡಿಲು, ಬಿರುಗಾಳಿಯ ಅವಕೃಪೆಯಿಂದಾಗಿ ಉಂಟಾಗುತ್ತಿರುವ ಪ್ರಾಣ ಹಾನಿ ಹಾಗೂ ಗುಡುಗು ಸಿಡಿಲಿನ ಆರ್ಭಟಕ್ಕೆ ಮಲೆನಾಡಿಗರು ಅಕ್ಷಶಃ ಬೆಚ್ಚಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Tue, 23 April 24

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು