AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ದಾಖಲೆ ಪ್ರಮಾಣದ ಮಳೆ: 533 ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶ, ಆರೆಂಜ್ ಅಲರ್ಟ್

ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಊಹೆಗೂ ನಿಲುಕದೇ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಮುಂದುವರೆದಿದೆ.

ಚಿಕ್ಕಮಗಳೂರಿನಲ್ಲಿ ದಾಖಲೆ ಪ್ರಮಾಣದ ಮಳೆ: 533 ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶ, ಆರೆಂಜ್ ಅಲರ್ಟ್
ಚಿಕ್ಕಮಗಳೂರಿನಲ್ಲಿ ಮಳೆ
TV9 Web
| Updated By: ಆಯೇಷಾ ಬಾನು|

Updated on: Jul 15, 2022 | 9:16 PM

Share

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗ್ತಿದೆ. ಜಿಲ್ಲೆಯ ವಾಡಿಕೆ ಮಳೆ 762.7 ಮಿಲಿ ಮೀಟರ್ ನಷ್ಟಿದ್ದು, ಸದ್ಯ 1157.7 ಮಿಲಿ ಮೀಟರ್ ಮಳೆಯಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದೇವರಮನೆಯಲ್ಲಿ ದಾಖಲೆ ಪ್ರಮಾಣದಲ್ಲಿ 375 ಮಿಲಿ ಮೀಟರ್ ಮಳೆ ಒಂದೇ ದಿನದಲ್ಲಿ ದಾಖಲಾಗಿದೆ. ಶೃಂಗೇರಿ ತಾಲೂಕಿನಲ್ಲೂ ಕೂಡ ಬಿಡದೆ ಮಳೆ ಸುರಿಯುತ್ತಿದ್ದು ಜನರು ಆತಂಕಗೊಂಡಿದ್ದಾರೆ.

ಮಳೆಗೆ ಕೊಚ್ಚಿ ಹೋದ ಹೆದ್ದಾರಿ

ಶೃಂಗೇರಿ-ಆಗುಂಬೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಕೊಚ್ಚಿ ಹೋಗಿದೆ. ಸುಮಾರು 200 ಮೀಟರ್ ಉದ್ದ, 500 ಮೀಟರ್ ರಸ್ತೆ ಹಾಳಾಗಿದ್ದು, ಬೃಹತ್ ಮರಗಳು ಧರಶಾಹಿಯಾಗಿವೆ. 2019ರ ಜಲಪ್ರಳಯವನ್ನ ಮೀರಿಸುವ ರೀತಿಯಲ್ಲಿ ಅನಾಹುತ ಸಂಭವಿಸಿದ್ದು ಶೃಂಗೇರಿ ಜನತೆ ಬೆಚ್ಚಿಬಿದ್ದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 290 ಮನೆಗಳು ಮಳೆಯ ಹೊಡೆತಕ್ಕೆ ಕುಸಿದು ಬಿದ್ದಿವೆ. ಕಳೆದ 24 ಗಂಟೆಯಲ್ಲೇ ಬರೋಬ್ಬರಿ 48 ಮನೆಗಳು ಕೊಚ್ಚಿ ಹೋಗಿವೆ. ಶೃಂಗೇರಿಯಲ್ಲಿ ಗುಡ್ಡವೇ ಸ್ಫೋಟವಾಗಿ ಸಾಹಿತಿ ಗಣೇಶ್ ಹೆಗ್ಡೆ ಎಂಬುವರ ಮನೆಗೆ ಹಾನಿಯಾಗಿದ್ದು, 24 ಗಂಟೆ ಕಳೆದರೂ ಮನೆ ಒಳಗೆ ಕೆಸರಿನ ರಾಡಿ ಹೊಳೆಯಂತೆ ಹರಿಯುತ್ತಿರುವುದು ಮಳೆಯ ಭೀಕರತೆಗೆ ಸಾಕ್ಷಿಯಾಗಿದೆ.

ಕಾಫಿನಾಡಲ್ಲಿ 533 ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶ

ಕಳೆದ 24 ಗಂಟೆಯಲ್ಲಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಕಾಫಿ, ಅಡಿಕೆ, ಮೆಣಸು ಬೆಳೆ ಮಳೆಗೆ ಆಹುತಿಯಾಗಿದೆ. 533 ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶವಾಗಿದೆ. ಇದಿಷ್ಟೇ ಅಲ್ಲದೇ ಜಿಲ್ಲೆಯ ಹಲವೆಡೆ ಭೂ ಕುಸಿತ, ಗುಡ್ಡ ಕುಸಿತ ಘಟನೆಗಳು ಸಂಭವಿಸಿದ್ದು, ಜನರು ಮನೆ ಬಿಟ್ಟು ಹೊರಗಡೆ ಬರಲು ಹೆದರುವಂತಾಗಿದೆ.

ಜಿಲ್ಲೆಯಲ್ಲಿ ಒಟ್ಟು 550ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ತಾಲೂಕಿನ ನೂರಾರು ಗ್ರಾಮಗಳು ಕಗ್ಗತ್ತಲಿನಲ್ಲಿ ಮುಳುಗಿವೆ. ನೂರಾರು ಕಿಲೋಮೀಟರ್ ಲೋಕೋಪಯೋಗಿ ರಸ್ತೆ ಡ್ಯಾಮೇಜ್ ಆಗಿದೆ, 20 ಕಡೆ ಸೇತುವೆಗಳು ಕುಸಿದಿವೆ. ಗ್ರಾಮೀಣ ಭಾಗದ ಅನೇಕ ಕಡೆಗಳಲ್ಲಿ ರಸ್ತೆಗಳೇ ಕೊಚ್ಚಿ ಹೋಗಿದ್ದು, ಗ್ರಾಮ ಗ್ರಾಮಗಳ ನಡುವಿನ ಸಂಪರ್ಕವೇ ಕಡಿತಗೊಂಡಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಿಲ್ಲೆಯಾದ್ಯಂತ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೊರಡಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.

ಶಿರಾಡಿ ಘಾಟ್ನಲ್ಲಿ ವಾಹನ ಸಂಚಾರಕ್ಕೆ ಕಂಪ್ಲೀಟ್ ಬ್ರೇಕ್ ಬಿದ್ದಿರುವುದರಿಂದ ಸಾವಿರಾರು ವಾಹನಗಳು ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸುತ್ತಿವೆ. ಚಾರ್ಮಾಡಿ ಘಾಟ್ ನಲ್ಲೂ ಕೂಡ ಹಲವೆಡೆ ರಸ್ತೆ, ಗುಡ್ಡ ಕುಸಿಯುವ ಭೀತಿ ಎದುರಾಗಿರುವುದರಿಂದ ಈ ಭಾಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ. ಅಲ್ಲದೇ ಈಗಾಗಲೇ 2019ರಲ್ಲಿ ಸುರಿದ ಮಹಾಮಳೆಯಿಂದ ಚಾರ್ಮಾಡಿ ಘಾಟ್ ಕೂಡ ನಲುಗಿ ಹೋಗಿದ್ದು, ತನ್ನ ಸಾಮರ್ಥ್ಯವನ್ನ ಕಳೆದುಕೊಂಡಿದೆ. ಈ ಮಾರ್ಗದಲ್ಲಿ ಒಂದೇ ಸಮನೆ ವಾಹನ ಸಂಚಾರ ಹೆಚ್ಚಾದರೆ ಚಾರ್ಮಾಡಿ ಘಾಟ್ ಮೇಲೆ ಮತ್ತಷ್ಟು ಒತ್ತಡ ಬೀಳಲಿದ್ದು, ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಏಕೈಕ ಮಾರ್ಗಕ್ಕೂ ಗಂಡಾಂತರ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ನಾಳೆ ಆರೆಂಜ್ ಅಲರ್ಟ್

ನಾಳೆ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಊಹೆಗೂ ನಿಲುಕದೇ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಮುಂದುವರೆದಿದೆ. ಒಟ್ಟಿನಲ್ಲಿ ಕಾಫಿನಾಡಿನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಜನರು ಮನೆ ಬಿಟ್ಟು ಹೊರಗಡೆ ಬರುವುದಕ್ಕೂ ಯೋಚನೆ ಮಾಡುವಂತಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ